AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಲಿಫ್ಟ್​ನಲ್ಲಿ ಸಿಲುಕಿ ಶಾಲಾ ಮಕ್ಕಳ ಎದುರೇ 26 ವರ್ಷದ ಶಿಕ್ಷಕಿ ಸಾವು!

ಜಿನಾಲ್ ಫರ್ನಾಂಡಿಸ್ 6ನೇ ಮಹಡಿಯಲ್ಲಿ ಲಿಫ್ಟ್‌ನೊಳಗೆ ಪ್ರವೇಶಿಸಿದಾಗ ಲಿಫ್ಟ್ ಇದ್ದಕ್ಕಿದ್ದಂತೆ ಮೇಲಕ್ಕೆ ಚಲಿಸಲು ಪ್ರಾರಂಭಿಸಿತು. ಆದರೆ ಅವರ ಒಂದು ಕಾಲು ಲಿಫ್ಟ್‌ನೊಳಗೆ ಮತ್ತು ಅವರ ದೇಹವು ಹೊರಗೆ ಸಿಲುಕಿಕೊಂಡಿತ್ತು.

Shocking News: ಲಿಫ್ಟ್​ನಲ್ಲಿ ಸಿಲುಕಿ ಶಾಲಾ ಮಕ್ಕಳ ಎದುರೇ 26 ವರ್ಷದ ಶಿಕ್ಷಕಿ ಸಾವು!
ಲಿಫ್ಟ್‌
TV9 Web
| Edited By: |

Updated on: Sep 17, 2022 | 3:54 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ (Mumbai) 26 ವರ್ಷದ ಶಿಕ್ಷಕಿಯೊಬ್ಬರು ಶಾಲೆಯ ಕಟ್ಟಡದ ಲಿಫ್ಟ್‌ನಲ್ಲಿ (Lift) ಸಿಲುಕಿ, ಗಾಯಗೊಂಡು ಸಾವನ್ನಪ್ಪಿದ್ದಾರೆ. ಮುಂಬೈನ ಮಲಾಡ್ ವೆಸ್ಟ್‌ನ ಎಸ್‌ವಿ ರಸ್ತೆಯಲ್ಲಿರುವ ಚಿಂಚಲಿ ಸಿಗ್ನಲ್ ಬಳಿಯ ಸೇಂಟ್ ಮೇರಿ ಇಂಗ್ಲಿಷ್ ಶಾಲೆಯಲ್ಲಿ ಮಧ್ಯಾಹ್ನ 1ರಿಂದ 2 ಗಂಟೆಯ ನಡುವೆ ಈ ಘಟನೆ ನಡೆದಿದೆ.

ಮೃತ ಶಿಕ್ಷಕಿಯನ್ನು ಜಿನಾಲ್ ಫರ್ನಾಂಡಿಸ್ ಎಂದು ಗುರುತಿಸಲಾಗಿದೆ. ಈ ವರ್ಷ ಜೂನ್‌ನಲ್ಲಿ ಅವರು ಶಾಲೆಗೆ ಸಹಾಯಕ ಶಿಕ್ಷಕಿಯಾಗಿ ಸೇರಿದ್ದರು. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಶಾಲೆಯ ಕಟ್ಟಡದ 6ನೇ ಮಹಡಿಯಲ್ಲಿ ಜಿನಾಲ್ ಫರ್ನಾಂಡಿಸ್ ತರಗತಿಯನ್ನು ಮುಗಿಸಿ ಆಫೀಸ್ ರೂಮಿಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅವರು 6ನೇ ಮಹಡಿಯಲ್ಲಿ ಲಿಫ್ಟ್‌ನೊಳಗೆ ಪ್ರವೇಶಿಸಿದಾಗ ಲಿಫ್ಟ್ ಇದ್ದಕ್ಕಿದ್ದಂತೆ ಮೇಲಕ್ಕೆ ಚಲಿಸಲು ಪ್ರಾರಂಭಿಸಿತು. ಆದರೆ ಅವರ ಒಂದು ಕಾಲು ಲಿಫ್ಟ್‌ನೊಳಗೆ ಮತ್ತು ಅವರ ದೇಹವು ಹೊರಗೆ ಸಿಲುಕಿಕೊಂಡಿತ್ತು. ಇದರಿಂದಾಗಿ ಅವರಿಗೆ ಗಂಭೀರ ಗಾಯಗಳಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Breaking News: ಅಹಮದಾಬಾದ್​ನಲ್ಲಿ ಕಟ್ಟಡದ ಲಿಫ್ಟ್​​ ಕುಸಿದು 7 ಕಾರ್ಮಿಕರು ದುರ್ಮರಣ, ಓರ್ವ ಗಂಭೀರ

ಒಂದು ಕಾಲನ್ನು ಲಿಫ್ಟ್​ನೊಳಗೆ ಇಡುತ್ತಿದ್ದಂತೆ ಲಿಫ್ಟ್​ ಮೇಲೆ ಹೋಗಲು ಆರಂಭಿಸಿದ್ದರಿಂದ ಅವರು ಸಹಾಯಕ್ಕಾಗಿ ಕೂಗಿಕೊಂಡಿದ್ದರು. ಅವರ ಕೂಗು ಕೇಳಿದ ಶಾಲಾ ಸಿಬ್ಬಂದಿ ಮತ್ತು ಮಕ್ಕಳು ಸಹಾಯ ಮಾಡಲು ಧಾವಿಸಿದರು. ಆದರೆ ಅಷ್ಟರಲ್ಲಿ ಲಿಫ್ಟ್​ ಮೇಲೆ ಹೋಗಿತ್ತು. ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜಿನಾಲ್ ಫರ್ನಾಂಡಿಸ್ ಅವರನ್ನು ಹೊರತೆಗೆದರು. ನಂತರ ಆಕೆಯನ್ನು ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿ ಅವರು ಮೃತಪಟ್ಟಿದ್ದಾರೆ.

ಈ ಘಟನೆಗೆ ಅಸಹಜ ಸಾವು ಕೇಸ್ ದಾಖಲಿಸಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಲೆಯ ಸಿಬ್ಬಂದಿ, ಆಡಳಿತ ಮಂಡಳಿ, ಲಿಫ್ಟ್ ನಿರ್ವಹಣೆ ನೋಡಿಕೊಳ್ಳುವ ಕಂಪನಿಯ ಹೇಳಿಕೆಗಳನ್ನು ದಾಖಲಿಸಿಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್