AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧ ಭೂಮಿಯಿಂದ ಪಲಾಯನ ಮಾಡುತ್ತಿರುವ ಭಾರತೀಯರಿಗೆ ಉಕ್ರೇನ್ ಸಿಬ್ಬಂದಿ ಥಳಿಸುತ್ತಿದ್ದಾರೆ; ಶಾಕಿಂಗ್ ವಿಚಾರ ಬಿಚ್ಚಿಟ್ಟ ವಿದ್ಯಾರ್ಥಿನಿ

ಉಕ್ರೇನ್​ನ ಭದ್ರತಾ ಅಧಿಕಾರಿಯೊಬ್ಬರು ವಿದ್ಯಾರ್ಥಿಗೆ ಹೊಡೆಯುವ ವೀಡಿಯೊಗಳು ವೈರಲ್ ಆದ ಬೆನ್ನಲ್ಲೇ ಇವಾನೊ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಶ್ರುತಿ ನಾಯಕ್ ಅವರ ಈ ಹೇಳಿಕೆಯು ಆತಂಕ ಮೂಡಿಸಿದೆ.

ಯುದ್ಧ ಭೂಮಿಯಿಂದ ಪಲಾಯನ ಮಾಡುತ್ತಿರುವ ಭಾರತೀಯರಿಗೆ ಉಕ್ರೇನ್ ಸಿಬ್ಬಂದಿ ಥಳಿಸುತ್ತಿದ್ದಾರೆ; ಶಾಕಿಂಗ್ ವಿಚಾರ ಬಿಚ್ಚಿಟ್ಟ ವಿದ್ಯಾರ್ಥಿನಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 01, 2022 | 9:20 PM

Share

ಭೂಪಾಲ್: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿರುವ ತನ್ನ ಮನೆಗೆ ಮರಳಿದ ವೈದ್ಯಕೀಯ ವಿದ್ಯಾರ್ಥಿನಿ ಉಕ್ರೇನ್​ನಲ್ಲಿ (Ukraine) ಭಾರತೀಯರ ಮೇಲಾಗುತ್ತಿರುವ ದಬ್ಬಾಳಿಕೆ, ಕಿರುಕುಳದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಆಕೆ, ಉಕ್ರೇನ್ ಮೇಲೆ ದಾಳಿ ನಡೆಸಿರುವ ರಷ್ಯಾ (Russia) ಸೇನೆಯಿಂದ ಹಾಗೂ ಯುದ್ಧ ವಲಯದಿಂದ ಪಲಾಯನ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಗಾರ್ಡ್​ಗಳು ಥಳಿಸುತ್ತಿದ್ದರು ಎಂದು ಹೇಳಿದ್ದಾರೆ.

ಉಕ್ರೇನ್​ನ ಭದ್ರತಾ ಅಧಿಕಾರಿಯೊಬ್ಬರು ವಿದ್ಯಾರ್ಥಿಗೆ ಹೊಡೆಯುವ ವೀಡಿಯೊಗಳು ವೈರಲ್ ಆದ ಬೆನ್ನಲ್ಲೇ ಇವಾನೊ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಶ್ರುತಿ ನಾಯಕ್ ಅವರ ಈ ಹೇಳಿಕೆಯು ಆತಂಕ ಮೂಡಿಸಿದೆ. ಏರ್ ಇಂಡಿಯಾ ವಿಮಾನದ ಮೂಲಕ ಉಕ್ರೇನ್​ನಿಂದ ಭಾರತಕ್ಕೆ ಮರಳಿದ ಶ್ರುತಿ ಗುನಾದಲ್ಲಿರುವ ತನ್ನ ಮನೆಗೆ ತಲುಪಿದ್ದಾರೆ.

ಉಕ್ರೇನ್‌ನಲ್ಲಿ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. “ಯುದ್ಧ ವಲಯದಿಂದ ಪಲಾಯನ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಉಕ್ರೇನಿಯನ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು ಮತ್ತು ಅವರನ್ನು ಥಳಿಸಿದ್ದಾರೆ” ಎಂದು ಶ್ರುತಿ ನಾಯಕ್ ಹೇಳಿದ್ದಾರೆ. “ನಾನು ಭಾರತಕ್ಕೆ ಬಂದಿದ್ದೇನೆ ಮತ್ತು ಈಗ ಕುಟುಂಬ ಸದಸ್ಯರನ್ನು ಭೇಟಿಯಾದ ನಂತರ ನಾನು ಸಾಕಷ್ಟು ಅದೃಷ್ಟವಂತೆ ಎನಿಸುತ್ತಿದೆ” ಎಂದು ಅವರು ಹೇಳಿದ್ದಾರೆ. ಶ್ರುತಿ ನಾಯಕ್ ಅವರು ಫೆಬ್ರವರಿ 16ಕ್ಕೆ ಉಕ್ರೇನ್​ನಿಂದ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದರು. ಆದರೆ ಆ ವಿಮಾನ ರದ್ದಾಗಿತ್ತು.

ನಂತರ ಅವರು ಮಾರ್ಚ್ 3ಕ್ಕೆ ಟಿಕೆಟ್ ಕಾಯ್ದಿರಿಸಿದ್ದರು. ಆದರೆ ಅದು ಸಹ ರದ್ದುಗೊಂಡಿತ್ತು ಎಂದು ಅವರು ಹೇಳಿದ್ದಾರೆ. ಶ್ರುತಿ ನಾಯಕ್ ನಂತರ ಫೆಬ್ರವರಿ 26ರಂದು ರೊಮೇನಿಯಾ ತಲುಪಲು ಬಸ್‌ನಲ್ಲಿ 400 ಕಿಮೀ ಪ್ರಯಾಣಿಸಿದರು. ಅಲ್ಲಿನ ಸರ್ಕಾರವು ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ ಎಂದು ಅವರು ಹೇಳಿದರು. ಅವರು ಫೆಬ್ರವರಿ 27ರಂದು ರೊಮೇನಿಯಾದಿಂದ ಸ್ಥಳಾಂತರಿಸುವವರಿಗೆ ವಿಶೇಷ ಏರ್ ಇಂಡಿಯಾ ವಿಮಾನವನ್ನು ಹತ್ತಿದರು ಮತ್ತು ಅದೇ ದಿನ ಸಂಜೆ 6.30ಕ್ಕೆ ನವದೆಹಲಿಯನ್ನು ತಲುಪಿದರು.

ಉಕ್ರೇನ್‌ನಲ್ಲಿ ಸಿಲುಕಿರುವ 180ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಜ್ಯ ಸರ್ಕಾರ ತೆರೆದಿರುವ ಸಹಾಯವಾಣಿಯನ್ನು ಸಂಪರ್ಕಿಸಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಹಿಂದೆ ಹೇಳಿದ್ದರು. ಇಲ್ಲಿಯವರೆಗೆ, ಮಧ್ಯಪ್ರದೇಶದ 29 ಜನರು ಉಕ್ರೇನ್‌ನಿಂದ ಮರಳಿದ್ದಾರೆ ಎಂದು ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಲ್ಲಿ ರಷ್ಯನ್ನರ ದಾಳಿಗೆ ಬಲಿಯಾದ ಹಾವೇರಿ ವಿದ್ಯಾರ್ಥಿಯ ಪೋಷಕರಿಗೆ ಕರೆ ಮಾಡಿದ ಪ್ರಧಾನಿ ಮೋದಿ

Russia-Ukraine War: ಮುಗಿಯದ ಯುದ್ಧ; ರಷ್ಯಾ, ಉಕ್ರೇನ್ ನಡುವೆ ಮಾ. 2ಕ್ಕೆ ಎರಡನೇ ಸುತ್ತಿನ ಮಾತುಕತೆ

Follow Us
Web contact
Web contact

TV9 Kannada

Read More
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​