AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೋಂ ವರ್ಕ್ ಮಾಡದ ಮಗನ ಕೈ-ಕಾಲು ಕಟ್ಟಿ ಫ್ಯಾನ್​ಗೆ ನೇತು ಹಾಕಿದ ಅಪ್ಪ!

Crime News: ಉದಯ್‌ಪುರದ ಬುಂದಿ ಜಿಲ್ಲೆಯ ದಾಬಿಯಲ್ಲಿ ಈ ಘಟನೆ ನಡೆದಿದ್ದು, ಮಗನನ್ನು ಕಟ್ಟಿ, ತಲೆಕೆಳಗಾಗಿ ನೇತು ಹಾಕಿದಲ್ಲದೆ ಆತನಿಗೆ ಹೊಡೆಯಲು ಹೋಗಿದ್ದ. ಈ ದೃಶ್ಯವನ್ನು ವಿಡಿಯೋ ಮಾಡಿಕೊಂಡ ಆ ಬಾಲಕನ ತಾಯಿ ಬಳಿಕ  ಗಂಡನನ್ನು ತಡೆದಿದ್ದಾಳೆ.

Shocking News: ಹೋಂ ವರ್ಕ್ ಮಾಡದ ಮಗನ ಕೈ-ಕಾಲು ಕಟ್ಟಿ ಫ್ಯಾನ್​ಗೆ ನೇತು ಹಾಕಿದ ಅಪ್ಪ!
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 26, 2021 | 2:07 PM

Share

ಉದಯಪುರ: ಮಗ ಹೋಂ ವರ್ಕ್ ಮಾಡಿಲ್ಲ ಎಂಬ ಸಿಟ್ಟಿನಿಂದ ತಂದೆ ತನ್ನ 8 ವರ್ಷದ ಮಗನನ್ನು ಫ್ಯಾನಿಗೆ ತಲೆಕೆಳಗಾಗಿ ನೇತು ಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ಬಾಲಕ ಫ್ಯಾನ್​ಗೆ ನೇತಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ತಕ್ಷಣ ಆ ಬಾಲಕನ ತಾಯಿ ಹೋಗಿ ಮಗನನ್ನು ಬಿಡಿಸಿಕೊಂಡಿದ್ದಾಳೆ. ಇಲ್ಲದಿದ್ದರೆ ಅನಾಹುತವೇ ನಡೆದುಹೋಗುತ್ತಿತ್ತು.

ಮಗನ ಕೈ, ಕಾಲುಗಳನ್ನು ಕಟ್ಟಿ ಆತನನ್ನು ತಲೆ ಕೆಳಗಾಗಿ ಫ್ಯಾನ್​ಗೆ ನೇತು ಹಾಕಲಾಗಿತ್ತು. ಆತನಿಗೆ ಶಿಕ್ಷೆ ನೀಡಬೇಕೆಂದು ಮನಬಂದಂತೆ ಥಳಿಸಲು ಹೋದಾಗ ಆ ಬಾಲಕನ ತಾಯಿ ಬಂದು ಗಂಡನಿಂದ ತನ್ನ ಮಗನನ್ನು ಬಿಡಿಸಿಕೊಂಡಿದ್ದಾಳೆ. ಈ ಘಟನೆ ನಡೆದ ನಂತರ ಬಾಲಕನ ತಾಯಿ ಚಿತ್ತೋರ್​ಗಢದಲ್ಲಿರುವ ಜೋಗ್ನಿಯಮಠ ಪ್ರದೇಶಕ್ಕೆ ತೆರಳಿ ತನ್ನ ಮಾವನಿಗೆ ಆ ವಿಡಿಯೋವನ್ನು ತೋರಿಸಿದ್ದಾಳೆ. ತಕ್ಷಣ ಆತ ಮಕ್ಕಳ ಸಹಾಯವಾಣಿಗೆ ಫೋನ್ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಶಾಲೆಯಿಂದ ಮನೆಗೆ ಬಂದ ಮಗ ಹೋಂ ವರ್ಕ್‌ ಮಾಡಿಲ್ಲ ಎಂಬ ಕಾರಣಕ್ಕೆ ಆತನನ್ನು ತಲೆಕೆಳಗಾಗಿ ನೇತು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಉದಯ್‌ಪುರದ ಬುಂದಿ ಜಿಲ್ಲೆಯ ದಾಬಿಯಲ್ಲಿ ಈ ಘಟನೆ ನಡೆದಿದ್ದು, ಮಗನನ್ನು ಕಟ್ಟಿ, ತಲೆಕೆಳಗಾಗಿ ನೇತು ಹಾಕಿದಲ್ಲದೆ ಆತನಿಗೆ ಹೊಡೆಯಲು ಹೋಗಿದ್ದ. ಈ ದೃಶ್ಯವನ್ನು ವಿಡಿಯೋ ಮಾಡಿಕೊಂಡ ಆ ಬಾಲಕನ ತಾಯಿ ಬಳಿಕ  ಗಂಡನನ್ನು ತಡೆದಿದ್ದಾಳೆ. ಬೇಕಾದರೆ ನನ್ನನ್ನು ಇಲ್ಲೇ ಸಾಯಿಸಿಬಿಡು, ಆದರೆ, ಹೀಗೆಲ್ಲ ನೇತು ಹಾಕಬೇಡ ಎಂದು ಆ ಬಾಲಕ ಅಪ್ಪನ ಬಳಿ ಜೋರಾಗಿ ಅಳುತ್ತಾ ಬೇಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿತ್ತು.

ಬಾಲಕನ ತಂದೆ ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದು, ಪದೇ ಪದೆ ಮಗನನ್ನು ಹೊಡೆದು, ಹಿಂಸೆ ನೀಡುತ್ತಿದ್ದ. ಆದರೆ, ಈ ಘಟನೆಯ ಬಗ್ಗೆ ಮನೆಯವರಾರೂ ಆತನ ವಿರುದ್ಧ ದೂರು ನೀಡಿಲ್ಲ. ವಿಡಿಯೋ ಆಧಾರದಲ್ಲಿ ಪೊಲೀಸರೇ ಕೇಸ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Samantha: ಡಿವೋರ್ಸ್​ ಬಳಿಕ ಸಮಂತಾ ಗುಡ್​ ನ್ಯೂಸ್​; ಇಂಗ್ಲಿಷ್​ ಸಿನಿಮಾ ನಿರ್ದೇಶಕನನ್ನು ತಬ್ಬಿಕೊಂಡ ಫೋಟೋ ವೈರಲ್​

Viral Video: ಆನೆ ಮರಿಯ ಬಾಬ್ ಕಟ್ ಕೂದಲನ್ನು ಬಾಚಿದ ಮಾವುತನ ವಿಡಿಯೋ ವೈರಲ್

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?