AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಲಿಫ್ಟ್​ನಲ್ಲಿ ಸಿಲುಕಿ ಶಾಲಾ ಮಕ್ಕಳ ಎದುರೇ 26 ವರ್ಷದ ಶಿಕ್ಷಕಿ ಸಾವು!

ಜಿನಾಲ್ ಫರ್ನಾಂಡಿಸ್ 6ನೇ ಮಹಡಿಯಲ್ಲಿ ಲಿಫ್ಟ್‌ನೊಳಗೆ ಪ್ರವೇಶಿಸಿದಾಗ ಲಿಫ್ಟ್ ಇದ್ದಕ್ಕಿದ್ದಂತೆ ಮೇಲಕ್ಕೆ ಚಲಿಸಲು ಪ್ರಾರಂಭಿಸಿತು. ಆದರೆ ಅವರ ಒಂದು ಕಾಲು ಲಿಫ್ಟ್‌ನೊಳಗೆ ಮತ್ತು ಅವರ ದೇಹವು ಹೊರಗೆ ಸಿಲುಕಿಕೊಂಡಿತ್ತು.

Shocking News: ಲಿಫ್ಟ್​ನಲ್ಲಿ ಸಿಲುಕಿ ಶಾಲಾ ಮಕ್ಕಳ ಎದುರೇ 26 ವರ್ಷದ ಶಿಕ್ಷಕಿ ಸಾವು!
ಲಿಫ್ಟ್‌
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 17, 2022 | 3:54 PM

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ (Mumbai) 26 ವರ್ಷದ ಶಿಕ್ಷಕಿಯೊಬ್ಬರು ಶಾಲೆಯ ಕಟ್ಟಡದ ಲಿಫ್ಟ್‌ನಲ್ಲಿ (Lift) ಸಿಲುಕಿ, ಗಾಯಗೊಂಡು ಸಾವನ್ನಪ್ಪಿದ್ದಾರೆ. ಮುಂಬೈನ ಮಲಾಡ್ ವೆಸ್ಟ್‌ನ ಎಸ್‌ವಿ ರಸ್ತೆಯಲ್ಲಿರುವ ಚಿಂಚಲಿ ಸಿಗ್ನಲ್ ಬಳಿಯ ಸೇಂಟ್ ಮೇರಿ ಇಂಗ್ಲಿಷ್ ಶಾಲೆಯಲ್ಲಿ ಮಧ್ಯಾಹ್ನ 1ರಿಂದ 2 ಗಂಟೆಯ ನಡುವೆ ಈ ಘಟನೆ ನಡೆದಿದೆ.

ಮೃತ ಶಿಕ್ಷಕಿಯನ್ನು ಜಿನಾಲ್ ಫರ್ನಾಂಡಿಸ್ ಎಂದು ಗುರುತಿಸಲಾಗಿದೆ. ಈ ವರ್ಷ ಜೂನ್‌ನಲ್ಲಿ ಅವರು ಶಾಲೆಗೆ ಸಹಾಯಕ ಶಿಕ್ಷಕಿಯಾಗಿ ಸೇರಿದ್ದರು. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಶಾಲೆಯ ಕಟ್ಟಡದ 6ನೇ ಮಹಡಿಯಲ್ಲಿ ಜಿನಾಲ್ ಫರ್ನಾಂಡಿಸ್ ತರಗತಿಯನ್ನು ಮುಗಿಸಿ ಆಫೀಸ್ ರೂಮಿಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅವರು 6ನೇ ಮಹಡಿಯಲ್ಲಿ ಲಿಫ್ಟ್‌ನೊಳಗೆ ಪ್ರವೇಶಿಸಿದಾಗ ಲಿಫ್ಟ್ ಇದ್ದಕ್ಕಿದ್ದಂತೆ ಮೇಲಕ್ಕೆ ಚಲಿಸಲು ಪ್ರಾರಂಭಿಸಿತು. ಆದರೆ ಅವರ ಒಂದು ಕಾಲು ಲಿಫ್ಟ್‌ನೊಳಗೆ ಮತ್ತು ಅವರ ದೇಹವು ಹೊರಗೆ ಸಿಲುಕಿಕೊಂಡಿತ್ತು. ಇದರಿಂದಾಗಿ ಅವರಿಗೆ ಗಂಭೀರ ಗಾಯಗಳಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Breaking News: ಅಹಮದಾಬಾದ್​ನಲ್ಲಿ ಕಟ್ಟಡದ ಲಿಫ್ಟ್​​ ಕುಸಿದು 7 ಕಾರ್ಮಿಕರು ದುರ್ಮರಣ, ಓರ್ವ ಗಂಭೀರ

ಒಂದು ಕಾಲನ್ನು ಲಿಫ್ಟ್​ನೊಳಗೆ ಇಡುತ್ತಿದ್ದಂತೆ ಲಿಫ್ಟ್​ ಮೇಲೆ ಹೋಗಲು ಆರಂಭಿಸಿದ್ದರಿಂದ ಅವರು ಸಹಾಯಕ್ಕಾಗಿ ಕೂಗಿಕೊಂಡಿದ್ದರು. ಅವರ ಕೂಗು ಕೇಳಿದ ಶಾಲಾ ಸಿಬ್ಬಂದಿ ಮತ್ತು ಮಕ್ಕಳು ಸಹಾಯ ಮಾಡಲು ಧಾವಿಸಿದರು. ಆದರೆ ಅಷ್ಟರಲ್ಲಿ ಲಿಫ್ಟ್​ ಮೇಲೆ ಹೋಗಿತ್ತು. ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜಿನಾಲ್ ಫರ್ನಾಂಡಿಸ್ ಅವರನ್ನು ಹೊರತೆಗೆದರು. ನಂತರ ಆಕೆಯನ್ನು ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿ ಅವರು ಮೃತಪಟ್ಟಿದ್ದಾರೆ.

ಈ ಘಟನೆಗೆ ಅಸಹಜ ಸಾವು ಕೇಸ್ ದಾಖಲಿಸಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಲೆಯ ಸಿಬ್ಬಂದಿ, ಆಡಳಿತ ಮಂಡಳಿ, ಲಿಫ್ಟ್ ನಿರ್ವಹಣೆ ನೋಡಿಕೊಳ್ಳುವ ಕಂಪನಿಯ ಹೇಳಿಕೆಗಳನ್ನು ದಾಖಲಿಸಿಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ