AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಕತ್ತಾ ಏರ್​​ಪೋರ್ಟ್​ನಲ್ಲಿ ಇಂಡಿಗೋ ವಿಮಾನದೊಳಗೆ ಹಾವು ಪತ್ತೆ; ಪ್ರಯಾಣಿಕರು ಶಾಕ್

Snake on Indigo Flight | ಇಂಡಿಗೋ ವಿಮಾನದಲ್ಲಿ ತಮ್ಮ ಲಗೇಜ್​ ಹಾಕುತ್ತಿದ್ದಾಗ ಪ್ರಯಾಣಿಕರೊಬ್ಬರಿಗೆ ಹಾವು ಕಾಣಿಸಿದೆ. ಲಗೇಜ್ ಬ್ಯಾಗೇಜ್ ಬೆಲ್ಟ್​ಗೆ ಸುತ್ತಿಕೊಂಡಿದ್ದ ಹಾವನ್ನು ಕಂಡು ಪ್ರಯಾಣಿಕ ಹೌಹಾರಿದ್ದಾರೆ.

ಕೊಲ್ಕತ್ತಾ ಏರ್​​ಪೋರ್ಟ್​ನಲ್ಲಿ ಇಂಡಿಗೋ ವಿಮಾನದೊಳಗೆ ಹಾವು ಪತ್ತೆ; ಪ್ರಯಾಣಿಕರು ಶಾಕ್
ಇಂಡಿಗೋ ವಿಮಾನದಲ್ಲಿ ಹಾವು
TV9 Web
| Edited By: |

Updated on:Aug 09, 2021 | 3:43 PM

Share

ಕೊಲ್ಕತ್ತಾ: ಕೊಲ್ಕತ್ತಾದ ಏರ್​ಪೋರ್ಟ್​ನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ (Indigo Flight) ಹಾವು ಕಾಣಿಸಿಕೊಂಡಿದ್ದು, ಕೆಲಕಾಲ ಪ್ರಯಾಣಿಕರು ಕಂಗಾಲಾದ ಘಟನೆ ನಡೆದಿದೆ. ವಿಮಾನ ಟೇಕಾಫ್ ಆಗುವ ಮೊದಲೇ ಈ ಹಾವು (Snake) ಕಣ್ಣಿಗೆ ಬಿದ್ದಿದ್ದರಿಂದ ಕೆಲ ಸಮಯ ವಿಮಾನವನ್ನು ಅಲ್ಲೇ ನಿಲ್ಲಿಸಿ, ಹಾವನ್ನು ತೆಗೆದ ಬಳಿಕ ಟೇಕಾಫ್ ಮಾಡಲಾಯಿತು.

ರಾಯ್ಪುರದಿಂದ ಬಂದು ಕೊಲ್ಕತ್ತಾದಿಂದ ಮುಂಬೈಗೆ ತೆರಳುವ ವಿಮಾನದಲ್ಲಿ ಪ್ರಯಾಣಿಕರೆಲ್ಲರೂ ಹತ್ತಿ ಕುಳಿತಿದ್ದ ವೇಳೆ ವಿಷಯ ಗೊತ್ತಾಗಿದೆ. ವಿಮಾನದಲ್ಲಿ ತಮ್ಮ ಲಗೇಜ್​ ಅನ್ನು ಹಾಕುತ್ತಿದ್ದಾಗ ಪ್ರಯಾಣಿಕರೊಬ್ಬರಿಗೆ ಹಾವು ಕಾಣಿಸಿದೆ. ಲಗೇಜ್ ಬ್ಯಾಗೇಜ್ ಬೆಲ್ಟ್​ಗೆ ಸುತ್ತಿಕೊಂಡಿದ್ದ ಹಾವನ್ನು ಕಂಡು ಪ್ರಯಾಣಿಕ ಹೌಹಾರಿದ್ದಾರೆ. ಈ ವಿಷಯ ಗೊತ್ತಾದ ಕೂಡಲೇ ವಿಮಾನದ ಸಿಬ್ಬಂದಿ ಎಲ್ಲ ಪ್ರಯಾಣಿರನ್ನೂ ಕೆಳಗೆ ಇಳಿಸಿದ್ದಾರೆ. ಬಳಿಕ ಏರ್​ಪೋರ್ಟ್​ ಸಿಬ್ಬಂದಿಗೂ ವಿಷಯ ತಿಳಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಆ ಹಾವನ್ನು ರಕ್ಷಿಸಿ, ತೆಗೆದುಕೊಂಡು ಹೋಗಿದ್ದಾರೆ.

ಆಗಸ್ಟ್​ 5ಕ್ಕೆ ನಡೆದಿರುವ ಈ ಘಟನೆಯ ವಿಡಿಯೋವೊಂದು ಟ್ವಿಟ್ಟರ್​ನಲ್ಲಿ ಈಗ ಶೇರ್ ಆಗಿದೆ. ವಿಮಾನದೊಳಗೆ ಹಾವು ಹೇಗೆ ಸೇರಿಕೊಂಡಿತು, ಇದು ವಿಮಾನದ ಸಿಬ್ಬಂದಿಯ ಗಮನಕ್ಕೆ ಯಾಕೆ ಬರಲಿಲ್ಲ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: Shocking News: ಪೊಲೀಸರಂತೆ ಬಸ್ ನಿಲ್ಲಿಸಿ 1.2 ಕೋಟಿ ರೂ. ಕದ್ದೊಯ್ದ ಕಳ್ಳರು; ಸಿನಿಮಾ ಸ್ಟೈಲ್​ನಲ್ಲಿ ದರೋಡೆ!

Shocking News: 1 ಕೋಟಿ ರೂ. ಕೊಡದಿದ್ದರೆ ನಿಮ್ಮ ಮಕ್ಕಳನ್ನು ಕೊಲ್ಲುತ್ತೇನೆ; 11 ವರ್ಷದ ಮಗಳಿಂದಲೇ ಅಪ್ಪನಿಗೆ ಬ್ಲಾಕ್​ಮೇಲ್!

(Shocking News: Snake found onboard Mumbai bound IndiGo flight at Kolkata airport Snake on Plane)

Published On - 3:41 pm, Mon, 9 August 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!