AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನೇಣು ಹಾಕಿಕೊಂಡ ಹೆಂಡತಿಯನ್ನು ಕಾಪಾಡುವ ಬದಲು ಮೊಬೈಲ್​ನಲ್ಲಿ ವಿಡಿಯೋ ಮಾಡುತ್ತಾ ಕುಳಿತ ಗಂಡ!

ಮಹಿಳೆಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಳ್ಳಲು ಯತ್ನಿಸುತ್ತಿರುವ ವಿಡಿಯೋವೊಂದು ಹೊರಬಿದ್ದಿದ್ದು, ಆಕೆಯನ್ನು ರಕ್ಷಿಸುವ ಬದಲು ಆಕೆಯ ಪತಿ ಅದನ್ನು ವಿಡಿಯೋ ಮಾಡುವುದರಲ್ಲಿ ನಿರತರಾಗಿದ್ದ.

Shocking News: ನೇಣು ಹಾಕಿಕೊಂಡ ಹೆಂಡತಿಯನ್ನು ಕಾಪಾಡುವ ಬದಲು ಮೊಬೈಲ್​ನಲ್ಲಿ ವಿಡಿಯೋ ಮಾಡುತ್ತಾ ಕುಳಿತ ಗಂಡ!
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 27, 2022 | 9:57 AM

ಉತ್ತರ ಪ್ರದೇಶ: ಹೆಂಡತಿ ಬೆಡ್​ರೂಂನಲ್ಲಿರುವ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಳ್ಳುತ್ತಿದ್ದರೆ ಆಕೆಯ ಗಂಡ ಅದನ್ನು ಮೊಬೈಲ್​ನಲ್ಲಿ ರೆಕಾರ್ಡ್​ ಮಾಡುತ್ತಾ ಕುಳಿತಿರುವ ಆಘಾತಕಾರಿ ಘಟನೆಯೊಂದು ಕಾನ್ಪುರದಲ್ಲಿ (Kanpur)  ನಡೆದಿದೆ. ತನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ಆಕೆಯನ್ನು ಕಾಪಾಡುವುದರ ಬದಲು ಅದನ್ನು ವಿಡಿಯೋ ಮಾಡುತ್ತಿದ್ದ ಪತಿ ಮಹಾಶಯ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಮಹಿಳೆಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಳ್ಳಲು ಯತ್ನಿಸುತ್ತಿರುವ ವಿಡಿಯೋವೊಂದು ಹೊರಬಿದ್ದಿದ್ದು, ಆಕೆಯನ್ನು ರಕ್ಷಿಸುವ ಬದಲು ಆಕೆಯ ಪತಿ ಅದನ್ನು ವಿಡಿಯೋ ಮಾಡುವುದರಲ್ಲಿ ನಿರತರಾಗಿದ್ದ. ಆತನ ಹೆಂಡತಿ ತನ್ನ ಮೊದಲ ಪ್ರಯತ್ನದಲ್ಲಿ ವಿಫಲಳಾದರೂ ಎರಡನೇ ಪ್ರಯತ್ನದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾಳೆ.

ಆ ಮಹಿಳೆಯ ತಂದೆ ರಾಜ್ ಕಿಶೋರ್ ಗುಪ್ತಾ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, ನನ್ನ ಅಳಿಯ ಸಂಜೀವ್ ಗುಪ್ತಾ ಮಧ್ಯಾಹ್ನ ಫೋನ್ ಮಾಡಿ ನನ್ನ ಮಗಳು ಶೋಭಿತಾ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಕೇಸ್​ಗೆ ಬಿಗ್ ಟ್ವಿಸ್ಟ್: ಸಾವಿಗೂ ಮುನ್ನ ಸ್ನೇಹಿತನಿಗೆ ಕಳಿಸಿದ್ದ ಸಂದೇಶದಲ್ಲಿತ್ತು ಕಾರಣ

“ನಾನು ಗುಲ್‌ಮೊಹರ್ ನಗರದಲ್ಲಿರುವ ಆಕೆಯ ಮನೆಗೆ ಧಾವಿಸಿ ನೋಡಿದಾಗ ಹಾಸಿಗೆಯ ಮೇಲೆ ಆಕೆಯ ಶವವಿತ್ತು. ಸಂಜೀವ್ ಆಕೆಯ ಎದೆಯನ್ನು ಪಂಪ್ ಮಾಡುತ್ತಿದ್ದರು. ಆದರೆ ಅವಳು ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಳು. ಇದೆಲ್ಲ ಹೇಗಾಯ್ತು ಎಂದು ನಾನು ಸಂಜೀವ್‌ನನ್ನು ವಿಚಾರಿಸಿದಾಗ, ಅವನು ನನಗೆ ವೀಡಿಯೊ ತೋರಿಸಿದನು. ಆ ವಿಡಿಯೋ ನೋಡಿದ ನನಗೆ ಅವನು ಅವಳನ್ನು ಉಳಿಸಲು ಯಾವುದೇ ಪ್ರಯತ್ನ ಮಾಡಲಿಲ್ಲ ಎಂದು ತಿಳಿದು ಆಘಾತವಾಯಿತು. ಆ ಘಟನೆಯನ್ನು ರೆಕಾರ್ಡ್ ಮಾಡುವ ಬದಲು ಅವಳನ್ನು ಆಸ್ಪತ್ರೆಗೆ ಸೇರಿಸಿದ್ದರೆ ಆಕೆ ಬದುಕುಳಿಯುತ್ತಿದ್ದಳು” ಎಂದು ಅವರು ಹೇಳಿದ್ದಾರೆ.

ಮೃತನ ಕುಟುಂಬದವರು ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಂಜೀವ್ ಗುಪ್ತಾ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇವರಿಬ್ಬರೂ 4 ವರ್ಷಗಳ ಹಿಂದೆ ಮದುವೆಯಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ