AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ ತಾಳಲಾರದೆ ಟೆರೇಸಿನಿಂದ ಹಾರಿದ ಮೇಲೂ ಥಳಿಸಿದ ಅತ್ತೆ-ಮಾವ!

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳದಿಂದ ಮಹಿಳೆಯೊಬ್ಬರು ಟೆರೇಸಿನಿಂದ ಜಿಗಿದ ನಂತರವೂ ಅವರ ಮೇಲೆ ಅತ್ತೆ-ಮಾವ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿದೆ. ಬಿದ್ದು ಗಾಯಗೊಂಡಿರುವ ಆ ಮಹಿಳೆಯ ದೂರಿನ ಆಧಾರದ ಮೇಲೆ ಆಕೆಯ ಅತ್ತೆ-ಮಾವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವರದಕ್ಷಿಣೆ ಕಿರುಕುಳ ತಾಳಲಾರದೆ ಟೆರೇಸಿನಿಂದ ಹಾರಿದ ಮೇಲೂ ಥಳಿಸಿದ ಅತ್ತೆ-ಮಾವ!
Dowry
ಸುಷ್ಮಾ ಚಕ್ರೆ
|

Updated on:Sep 03, 2025 | 3:56 PM

Share

ಅಲಿಗಢ, ಸೆಪ್ಟೆಂಬರ್ 3: ಉತ್ತರ ಪ್ರದೇಶದ ಅಲಿಗಢ (Aligarh) ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ (Viral Video) ಹೊರಬಿದ್ದಿದ್ದು, ಗಾಯಗೊಂಡ ಮಹಿಳೆ ತನ್ನ 2 ಅಂತಸ್ತಿನ ಮನೆಯ ಟೆರೇಸಿನಿಂದ ಜಿಗಿದ ನಂತರ ಆಕೆಯ ಮಾವಂದಿರು ಆಕೆಯನ್ನು ಥಳಿಸುತ್ತಿರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಅಲಿಗಢ ಜಿಲ್ಲೆಯ ಇಗ್ಲಾಸ್ ತೆಹಸಿಲ್ ಅಡಿಯಲ್ಲಿನ ದಮ್ಕೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.

ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆಯಲ್ಲಿ, ಒಬ್ಬರು ಮಹಿಳೆ ಮನೆಯ ಟೆರೇಸಿನ ಅಂಚಿನಲ್ಲಿ ನಿಂತಿರುವುದನ್ನು ನೋಡಬಹುದು. ಆಗ ಕೆಳಗೆ ನಿಂತಿದ್ದ ಆಕೆಯ ಅತ್ತೆ-ಮಾವಂದಿರು ಪದೇ ಪದೇ ಕೆಳಗೆ ಹಾರುವಂತೆ ಆಕೆಯನ್ನು ಒತ್ತಾಯಿಸಿದ್ದಾರೆ. ಆಗ ಅರ್ಚನಾ ಎಂಬ ಆ ಮಹಿಳೆ 2 ಅಂತಸ್ತಿನ ಟೆರೇಸಿನಿಂದ ಕೆಳಗೆ ಹಾರಿದ್ದಾರೆ. ಗಾಯಗೊಂಡು ಬಿದ್ದ ಆಕೆಯನ್ನು ಮತ್ತೆ ಥಳಿಸಿರುವ ಅತ್ತೆ-ಮಾವ ಆಕೆಯನ್ನು ನೆಲಕ್ಕೆ ಹಾಕಿ ಕಾಲಿನಿಂದ ಒದ್ದಿದ್ದಾರೆ. ವರದಕ್ಷಿಣೆಗಾಗಿ ಆಕೆಗೆ ಈ ರೀತಿ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳ, ಮಹಿಳೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ-ಮಾವ

ಆ ಮಹಿಳೆ ನೆಲಕ್ಕೆ ಡಿಕ್ಕಿ ಹೊಡೆದ ನಂತರ ಆಕೆಯ ಅತ್ತೆ-ಮಾವ ಪ್ರಜ್ಞೆ ತಪ್ಪಿದ ಅರ್ಚನಾ ಕಡೆಗೆ ಧಾವಿಸಿ ಅವರನ್ನು ಹೊಡೆಯಲು ಪ್ರಾರಂಭಿಸಿದರು. ಈ ಘಟನೆಯನ್ನು ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಿದ ವ್ಯಕ್ತಿಯೊಬ್ಬರು “ಮರ್ ಜಾನೆ ದೋ” (ಅವಳು ಸಾಯಲಿ) ಎಂದು ಹೇಳುವುದನ್ನು ಕೇಳಬಹುದು. ಅಮ್ಮ ಮೇಲಿಂದ ಕೆಳಗೆ ಬಿದ್ದಿದ್ದನ್ನು ನೋಡಿದ ಅರ್ಚನಾಳ ಮಗು ಜೋರಾಗಿ ಅಳುತ್ತಾ ಅಮ್ಮನತ್ತ ಓಡಿಬರುತ್ತಿರುವುದನ್ನು ಕೂಡ ನೋಡಬಹುದು.

ಇದನ್ನೂ ಓದಿ: ಮತ್ತೊಂದು ವರದಕ್ಷಿಣೆ ಕಿರುಕುಳ ಪ್ರಕರಣ, ಮದುವೆಯಾದ ನಾಲ್ಕನೇ ದಿನದಿಂದಲೇ ಹಿಂಸೆ ಶುರು ಎನ್ನುವ ಯುವತಿ

ವರದಿಗಳ ಪ್ರಕಾರ, ಅರ್ಚನಾ 6 ವರ್ಷಗಳ ಹಿಂದೆ ಸೋನು ಅವರನ್ನು ವಿವಾಹವಾದರು. ಅರ್ಚನಾ ಅವರ ಕುಟುಂಬವು ಮಗಳ ವಿವಾಹದ ಸಮಯದಲ್ಲಿ 10 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿತ್ತು. ಇದರ ಹೊರತಾಗಿಯೂ, ಅವರ ಅತ್ತೆ-ಮಾವ ಬುಲೆಟ್ ಬೈಕ್ ಮತ್ತು 5 ಲಕ್ಷ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಅರ್ಚನಾಗೆ 4 ಮತ್ತು 2 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಆಕೆ ನೀಡಿದ ದೂರಿನ ಆಧಾರದ ಮೇಲೆ, ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:55 pm, Wed, 3 September 25

Follow Us
ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್
ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ