AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು

ಗ್ವಾಲಿಯರ್​​ನ ಕುಟುಂಬಕ್ಕೆ ಆಕಸ್ಮಿಕವಾಗಿ 1 ತಿಂಗಳಿಗೆ 34,19,53,25,293 ರೂ. ವಿದ್ಯುತ್ ಬಿಲ್ ಬಂದಿದೆ. ಈ ಬಿಲ್ ನೋಡಿ ಆಘಾತಗೊಂಡು ಕುಸಿದುಬಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು
ಸಾಂದರ್ಭಿಕ ಚಿತ್ರImage Credit source: Hindustan Times
TV9 Web
| Edited By: |

Updated on: Jul 27, 2022 | 10:53 AM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್​ನಲ್ಲಿರುವ ಕುಟುಂಬವೊಂದಕ್ಕೆ ತಿಂಗಳಿಗೆ 3,400 ಕೋಟಿ ರೂ. ವಿದ್ಯುತ್ ಬಿಲ್ (Electricity Bill) ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ವಿದ್ಯುತ್ ಇಲಾಖೆ ನೌಕರನನ್ನು ವಜಾಗೊಳಿಸಲಾಗಿದ್ದು, ಮತ್ತೊಬ್ಬನನ್ನು ಅಮಾನತು ಮಾಡಲಾಗಿದೆ. ಗ್ವಾಲಿಯರ್‌ನ ಶಿವ ವಿಹಾರ್ ಕಾಲೋನಿಯಲ್ಲಿನ ಕುಟುಂಬದ ಮೂವರು ಸದಸ್ಯರು ತಮ್ಮ ವಿದ್ಯುತ್ ಬಿಲ್ ರಶೀದಿ ಪಡೆದ ನಂತರ ಆಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಹೇಳಿದ್ದಾರೆ.

ಗ್ವಾಲಿಯರ್​​ನ ಕುಟುಂಬಕ್ಕೆ ಆಕಸ್ಮಿಕವಾಗಿ 1 ತಿಂಗಳಿಗೆ 34,19,53,25,293 ರೂ. ವಿದ್ಯುತ್ ಬಿಲ್ ಬಂದಿದೆ. ಈ ಬಿಲ್ ನೋಡಿ ಆಘಾತಗೊಂಡು ಕುಸಿದುಬಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಿಯಾಂಕಾ ಗುಪ್ತಾ, ಅವರ ತಂದೆ ರಾಜೇಂದ್ರ ಪ್ರಸಾದ್ ಗುಪ್ತಾ ಮತ್ತು ಅವರ ತಾಯಿ ಆಘಾತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ವಿದ್ಯುತ್ ಇಲಾಖೆ ಸಿಬ್ಬಂದಿಯ ಎಡವಟ್ಟಿನಿಂದ ಪ್ರಿಯಾಂಕಾ ಗುಪ್ತಾ ಅವರ ಅತ್ತೆ ಮತ್ತು ಮಾವನ ರಕ್ತದೊತ್ತಡವೂ ಹೆಚ್ಚಾಗಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇನ್ನೆರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಪವರ್ ಕಟ್

ಈ ಕುರಿತು ತ್ವರಿತ ತನಿಖೆಗೆ ಆದೇಶಿಸಿರುವ ಸಚಿವರು, ವಿದ್ಯುತ್ ಇಲಾಖೆಯ ಉದ್ಯೋಗಿಯೊಬ್ಬರು ವ್ಯವಸ್ಥೆಯಲ್ಲಿನ ವಿದ್ಯುತ್ ಬಳಕೆಯ ಬದಲು ವಿದ್ಯುತ್ ಗ್ರಾಹಕರ ಸಂಖ್ಯೆಯನ್ನು ನಮೂದಿಸಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಹೊಸ ಬಿಲ್ ನೀಡಲಾಗಿದ್ದು, ಆ ಮನೆಗೆ 1,300 ರೂ. ಕರೆಂಟ್ ಬಿಲ್ ಬಂದಿದೆ. ಈ ರೀತಿಯ ಎಡವಟ್ಟು ಮಾಡಿದ ಒಬ್ಬ ನೌಕರನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಮತ್ತು ಇನ್ನೊಬ್ಬರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಸಂಬಂಧಪಟ್ಟ ಜೂನಿಯರ್ ಇಂಜಿನಿಯರ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ