AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಚರಂಡಿ ಮೂಲಕ 10 ಅಡಿ ಸುರಂಗ ಅಗೆದು ಚಿನ್ನಾಭರಣ ದೋಚಿದ ಕಳ್ಳರು

ಚರಂಡಿ ಮೂಲಕ 10 ಅಡಿ ಸುರಂಗವನ್ನು ಕೊರೆದು ಚಿನ್ನದ ಅಂಗಡಿಯೊಂದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ.

Shocking News: ಚರಂಡಿ ಮೂಲಕ 10 ಅಡಿ ಸುರಂಗ ಅಗೆದು ಚಿನ್ನಾಭರಣ ದೋಚಿದ ಕಳ್ಳರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 29, 2023 | 4:31 PM

ಮೀರತ್:  ಚರಂಡಿ ಮೂಲಕ 10 ಅಡಿ ಸುರಂಗವನ್ನು ಕೊರೆದು ಚಿನ್ನದ ಅಂಗಡಿಯೊಂದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಜ್ಯುವೆಲ್ಲರಿ ಶೋರೂಂ ಮಾಲೀಕರು ವ್ಯಾಪಾರಕ್ಕಾಗಿ ಅಂಗಡಿಯನ್ನು ತೆರೆಯಲು ಬಂದಾಗ, ಚರಂಡಿಯ ಮೂಲಕ ಸುರಂಗವೊಂದು ಅಂಗಡಿಯೊಳಗೆ ಹಾದು ಹೋಗುತ್ತಿರುವುದನ್ನು ನೋಡಿದ್ದಾರೆ. ಪೊಲೀಸರ ಪ್ರಕಾರ, ಕಳ್ಳರು ಅಂಗಡಿಯೊಳಗೆ ಪ್ರವೇಶಿಸಲು ಡ್ರೈನ್‌ನ ದುರ್ಬಲ ಗಡಿಯಿಂದ ಇಟ್ಟಿಗೆ ಮತ್ತು ಮಣ್ಣನ್ನು ಕೆಡವಿದ್ದಾರೆ ಎಂದು ಹೇಳಿದ್ದಾರೆ.

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳೊಂದಿಗೆ ಕಳ್ಳರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಆದರೆ ನಿಖರವಾದ ಮೊತ್ತ ಎಷ್ಟು ಎಂದು ಇನ್ನೂ ಪತ್ತೆಯಾಗಿಲ್ಲ. ಈ ದರೋಡೆಯ ಸುದ್ದಿ ಹರಡುತ್ತಿದ್ದಂತೆ, ಮೀರತ್ ಬುಲಿಯನ್ ಟ್ರೇಡರ್ಸ್ ಅಸೋಸಿಯೇಷನ್ ​​ಸದಸ್ಯರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಯಿಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಇದು ನಾಲ್ಕನೇ ದರೋಡೆ ಘಟನೆಯಾಗಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: Shocking News : ಪಶುವೈದ್ಯರನ್ನು ದನಗಳ ಚಿಕಿತ್ಸೆಗೆಂದು ಕರೆದು ಮದುವೆ ಮಾಡಿಸಿದ ಸ್ಥಳೀಯರು

ಈ ವಿಚಾರ ತಿಳಿಯುತ್ತಿದಂತೆ ಕೂಡಲೇ ಇಬ್ಬರು ಪೊಲೀಸ್ ಅಧಿಕಾರಿಗಳು ಶೋರೂಂಗೆ ಬಂದಿದ್ದಾರೆ. ಇತ್ತೀಚಿನ ವಾರಗಳಲ್ಲಿ ನಡೆದಿದೆ ಎನ್ನಲಾದ ಈ ದರೋಡೆ ಮತ್ತು ಇತರ ಹಲವು ಪ್ರಕರಣಗಳ ತನಿಖೆಗೆ ಹಿರಿಯ ಅಧಿಕಾರಿಗಳು ಬರುಬೇಕು ಎಂದು ಒತ್ತಾಯಿಸಿ ವ್ಯಾಪಾರಿಗಳು ಪೊಲೀಸ್ ಅಧಿಕಾರಿಗಳನ್ನು ಅಂಗಡಿಗೆ ಪ್ರವೇಶಿಸಲು ನಿರಾಕರಿಸಿದರು. ದರೋಡೆಕೋರರನ್ನು ಹಿಡಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 4:18 pm, Wed, 29 March 23

ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ