AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಗಂಡು ಮಗುವಿಗೆ ಜನ್ಮ ನೀಡಬೇಕೆಂದು ಗರ್ಭಿಣಿಗೆ ಜನರೆದುರು ಬೆತ್ತಲೆಯಾಗಿ ಸ್ನಾನ ಮಾಡಲು ಒತ್ತಾಯ!

ಊರಿನ ಪದ್ಧತಿಯಂತೆ ಸಾರ್ವಜನಿಕರ ಮುಂದೆ ಬೆತ್ತಲೆ ಸ್ನಾನ ಮಾಡಲು ಗರ್ಭಿಣಿಗೆ ಒತ್ತಾಯಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

Shocking News: ಗಂಡು ಮಗುವಿಗೆ ಜನ್ಮ ನೀಡಬೇಕೆಂದು ಗರ್ಭಿಣಿಗೆ ಜನರೆದುರು ಬೆತ್ತಲೆಯಾಗಿ ಸ್ನಾನ ಮಾಡಲು ಒತ್ತಾಯ!
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 23, 2022 | 9:06 AM

Share

ಪುಣೆ: ಎಷ್ಟೇ ಆಧುನಿಕ ಮನಸ್ಥಿತಿ ಬೆಳೆದಿದ್ದರೂ ಗಂಡು ಮಕ್ಕಳಿಂದಲೇ ತಮಗೆ ಮುಕ್ತಿ ಸಿಗುವುದು ಎಂಬ ಭಾವನೆ ಇಂದಿಗೂ ಅನೇಕ ಜನರ ಮನಸಿನಲ್ಲಿದೆ. ಅದೇ ಕಾರಣಕ್ಕೆ ಗಂಡು ಮಗು ಹುಟ್ಟಲಿ ಎಂದು ಏನೇನೋ ಚಿಕಿತ್ಸೆ ಪಡೆಯುವವರು, ಹಳೆಯ ಪದ್ಧತಿಗಳನ್ನು ಅನುಸರಿಸುವವರೂ ಇದ್ದಾರೆ. ಮಹಾರಾಷ್ಟ್ರದ ಪುಣೆಯ (Pune) ಮಹಿಳೆಯೊಬ್ಬರು ಗಂಡು ಮಗುವನ್ನು ಹೆರಬೇಕೆಂಬ ಕಾರಣಕ್ಕೆ ಆ ಊರಿನ ಗ್ರಾಮಸ್ಥರು ಆಕೆಗೆ ಜನರ ಮುಂದೆ ಬೆತ್ತಲೆ ಸ್ನಾನ ಮಾಡಲು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ಜನರ ಮುಂದೆಯೇ ಬೆತ್ತಲೆಯಾಗಿ ನಿಂತು ಸ್ನಾನ ಮಾಡಿದರೆ ಆ ಮಹಿಳೆಗೆ ಗಂಡು ಮಗು ಜನಿಸುತ್ತದೆ ಎಂಬ ನಂಬಿಕೆ ಆ ಊರಿನಲ್ಲಿದೆ. ಹೀಗಾಗಿ, ಆ ಊರಿನ ಪದ್ಧತಿಯಂತೆ ಸಾರ್ವಜನಿಕರ ಮುಂದೆ ಬೆತ್ತಲೆ ಸ್ನಾನ ಮಾಡಲು ಗರ್ಭಿಣಿಗೆ ಒತ್ತಾಯಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಇದನ್ನು ಖಂಡಿಸಿ ಆ ಮಹಿಳೆ ನೀಡಿದ ದೂರಿನ ಮೇರೆಗೆ, ಪುಣೆ ಪೊಲೀಸರು ಭಾನುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆ ಗರ್ಭಿಣಿ ತನ್ನ ಪತಿ, ಅತ್ತೆ ಮತ್ತು ಮೌಲಾನಾ ಬಾಬಾ ಜಮಾದಾರ್ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ: ಫಡ್ನವಿಸ್​​ಗೆ ಹಣಕಾಸು, ಗೃಹ ಇಲಾಖೆ

ಪುಣೆಯ ಭಾರತಿ ವಿದ್ಯಾಪೀಠ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಜಗನ್ನಾಥ್ ಕಲಾಸ್ಕರ್ ಪ್ರಕಾರ, ಪೊಲೀಸರು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

2013ರಿಂದ ವರದಕ್ಷಿಣೆಗಾಗಿ ಮತ್ತು ಗಂಡು ಮಗುವಿಗೆ ಜನ್ಮ ನೀಡದಿದ್ದಕ್ಕಾಗಿ ತನ್ನ ಗಂಡನ ಮನೆಯವರು ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಗಂಡು ಮಗು ಹುಟ್ಟಬೇಕೆಂಬ ಕಾರಣಕ್ಕೆ ಅನೇಕ ಸಂದರ್ಭಗಳಲ್ಲಿ ತನ್ನ ಮೇಲೆ ಬ್ಲಾಕ್ ಮ್ಯಾಜಿಕ್ ಕೂಡ ಮಾಡಿದ್ದರು ಎಂದು ಆ ಮಹಿಳೆ ತಿಳಿಸಿದ್ದಾರೆ.

“ಇತ್ತೀಚೆಗೆ ಸ್ಥಳೀಯ ಮಂತ್ರವಾದಿಯೊಬ್ಬರು ಮಹಿಳೆಯರು ಸಾರ್ವಜನಿಕವಾಗಿ ಎಲ್ಲರೆದುರು ನಿಂತು ಬೆತ್ತಲೆಯಾಗಿ ಸ್ನಾನ ಮಾಡಿದರೆ ಅವರಿಗೆ ಗಂಡು ಮಗು ಜನಿಸುತ್ತದೆ ಎಂದು ಹೇಳಿದ್ದರು. ಅಲ್ಲದೆ, ನನ್ನ ಮನೆಯವರಿಗೆ ನನ್ನನ್ನು ಕರೆದೊಯ್ದ ಈ ವಿಧಿ ವಿಧಾನಗಳ ನಂತರ ನನಗೆ ಗಂಡು ಮಗು ಹುಟ್ಟುವುದು ಖಚಿತ ಎಂದು ಹೇಳಿ ನಂಬಿಸಿದ್ದರು. ಹೀಗಾಗಿ, ನನ್ನ ಮನೆಯವರು ನನಗೆ ಜನರೆದುರು ಬೆತ್ತಲೆಯಾಗಿ ಸ್ನಾನ ಮಾಡಲು ಹೇಳಿದರು” ಎಂದು ಆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ 9 ಜನರ ಶವ ಪತ್ತೆ ಪ್ರಕರಣ: ಮೂಢನಂಬಿಕೆಗೆ ಮಾರುಹೋಗಿ ಕೊಲೆಯಾದ ಕುಟುಂಬಸ್ಥರು

ವ್ಯಾಪಾರದ ಉದ್ದೇಶಕ್ಕಾಗಿ ತನ್ನ ಆಸ್ತಿಯ ಮೇಲೆ 75 ಲಕ್ಷ ರೂ. ಸಾಲ ಪಡೆಯಲು ಪತಿ ತನ್ನ ಸಹಿಯನ್ನು ನಕಲಿ ಮಾಡಿದ್ದಾನೆ ಎಂದು ಸಹ ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯರ ದೂರಿನ ಮೇರೆಗೆ ಪುಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್