AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಆರೇ ತಿಂಗಳಲ್ಲಿ ನೌಕಾಧಿಕಾರಿಯ ಹೆಂಡತಿ ಸಾವು; ಅಷ್ಟಕ್ಕೂ ಆಗಿದ್ದೇನು?

ಮದುವೆಯಾದ 6 ತಿಂಗಳ ನಂತರ ನೌಕಾದಳದ ಅಧಿಕಾರಿಯ ಪತ್ನಿ ಲಕ್ನೋದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ತಂದೆ ಆರೋಪ ಮಾಡಿದ್ದಾರೆ. ಲಕ್ನೋದ ಸುಶಾಂತ್ ಗಾಲ್ಫ್ ಸಿಟಿಯಲ್ಲಿನ ಈ ಮಹಿಳೆಯ ಸಾವು ಆಕ್ರೋಶ ಮತ್ತು ಅನುಮಾನವನ್ನು ಹುಟ್ಟುಹಾಕಿದೆ.

ಮದುವೆಯಾದ ಆರೇ ತಿಂಗಳಲ್ಲಿ ನೌಕಾಧಿಕಾರಿಯ ಹೆಂಡತಿ ಸಾವು; ಅಷ್ಟಕ್ಕೂ ಆಗಿದ್ದೇನು?
Navy Officer Wife Found Dead
ಸುಷ್ಮಾ ಚಕ್ರೆ
|

Updated on:Aug 06, 2025 | 4:35 PM

Share

ನವದೆಹಲಿ, ಆಗಸ್ಟ್ 6: ಮರ್ಚೆಂಟ್ ನೌಕಾ ಅಧಿಕಾರಿಯೊಂದಿಗಿನ ವಿವಾಹವಾದ ಕೇವಲ 6 ತಿಂಗಳ ನಂತರ ಕಳೆದ ಭಾನುವಾರ ರಾತ್ರಿ ಲಕ್ನೋದ (Lucknow) ಸುಶಾಂತ್ ಗಾಲ್ಫ್ ಸಿಟಿಯಲ್ಲಿರುವ ತನ್ನದೇ ಮನೆಯಲ್ಲಿ 26 ವರ್ಷದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮಧು ಸಿಂಗ್ ಎಂಬ ಮಹಿಳೆ ಓಮ್ಯಾಕ್ಸ್ ವಾಟರ್‌ಸ್ಕೇಪ್ಸ್ ಸಂಕೀರ್ಣದಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರ್ಚೆಂಟ್ ನೇವಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಅವರ ಪತಿ ಅನುರಾಗ್ ಸಿಂಗ್ ಇತ್ತೀಚೆಗೆ ಸುಮಾರು 10 ದಿನಗಳ ಹಿಂದೆ ರಜೆಯ ಮೇಲೆ ಮನೆಗೆ ಮರಳಿದ್ದರು. ಪೊಲೀಸರ ಪ್ರಕಾರ, ಭಾನುವಾರ ರಾತ್ರಿ ದಂಪತಿಯ ನಡುವೆ ಜಗಳ ನಡೆದಿದ್ದು, ನಂತರ ಮಧು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಆ ಮಹಿಳೆಯ ಕುಟುಂಬದವರು ನನ್ನ ಮಗಳ ಮೇಲೆ ಕಿರುಕುಳ ನಡೆಸಿದ್ದಾರೆ. ಅನುರಾಗ್ ಸಿಂಗ್ ಮಧುವನ್ನು ಕೊಂದು ಆತ್ಮಹತ್ಯೆ ಎಂದು ಚಿತ್ರೀಕರಿಸಿದ್ದಾರೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಬಾಲಕನ ಕಿಡ್ನ್ಯಾಪ್-ಕೊಲೆ ಕೇಸ್​: ಕೊನೆಗೂ ರಿವೀಲ್​ ಆಯ್ತು ಹತ್ಯೆ ರಹಸ್ಯ!

“ನನ್ನ ಮಗಳನ್ನು ಕೊಲೆ ಮಾಡಿ ನಂತರ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಹಾಕಲಾಗಿದೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಅನುರಾಗ್ ಮನೆಯ ಕೆಲಸದಾಕೆಯ ಸಹಾಯದಿಂದ ಮಧುವಿನ ಮೃತದೇಹವನ್ನು ನೇಣಿನ ಕುಣಿಕೆಯಿಂದ ಹೊರತೆಗೆದ ನಂತರ ಯಾರಿಗೂ ತಿಳಿಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದರೂ ಸೋಮವಾರ ಮಧ್ಯಾಹ್ನದವರೆಗೆ ಅದನ್ನು ರಹಸ್ಯವಾಗಿಡಲಾಗಿತ್ತು ಎಂದು ಆರೋಪಿಸಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:34 pm, Wed, 6 August 25

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ