AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು

ಗ್ವಾಲಿಯರ್​​ನ ಕುಟುಂಬಕ್ಕೆ ಆಕಸ್ಮಿಕವಾಗಿ 1 ತಿಂಗಳಿಗೆ 34,19,53,25,293 ರೂ. ವಿದ್ಯುತ್ ಬಿಲ್ ಬಂದಿದೆ. ಈ ಬಿಲ್ ನೋಡಿ ಆಘಾತಗೊಂಡು ಕುಸಿದುಬಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು
ಸಾಂದರ್ಭಿಕ ಚಿತ್ರImage Credit source: Hindustan Times
TV9 Web
| Edited By: |

Updated on: Jul 27, 2022 | 10:53 AM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್​ನಲ್ಲಿರುವ ಕುಟುಂಬವೊಂದಕ್ಕೆ ತಿಂಗಳಿಗೆ 3,400 ಕೋಟಿ ರೂ. ವಿದ್ಯುತ್ ಬಿಲ್ (Electricity Bill) ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ವಿದ್ಯುತ್ ಇಲಾಖೆ ನೌಕರನನ್ನು ವಜಾಗೊಳಿಸಲಾಗಿದ್ದು, ಮತ್ತೊಬ್ಬನನ್ನು ಅಮಾನತು ಮಾಡಲಾಗಿದೆ. ಗ್ವಾಲಿಯರ್‌ನ ಶಿವ ವಿಹಾರ್ ಕಾಲೋನಿಯಲ್ಲಿನ ಕುಟುಂಬದ ಮೂವರು ಸದಸ್ಯರು ತಮ್ಮ ವಿದ್ಯುತ್ ಬಿಲ್ ರಶೀದಿ ಪಡೆದ ನಂತರ ಆಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಹೇಳಿದ್ದಾರೆ.

ಗ್ವಾಲಿಯರ್​​ನ ಕುಟುಂಬಕ್ಕೆ ಆಕಸ್ಮಿಕವಾಗಿ 1 ತಿಂಗಳಿಗೆ 34,19,53,25,293 ರೂ. ವಿದ್ಯುತ್ ಬಿಲ್ ಬಂದಿದೆ. ಈ ಬಿಲ್ ನೋಡಿ ಆಘಾತಗೊಂಡು ಕುಸಿದುಬಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಿಯಾಂಕಾ ಗುಪ್ತಾ, ಅವರ ತಂದೆ ರಾಜೇಂದ್ರ ಪ್ರಸಾದ್ ಗುಪ್ತಾ ಮತ್ತು ಅವರ ತಾಯಿ ಆಘಾತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ವಿದ್ಯುತ್ ಇಲಾಖೆ ಸಿಬ್ಬಂದಿಯ ಎಡವಟ್ಟಿನಿಂದ ಪ್ರಿಯಾಂಕಾ ಗುಪ್ತಾ ಅವರ ಅತ್ತೆ ಮತ್ತು ಮಾವನ ರಕ್ತದೊತ್ತಡವೂ ಹೆಚ್ಚಾಗಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇನ್ನೆರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಪವರ್ ಕಟ್

ಈ ಕುರಿತು ತ್ವರಿತ ತನಿಖೆಗೆ ಆದೇಶಿಸಿರುವ ಸಚಿವರು, ವಿದ್ಯುತ್ ಇಲಾಖೆಯ ಉದ್ಯೋಗಿಯೊಬ್ಬರು ವ್ಯವಸ್ಥೆಯಲ್ಲಿನ ವಿದ್ಯುತ್ ಬಳಕೆಯ ಬದಲು ವಿದ್ಯುತ್ ಗ್ರಾಹಕರ ಸಂಖ್ಯೆಯನ್ನು ನಮೂದಿಸಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಹೊಸ ಬಿಲ್ ನೀಡಲಾಗಿದ್ದು, ಆ ಮನೆಗೆ 1,300 ರೂ. ಕರೆಂಟ್ ಬಿಲ್ ಬಂದಿದೆ. ಈ ರೀತಿಯ ಎಡವಟ್ಟು ಮಾಡಿದ ಒಬ್ಬ ನೌಕರನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಮತ್ತು ಇನ್ನೊಬ್ಬರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಸಂಬಂಧಪಟ್ಟ ಜೂನಿಯರ್ ಇಂಜಿನಿಯರ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ