AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೈದರಾಬಾದ್​ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗೆ ರ್ಯಾಗಿಂಗ್; ಥಳಿಸಿ, ಅಲ್ಲಾಹು ಅಕ್ಬರ್ ಹೇಳಲು ಒತ್ತಾಯಿಸಿದ 8 ಜನರ ಬಂಧನ

ನವೆಂಬರ್ 1ರಂದು ಹಿಮಾಂಕ್ ಪ್ರವಾದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡಿದ ನಂತರ ಈ ಘಟನೆ ನಡೆದಿದೆ. ಕೊಲೆ ಯತ್ನದ ಆರೋಪದ ಮೇಲೆ ಅಪ್ರಾಪ್ತ ಸೇರಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Shocking News: ಹೈದರಾಬಾದ್​ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗೆ ರ್ಯಾಗಿಂಗ್; ಥಳಿಸಿ, ಅಲ್ಲಾಹು ಅಕ್ಬರ್ ಹೇಳಲು ಒತ್ತಾಯಿಸಿದ 8 ಜನರ ಬಂಧನ
ಹೈದರಾಬಾದ್ ಕಾಲೇಜಿನಲ್ಲಿ ರ್ಯಾಗಿಂಗ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 14, 2022 | 11:50 AM

ಹೈದರಾಬಾದ್: ರ್ಯಾಗಿಂಗ್ ಮಾಡಿದರೆ ಕಠಿಣ ಶಿಕ್ಷೆ ನೀಡಲಾಗುವುದು ಎಂಬ ಅರಿವಿದ್ದರೂ ಹೈದರಾಬಾದ್‌ನ ಹಾಸ್ಟೆಲ್ (Hyderabad Hostel) ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾನೂನು ವಿದ್ಯಾರ್ಥಿಯನ್ನು ಥಳಿಸಿ, ಆತನಿಗೆ ಅಲ್ಲಾಹು ಅಕ್ಬರ್ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿರುವ ಅಮಾನವೀಯ ಘಟನೆಯ ವಿಡಿಯೋ ವೈರಲ್ (Video Viral) ಆಗಿದೆ.

ಹೈದರಾಬಾದ್​ನ ಐಸಿಎಫ್‌ಎಐ ಫೌಂಡೇಷನ್ ಫಾರ್ ಹೈಯರ್ ಎಜುಕೇಶನ್ (ಐಎಫ್‌ಹೆಚ್‌ಇ)ಯಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಹಿಮಾಂಕ್ ಬನ್ಸಾಲ್ ಎಂಬಾತನಿಗೆ ಹಾಸ್ಟೆಲ್ ರೂಂನಲ್ಲಿ ಕಪಾಳಮೋಕ್ಷ ಮಾಡಲಾಗಿದ್ದು, ಆತನಿಗೆ ಒದ್ದು, ಕೈಗಳನ್ನು ತಿರುಚಲಾಗಿದೆ. ಇದರ ವಿಡಿಯೋ ವೈರಲ್ ಆಗಿದೆ. ಏಳೆಂಟು ಯುವಕರು ಆತನನ್ನು ಥಳಿಸುವುದನ್ನು ನಿಲ್ಲಿಸದ ಕಾರಣ ಆತ ಅವರು ಹೇಳಿದಂತೆ “ಜೈ ಮಾತಾ ದಿ” ಮತ್ತು “ಅಲ್ಲಾಹು ಅಕ್ಬರ್” ಘೋಷಣೆಗಳನ್ನು ಕೂಗಿದ್ದಾನೆ.

ಕೊಲೆ ಯತ್ನದ ಆರೋಪದ ಮೇಲೆ ಅಪ್ರಾಪ್ತ ವಯಸ್ಕ ಸೇರಿದಂತೆ ಒಟ್ಟು 12 ವಿದ್ಯಾರ್ಥಿಗಳ ಪೈಕಿ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ 7 ಮಂದಿ ಪರಾರಿಯಾಗಿದ್ದಾರೆ. ಇವರೆಲ್ಲರನ್ನೂ ಬಿಸಿನೆಸ್ ಸ್ಕೂಲ್ ಕಾಲೇಜಿನಿಂದ ಸಸ್ಪೆಂಡ್ ಮಾಡಿದೆ. ಕಾಲೇಜಿನ ಆಡಳಿತ ಮಂಡಳಿಯ ಐವರಿಗೆ ಪೊಲೀಸರ ಮುಂದೆ ಹಾಜರಾಗುವಂತೆ ಆದೇಶ ನೀಡಲಾಗಿದೆ.

ಇದನ್ನೂ ಓದಿ: Viral Video: ಆಂಧ್ರದ ಹಾಸ್ಟೆಲ್​ನಲ್ಲಿ ರ್ಯಾಗಿಂಗ್; ಯುವಕನನ್ನು ಥಳಿಸಿ, ಐರನ್ ಬಾಕ್ಸ್​ನಿಂದ ಸುಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ನವೆಂಬರ್ 1ರಂದು ಹಿಮಾಂಕ್ ಪ್ರವಾದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡಿದ ನಂತರ ಈ ಘಟನೆ ನಡೆದಿದೆ. ಈ ಬಗ್ಗೆ ಆ ಯುವಕರು ಪೊಲೀಸರಿಗೆ ದೂರು ನೀಡಿ, ದೈಹಿಕವಾಗಿ ಮತ್ತು ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ಯಾಂಟ್ ತೆಗೆಯದಿದ್ದರೆ ಥಳಿಸಿ ಸಾಯಿಸುವುದಾಗಿ ವಿದ್ಯಾರ್ಥಿಗಳು ಹಿಮಾಂಕ್​ಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತೆಲಂಗಾಣದ ಸಚಿವ ಕೆಟಿ ರಾಮರಾವ್ ಮತ್ತು ಹೈದರಾಬಾದ್ ಪೊಲೀಸ್ ಕಮಿಷನರ್ ಅವರನ್ನು ಟ್ಯಾಗ್ ಮಾಡಿರುವ ಹಿಮಾಂಕ್ ಈ ಘಟನೆಯ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದ್ದು, ಕೆ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:50 am, Mon, 14 November 22