AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಕತ್ತಾ ಏರ್​​ಪೋರ್ಟ್​ನಲ್ಲಿ ಇಂಡಿಗೋ ವಿಮಾನದೊಳಗೆ ಹಾವು ಪತ್ತೆ; ಪ್ರಯಾಣಿಕರು ಶಾಕ್

Snake on Indigo Flight | ಇಂಡಿಗೋ ವಿಮಾನದಲ್ಲಿ ತಮ್ಮ ಲಗೇಜ್​ ಹಾಕುತ್ತಿದ್ದಾಗ ಪ್ರಯಾಣಿಕರೊಬ್ಬರಿಗೆ ಹಾವು ಕಾಣಿಸಿದೆ. ಲಗೇಜ್ ಬ್ಯಾಗೇಜ್ ಬೆಲ್ಟ್​ಗೆ ಸುತ್ತಿಕೊಂಡಿದ್ದ ಹಾವನ್ನು ಕಂಡು ಪ್ರಯಾಣಿಕ ಹೌಹಾರಿದ್ದಾರೆ.

ಕೊಲ್ಕತ್ತಾ ಏರ್​​ಪೋರ್ಟ್​ನಲ್ಲಿ ಇಂಡಿಗೋ ವಿಮಾನದೊಳಗೆ ಹಾವು ಪತ್ತೆ; ಪ್ರಯಾಣಿಕರು ಶಾಕ್
ಇಂಡಿಗೋ ವಿಮಾನದಲ್ಲಿ ಹಾವು
TV9 Web
| Updated By: ಸುಷ್ಮಾ ಚಕ್ರೆ|

Updated on:Aug 09, 2021 | 3:43 PM

Share

ಕೊಲ್ಕತ್ತಾ: ಕೊಲ್ಕತ್ತಾದ ಏರ್​ಪೋರ್ಟ್​ನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ (Indigo Flight) ಹಾವು ಕಾಣಿಸಿಕೊಂಡಿದ್ದು, ಕೆಲಕಾಲ ಪ್ರಯಾಣಿಕರು ಕಂಗಾಲಾದ ಘಟನೆ ನಡೆದಿದೆ. ವಿಮಾನ ಟೇಕಾಫ್ ಆಗುವ ಮೊದಲೇ ಈ ಹಾವು (Snake) ಕಣ್ಣಿಗೆ ಬಿದ್ದಿದ್ದರಿಂದ ಕೆಲ ಸಮಯ ವಿಮಾನವನ್ನು ಅಲ್ಲೇ ನಿಲ್ಲಿಸಿ, ಹಾವನ್ನು ತೆಗೆದ ಬಳಿಕ ಟೇಕಾಫ್ ಮಾಡಲಾಯಿತು.

ರಾಯ್ಪುರದಿಂದ ಬಂದು ಕೊಲ್ಕತ್ತಾದಿಂದ ಮುಂಬೈಗೆ ತೆರಳುವ ವಿಮಾನದಲ್ಲಿ ಪ್ರಯಾಣಿಕರೆಲ್ಲರೂ ಹತ್ತಿ ಕುಳಿತಿದ್ದ ವೇಳೆ ವಿಷಯ ಗೊತ್ತಾಗಿದೆ. ವಿಮಾನದಲ್ಲಿ ತಮ್ಮ ಲಗೇಜ್​ ಅನ್ನು ಹಾಕುತ್ತಿದ್ದಾಗ ಪ್ರಯಾಣಿಕರೊಬ್ಬರಿಗೆ ಹಾವು ಕಾಣಿಸಿದೆ. ಲಗೇಜ್ ಬ್ಯಾಗೇಜ್ ಬೆಲ್ಟ್​ಗೆ ಸುತ್ತಿಕೊಂಡಿದ್ದ ಹಾವನ್ನು ಕಂಡು ಪ್ರಯಾಣಿಕ ಹೌಹಾರಿದ್ದಾರೆ. ಈ ವಿಷಯ ಗೊತ್ತಾದ ಕೂಡಲೇ ವಿಮಾನದ ಸಿಬ್ಬಂದಿ ಎಲ್ಲ ಪ್ರಯಾಣಿರನ್ನೂ ಕೆಳಗೆ ಇಳಿಸಿದ್ದಾರೆ. ಬಳಿಕ ಏರ್​ಪೋರ್ಟ್​ ಸಿಬ್ಬಂದಿಗೂ ವಿಷಯ ತಿಳಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಆ ಹಾವನ್ನು ರಕ್ಷಿಸಿ, ತೆಗೆದುಕೊಂಡು ಹೋಗಿದ್ದಾರೆ.

ಆಗಸ್ಟ್​ 5ಕ್ಕೆ ನಡೆದಿರುವ ಈ ಘಟನೆಯ ವಿಡಿಯೋವೊಂದು ಟ್ವಿಟ್ಟರ್​ನಲ್ಲಿ ಈಗ ಶೇರ್ ಆಗಿದೆ. ವಿಮಾನದೊಳಗೆ ಹಾವು ಹೇಗೆ ಸೇರಿಕೊಂಡಿತು, ಇದು ವಿಮಾನದ ಸಿಬ್ಬಂದಿಯ ಗಮನಕ್ಕೆ ಯಾಕೆ ಬರಲಿಲ್ಲ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: Shocking News: ಪೊಲೀಸರಂತೆ ಬಸ್ ನಿಲ್ಲಿಸಿ 1.2 ಕೋಟಿ ರೂ. ಕದ್ದೊಯ್ದ ಕಳ್ಳರು; ಸಿನಿಮಾ ಸ್ಟೈಲ್​ನಲ್ಲಿ ದರೋಡೆ!

Shocking News: 1 ಕೋಟಿ ರೂ. ಕೊಡದಿದ್ದರೆ ನಿಮ್ಮ ಮಕ್ಕಳನ್ನು ಕೊಲ್ಲುತ್ತೇನೆ; 11 ವರ್ಷದ ಮಗಳಿಂದಲೇ ಅಪ್ಪನಿಗೆ ಬ್ಲಾಕ್​ಮೇಲ್!

(Shocking News: Snake found onboard Mumbai bound IndiGo flight at Kolkata airport Snake on Plane)

Published On - 3:41 pm, Mon, 9 August 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್