AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಗಂಡು ಮಗುವಿಗೆ ಜನ್ಮ ನೀಡಬೇಕೆಂದು ಗರ್ಭಿಣಿಗೆ ಜನರೆದುರು ಬೆತ್ತಲೆಯಾಗಿ ಸ್ನಾನ ಮಾಡಲು ಒತ್ತಾಯ!

ಊರಿನ ಪದ್ಧತಿಯಂತೆ ಸಾರ್ವಜನಿಕರ ಮುಂದೆ ಬೆತ್ತಲೆ ಸ್ನಾನ ಮಾಡಲು ಗರ್ಭಿಣಿಗೆ ಒತ್ತಾಯಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

Shocking News: ಗಂಡು ಮಗುವಿಗೆ ಜನ್ಮ ನೀಡಬೇಕೆಂದು ಗರ್ಭಿಣಿಗೆ ಜನರೆದುರು ಬೆತ್ತಲೆಯಾಗಿ ಸ್ನಾನ ಮಾಡಲು ಒತ್ತಾಯ!
ಸಾಂಕೇತಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 23, 2022 | 9:06 AM

Share

ಪುಣೆ: ಎಷ್ಟೇ ಆಧುನಿಕ ಮನಸ್ಥಿತಿ ಬೆಳೆದಿದ್ದರೂ ಗಂಡು ಮಕ್ಕಳಿಂದಲೇ ತಮಗೆ ಮುಕ್ತಿ ಸಿಗುವುದು ಎಂಬ ಭಾವನೆ ಇಂದಿಗೂ ಅನೇಕ ಜನರ ಮನಸಿನಲ್ಲಿದೆ. ಅದೇ ಕಾರಣಕ್ಕೆ ಗಂಡು ಮಗು ಹುಟ್ಟಲಿ ಎಂದು ಏನೇನೋ ಚಿಕಿತ್ಸೆ ಪಡೆಯುವವರು, ಹಳೆಯ ಪದ್ಧತಿಗಳನ್ನು ಅನುಸರಿಸುವವರೂ ಇದ್ದಾರೆ. ಮಹಾರಾಷ್ಟ್ರದ ಪುಣೆಯ (Pune) ಮಹಿಳೆಯೊಬ್ಬರು ಗಂಡು ಮಗುವನ್ನು ಹೆರಬೇಕೆಂಬ ಕಾರಣಕ್ಕೆ ಆ ಊರಿನ ಗ್ರಾಮಸ್ಥರು ಆಕೆಗೆ ಜನರ ಮುಂದೆ ಬೆತ್ತಲೆ ಸ್ನಾನ ಮಾಡಲು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ಜನರ ಮುಂದೆಯೇ ಬೆತ್ತಲೆಯಾಗಿ ನಿಂತು ಸ್ನಾನ ಮಾಡಿದರೆ ಆ ಮಹಿಳೆಗೆ ಗಂಡು ಮಗು ಜನಿಸುತ್ತದೆ ಎಂಬ ನಂಬಿಕೆ ಆ ಊರಿನಲ್ಲಿದೆ. ಹೀಗಾಗಿ, ಆ ಊರಿನ ಪದ್ಧತಿಯಂತೆ ಸಾರ್ವಜನಿಕರ ಮುಂದೆ ಬೆತ್ತಲೆ ಸ್ನಾನ ಮಾಡಲು ಗರ್ಭಿಣಿಗೆ ಒತ್ತಾಯಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಇದನ್ನು ಖಂಡಿಸಿ ಆ ಮಹಿಳೆ ನೀಡಿದ ದೂರಿನ ಮೇರೆಗೆ, ಪುಣೆ ಪೊಲೀಸರು ಭಾನುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆ ಗರ್ಭಿಣಿ ತನ್ನ ಪತಿ, ಅತ್ತೆ ಮತ್ತು ಮೌಲಾನಾ ಬಾಬಾ ಜಮಾದಾರ್ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ: ಫಡ್ನವಿಸ್​​ಗೆ ಹಣಕಾಸು, ಗೃಹ ಇಲಾಖೆ

ಪುಣೆಯ ಭಾರತಿ ವಿದ್ಯಾಪೀಠ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಜಗನ್ನಾಥ್ ಕಲಾಸ್ಕರ್ ಪ್ರಕಾರ, ಪೊಲೀಸರು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

2013ರಿಂದ ವರದಕ್ಷಿಣೆಗಾಗಿ ಮತ್ತು ಗಂಡು ಮಗುವಿಗೆ ಜನ್ಮ ನೀಡದಿದ್ದಕ್ಕಾಗಿ ತನ್ನ ಗಂಡನ ಮನೆಯವರು ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಗಂಡು ಮಗು ಹುಟ್ಟಬೇಕೆಂಬ ಕಾರಣಕ್ಕೆ ಅನೇಕ ಸಂದರ್ಭಗಳಲ್ಲಿ ತನ್ನ ಮೇಲೆ ಬ್ಲಾಕ್ ಮ್ಯಾಜಿಕ್ ಕೂಡ ಮಾಡಿದ್ದರು ಎಂದು ಆ ಮಹಿಳೆ ತಿಳಿಸಿದ್ದಾರೆ.

“ಇತ್ತೀಚೆಗೆ ಸ್ಥಳೀಯ ಮಂತ್ರವಾದಿಯೊಬ್ಬರು ಮಹಿಳೆಯರು ಸಾರ್ವಜನಿಕವಾಗಿ ಎಲ್ಲರೆದುರು ನಿಂತು ಬೆತ್ತಲೆಯಾಗಿ ಸ್ನಾನ ಮಾಡಿದರೆ ಅವರಿಗೆ ಗಂಡು ಮಗು ಜನಿಸುತ್ತದೆ ಎಂದು ಹೇಳಿದ್ದರು. ಅಲ್ಲದೆ, ನನ್ನ ಮನೆಯವರಿಗೆ ನನ್ನನ್ನು ಕರೆದೊಯ್ದ ಈ ವಿಧಿ ವಿಧಾನಗಳ ನಂತರ ನನಗೆ ಗಂಡು ಮಗು ಹುಟ್ಟುವುದು ಖಚಿತ ಎಂದು ಹೇಳಿ ನಂಬಿಸಿದ್ದರು. ಹೀಗಾಗಿ, ನನ್ನ ಮನೆಯವರು ನನಗೆ ಜನರೆದುರು ಬೆತ್ತಲೆಯಾಗಿ ಸ್ನಾನ ಮಾಡಲು ಹೇಳಿದರು” ಎಂದು ಆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ 9 ಜನರ ಶವ ಪತ್ತೆ ಪ್ರಕರಣ: ಮೂಢನಂಬಿಕೆಗೆ ಮಾರುಹೋಗಿ ಕೊಲೆಯಾದ ಕುಟುಂಬಸ್ಥರು

ವ್ಯಾಪಾರದ ಉದ್ದೇಶಕ್ಕಾಗಿ ತನ್ನ ಆಸ್ತಿಯ ಮೇಲೆ 75 ಲಕ್ಷ ರೂ. ಸಾಲ ಪಡೆಯಲು ಪತಿ ತನ್ನ ಸಹಿಯನ್ನು ನಕಲಿ ಮಾಡಿದ್ದಾನೆ ಎಂದು ಸಹ ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯರ ದೂರಿನ ಮೇರೆಗೆ ಪುಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!