AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು

ಗ್ವಾಲಿಯರ್​​ನ ಕುಟುಂಬಕ್ಕೆ ಆಕಸ್ಮಿಕವಾಗಿ 1 ತಿಂಗಳಿಗೆ 34,19,53,25,293 ರೂ. ವಿದ್ಯುತ್ ಬಿಲ್ ಬಂದಿದೆ. ಈ ಬಿಲ್ ನೋಡಿ ಆಘಾತಗೊಂಡು ಕುಸಿದುಬಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು
ಸಾಂದರ್ಭಿಕ ಚಿತ್ರImage Credit source: Hindustan Times
TV9 Web
| Updated By: ಸುಷ್ಮಾ ಚಕ್ರೆ|

Updated on: Jul 27, 2022 | 10:53 AM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್​ನಲ್ಲಿರುವ ಕುಟುಂಬವೊಂದಕ್ಕೆ ತಿಂಗಳಿಗೆ 3,400 ಕೋಟಿ ರೂ. ವಿದ್ಯುತ್ ಬಿಲ್ (Electricity Bill) ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ವಿದ್ಯುತ್ ಇಲಾಖೆ ನೌಕರನನ್ನು ವಜಾಗೊಳಿಸಲಾಗಿದ್ದು, ಮತ್ತೊಬ್ಬನನ್ನು ಅಮಾನತು ಮಾಡಲಾಗಿದೆ. ಗ್ವಾಲಿಯರ್‌ನ ಶಿವ ವಿಹಾರ್ ಕಾಲೋನಿಯಲ್ಲಿನ ಕುಟುಂಬದ ಮೂವರು ಸದಸ್ಯರು ತಮ್ಮ ವಿದ್ಯುತ್ ಬಿಲ್ ರಶೀದಿ ಪಡೆದ ನಂತರ ಆಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಹೇಳಿದ್ದಾರೆ.

ಗ್ವಾಲಿಯರ್​​ನ ಕುಟುಂಬಕ್ಕೆ ಆಕಸ್ಮಿಕವಾಗಿ 1 ತಿಂಗಳಿಗೆ 34,19,53,25,293 ರೂ. ವಿದ್ಯುತ್ ಬಿಲ್ ಬಂದಿದೆ. ಈ ಬಿಲ್ ನೋಡಿ ಆಘಾತಗೊಂಡು ಕುಸಿದುಬಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಿಯಾಂಕಾ ಗುಪ್ತಾ, ಅವರ ತಂದೆ ರಾಜೇಂದ್ರ ಪ್ರಸಾದ್ ಗುಪ್ತಾ ಮತ್ತು ಅವರ ತಾಯಿ ಆಘಾತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ವಿದ್ಯುತ್ ಇಲಾಖೆ ಸಿಬ್ಬಂದಿಯ ಎಡವಟ್ಟಿನಿಂದ ಪ್ರಿಯಾಂಕಾ ಗುಪ್ತಾ ಅವರ ಅತ್ತೆ ಮತ್ತು ಮಾವನ ರಕ್ತದೊತ್ತಡವೂ ಹೆಚ್ಚಾಗಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇನ್ನೆರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಪವರ್ ಕಟ್

ಈ ಕುರಿತು ತ್ವರಿತ ತನಿಖೆಗೆ ಆದೇಶಿಸಿರುವ ಸಚಿವರು, ವಿದ್ಯುತ್ ಇಲಾಖೆಯ ಉದ್ಯೋಗಿಯೊಬ್ಬರು ವ್ಯವಸ್ಥೆಯಲ್ಲಿನ ವಿದ್ಯುತ್ ಬಳಕೆಯ ಬದಲು ವಿದ್ಯುತ್ ಗ್ರಾಹಕರ ಸಂಖ್ಯೆಯನ್ನು ನಮೂದಿಸಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಹೊಸ ಬಿಲ್ ನೀಡಲಾಗಿದ್ದು, ಆ ಮನೆಗೆ 1,300 ರೂ. ಕರೆಂಟ್ ಬಿಲ್ ಬಂದಿದೆ. ಈ ರೀತಿಯ ಎಡವಟ್ಟು ಮಾಡಿದ ಒಬ್ಬ ನೌಕರನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಮತ್ತು ಇನ್ನೊಬ್ಬರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಸಂಬಂಧಪಟ್ಟ ಜೂನಿಯರ್ ಇಂಜಿನಿಯರ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?