AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮನೆ ಹೊರಗೆ ಆಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ; ಬಾಲಕ ಸಾವು

ಮನೆಯ ಹೊರಗೆ ಆಟವಾಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳು ಒಂದೇ ಸಮನೆ ದಾಳಿ ನಡೆಸಿದ್ದಾವೆ. ಆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ್ದು, ಬಾಲಕಿಯ ಸ್ಥಿತಿ ಗಂಭೀರವಾಗಿದೆ.

Shocking News: ಮನೆ ಹೊರಗೆ ಆಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ; ಬಾಲಕ ಸಾವು
ನಾಯಿ
TV9 Web
| Edited By: |

Updated on: Apr 07, 2022 | 4:04 PM

Share

ಲಕ್ನೋ: ಲಕ್ನೋದ ಠಾಕೂರ್‌ಗಂಜ್‌ನ ಮುಸಾಹಿಬ್‌ಗಂಜ್ ಪ್ರದೇಶದಲ್ಲಿ ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದ ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳು (Street Dogs) ದಾಳಿ ಮಾಡಿರುವ ಆಘಾತಕಾರಿ ಘಟನೆ (Shocking Incident) ನಡೆದಿದೆ. ಈ ದಾಳಿಯಲ್ಲಿ 8 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಮತ್ತು ಅವನ ಸಹೋದರಿ ತೀವ್ರವಾಗಿ ಗಾಯಗೊಂಡಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ಅಣ್ಣ-ತಂಗಿಯನ್ನು ಕೆಜಿಎಂಯುನ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಆದರೆ ಬಾಲಕ ಮೊಹಮ್ಮದ್ ಹೈದರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಅವರ 5 ವರ್ಷದ ಸಹೋದರಿ ಜನ್ನತ್ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ.

ಮೃತ ಬಾಲಕನ ಪೋಷಕರು ಲಕ್ನೋದ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ಧ ಧ್ವನಿ ಎತ್ತಿದ್ದಾರೆ. ಇಲ್ಲಿನ ಬೀದಿ ನಾಯಿಗಳು ಸ್ಥಳೀಯರಿಗೆ ಅಪಾಯ ಉಂಟುಮಾಡುತ್ತಿರುವ ಬಗ್ಗೆ ಪದೇಪದೆ ದೂರು ನೀಡಿದ್ದರೂ, ಲಕ್ನೋ ಮಹಾನಗರ ಪಾಲಿಕೆ (ಎಲ್‌ಎಂಸಿ) ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಬೀದಿ ನಾಯಿಗಳನ್ನು ಹಿಡಿಯಲು ಆದೇಶ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಈ ಹಿಂದೆಯೇ ಮನವಿ ಮಾಡಿದ್ದರು. ಆದರೆ, ಎನ್‌ಜಿಒಗಳು ಅದಕ್ಕೆ ವಿರೋಧಿಸುವುದರಿಂದ ನಾಯಿಗಳನ್ನು ಹಿಡಿಯಲು ಸಾಧ್ಯವಿಲ್ಲ ಎಂದು ಎಲ್‌ಎಂಸಿ ನಿರಾಕರಿಸಿತ್ತು. ಸಂತ್ರಸ್ತೆಯ ತಂದೆ ಮುನ್ಸಿಪಲ್ ಕಾರ್ಪೊರೇಷನ್ ವಲಯ 6ರ ಅಧಿಕಾರಿಗಳು ಮತ್ತು ಇತರರ ವಿರುದ್ಧ ಠಾಕೂರ್‌ಗಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

Shocking News: ಗಂಡ ಸತ್ತ ಮೇಲೆ ತವರುಮನೆಯಲ್ಲಿದ್ದ ವಿಧವೆಗೆ ತಮ್ಮನ ಮೇಲೇ ಲವ್ ಆಯ್ತು; ಹೀಗೊಂದು ವಿಚಿತ್ರ ಪ್ರೇಮಕತೆ!

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ