AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ನನ್ನ ಹೆಂಡತಿ ಹಾವಾಗಿ ಕಚ್ಚುತ್ತಾಳೆ; ಪೊಲೀಸರಿಗೆ ವಿಚಿತ್ರ ದೂರು ನೀಡಿದ ಗಂಡ!

ಉತ್ತರ ಪ್ರದೇಶದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ಇಲ್ಲಿನ ವ್ಯಕ್ತಿಯೊಬ್ಬ ಪೊಲೀಸರಿಗೆ ವಿಲಕ್ಷಣವಾದ ದೂರು ನೀಡಿದ್ದಾನೆ. ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಹೆಂಡತಿ ರಾತ್ರಿ ವೇಳೆ ಹಾವಿನಂತೆ ಬದಲಾಗಿ ತನಗೆ ಕಚ್ಚುತ್ತಾಳೆ ಎಂದು ದೂರು ನೀಡಿದ್ದಾನೆ. ರಾತ್ರಿ ವೇಳೆ ಆಕೆ ತನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾಳೆ ಎಂದೂ ದೂರಿನಲ್ಲಿ ಹೇಳಿದ್ದಾನೆ. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

ರಾತ್ರಿ ನನ್ನ ಹೆಂಡತಿ ಹಾವಾಗಿ ಕಚ್ಚುತ್ತಾಳೆ; ಪೊಲೀಸರಿಗೆ ವಿಚಿತ್ರ ದೂರು ನೀಡಿದ ಗಂಡ!
Uttar Pradesh Man
ಸುಷ್ಮಾ ಚಕ್ರೆ
|

Updated on: Oct 10, 2025 | 9:57 PM

Share

ನೊಯ್ಡಾ, ಅಕ್ಟೋಬರ್ 8: ಉತ್ತರ ಪ್ರದೇಶದ (Uttar Pradesh) ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಲ್ಲಿ ವಿಚಿತ್ರವಾದ ದೂರು ದಾಖಲಿಸಿದ್ದಾನೆ. ನನ್ನ ಹೆಂಡತಿ ರಾತ್ರಿ ಹಾವಾಗಿ ಬದಲಾಗುತ್ತಾಳೆ, ನನ್ನನ್ನು ಕಚ್ಚುತ್ತಾಳೆ ಎಂದು ಆತ ನೀಡಿದ ದೂರು ಸಂಚಲನ ಮೂಡಿಸಿದೆ. ಹಾವು ಕಡಿತದಿಂದ ಅನೇಕ ಜನರು ಸಾವನ್ನಪ್ಪಿದ್ದಾರೆ. ಈ ಮಧ್ಯೆ, ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ವಿಚಿತ್ರ ದೂರು ದಾಖಲಿಸಿದ್ದಾನೆ. ರಾತ್ರಿ ಇದ್ದಕ್ಕಿದ್ದಂತೆ ನನ್ನ ಹೆಂಡತಿ ಹಾವಾಗಿ ಬದಲಾಗುತ್ತಾಳೆ ಎಂದು ಆತ ಆರೋಪಿಸಿದ್ದಾನೆ.

ದೂರು ನೀಡಿದ ಮೀರಜ್ ಉತ್ತರ ಪ್ರದೇಶದ ಮಹ್ಮದಾಬಾದ್ ಜಿಲ್ಲೆಯ ಲೋಡ್ಸಾ ಗ್ರಾಮದ ನಿವಾಸಿ. ಅವರ ಪತ್ನಿ ನಸೀಮುನ್ ವಿರುದ್ಧ ಆತ ವಿಚಿತ್ರ ದೂರು ದಾಖಲಿಸಿದ್ದಾನೆ. ಮೀರಜ್ ನೀಡಿದ ವಿಚಿತ್ರ ದೂರು ಚರ್ಚೆಯ ವಿಷಯವಾಗಿದೆ. ಆ ದೂರಿನಲ್ಲಿ ಆತ “ಸರ್, ನನ್ನ ಹೆಂಡತಿ ನಸೀಮುನ್ ರಾತ್ರಿಯಲ್ಲಿ ಹಾವಾಗಿ ಬದಲಾಗುತ್ತಾಳೆ ಮತ್ತು ನನ್ನನ್ನು ಹಿಂಬಾಲಿಸಿಕೊಂಡು ಬರುತ್ತಾಳೆ. ಅವಳು ರಾತ್ರಿಯಲ್ಲಿ ಹಾವಾಗಿ ಬದಲಾಗುವ ಮೂಲಕ ನನ್ನನ್ನು ಹಲವಾರು ಬಾರಿ ಕಚ್ಚಿದ್ದಾಳೆ. ನನ್ನ ಹೆಂಡತಿ ನನ್ನನ್ನು ಮಾನಸಿಕವಾಗಿ ಹಿಂಸಿಸುತ್ತಾಳೆ. ನಾನು ನಿದ್ದೆ ಮಾಡುವಾಗ ಅವಳು ಯಾವಾಗ ಬೇಕಾದರೂ ನನ್ನನ್ನು ಕೊಲ್ಲಬಹುದು ಎಂಬ ಭಯ ಕಾಡುತ್ತಿದೆ. ಹಾವಿನಂತೆ ಬದಲಾಗುವ ನನ್ನ ಹೆಂಡತಿ ಹಲವಾರು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಆದರೆ, ನಾನು ಪ್ರತಿ ಬಾರಿಯೂ ಆಕೆಯನ್ನು ತಡೆದಿದ್ದೇನೆ” ಎಂದು ಆತ ಹೇಳಿದ್ದಾನೆ.

ಇದನ್ನೂ ಓದಿ: ಬೆಡ್​​ ರೂಮ್ ವಿಡಿಯೋ ಕೇಸಿಗೆ ಸ್ಫೋಟಕ ತಿರುವು: ಹೆಂಡ್ತಿಯ ಅಸಲಿ ಆಟ ಬಿಚ್ಚಿಟ್ಟ ಗಂಡ

ಮೀರಜ್ ನೀಡಿದ ದೂರು ಅಲ್ಲಿದ್ದವರನ್ನು ಬೆಚ್ಚಿಬೀಳಿಸಿತು. ಇದರ ನಂತರ, ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದರು. ಈ ವಿಷಯದ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಳ್ಳಲು ಮತ್ತು ವರದಿಯನ್ನು ಸಲ್ಲಿಸಲು ಆದೇಶಿಸಲಾಗಿದೆ. ಇದು ನಿಜವಾ? ಅಥವಾ ಕಟ್ಟುಕತೆಯಾ? ಎಂಬ ಬಗ್ಗೆ ತನಿಖೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ಅವಧಿಗೂ ಮೊದಲೇ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ
ಅವಧಿಗೂ ಮೊದಲೇ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ