AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು

ಗ್ವಾಲಿಯರ್​​ನ ಕುಟುಂಬಕ್ಕೆ ಆಕಸ್ಮಿಕವಾಗಿ 1 ತಿಂಗಳಿಗೆ 34,19,53,25,293 ರೂ. ವಿದ್ಯುತ್ ಬಿಲ್ ಬಂದಿದೆ. ಈ ಬಿಲ್ ನೋಡಿ ಆಘಾತಗೊಂಡು ಕುಸಿದುಬಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು
ಸಾಂದರ್ಭಿಕ ಚಿತ್ರImage Credit source: Hindustan Times
TV9 Web
| Edited By: |

Updated on: Jul 27, 2022 | 10:53 AM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್​ನಲ್ಲಿರುವ ಕುಟುಂಬವೊಂದಕ್ಕೆ ತಿಂಗಳಿಗೆ 3,400 ಕೋಟಿ ರೂ. ವಿದ್ಯುತ್ ಬಿಲ್ (Electricity Bill) ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ವಿದ್ಯುತ್ ಇಲಾಖೆ ನೌಕರನನ್ನು ವಜಾಗೊಳಿಸಲಾಗಿದ್ದು, ಮತ್ತೊಬ್ಬನನ್ನು ಅಮಾನತು ಮಾಡಲಾಗಿದೆ. ಗ್ವಾಲಿಯರ್‌ನ ಶಿವ ವಿಹಾರ್ ಕಾಲೋನಿಯಲ್ಲಿನ ಕುಟುಂಬದ ಮೂವರು ಸದಸ್ಯರು ತಮ್ಮ ವಿದ್ಯುತ್ ಬಿಲ್ ರಶೀದಿ ಪಡೆದ ನಂತರ ಆಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಹೇಳಿದ್ದಾರೆ.

ಗ್ವಾಲಿಯರ್​​ನ ಕುಟುಂಬಕ್ಕೆ ಆಕಸ್ಮಿಕವಾಗಿ 1 ತಿಂಗಳಿಗೆ 34,19,53,25,293 ರೂ. ವಿದ್ಯುತ್ ಬಿಲ್ ಬಂದಿದೆ. ಈ ಬಿಲ್ ನೋಡಿ ಆಘಾತಗೊಂಡು ಕುಸಿದುಬಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಿಯಾಂಕಾ ಗುಪ್ತಾ, ಅವರ ತಂದೆ ರಾಜೇಂದ್ರ ಪ್ರಸಾದ್ ಗುಪ್ತಾ ಮತ್ತು ಅವರ ತಾಯಿ ಆಘಾತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ವಿದ್ಯುತ್ ಇಲಾಖೆ ಸಿಬ್ಬಂದಿಯ ಎಡವಟ್ಟಿನಿಂದ ಪ್ರಿಯಾಂಕಾ ಗುಪ್ತಾ ಅವರ ಅತ್ತೆ ಮತ್ತು ಮಾವನ ರಕ್ತದೊತ್ತಡವೂ ಹೆಚ್ಚಾಗಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇನ್ನೆರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಪವರ್ ಕಟ್

ಈ ಕುರಿತು ತ್ವರಿತ ತನಿಖೆಗೆ ಆದೇಶಿಸಿರುವ ಸಚಿವರು, ವಿದ್ಯುತ್ ಇಲಾಖೆಯ ಉದ್ಯೋಗಿಯೊಬ್ಬರು ವ್ಯವಸ್ಥೆಯಲ್ಲಿನ ವಿದ್ಯುತ್ ಬಳಕೆಯ ಬದಲು ವಿದ್ಯುತ್ ಗ್ರಾಹಕರ ಸಂಖ್ಯೆಯನ್ನು ನಮೂದಿಸಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಹೊಸ ಬಿಲ್ ನೀಡಲಾಗಿದ್ದು, ಆ ಮನೆಗೆ 1,300 ರೂ. ಕರೆಂಟ್ ಬಿಲ್ ಬಂದಿದೆ. ಈ ರೀತಿಯ ಎಡವಟ್ಟು ಮಾಡಿದ ಒಬ್ಬ ನೌಕರನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಮತ್ತು ಇನ್ನೊಬ್ಬರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಸಂಬಂಧಪಟ್ಟ ಜೂನಿಯರ್ ಇಂಜಿನಿಯರ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ