AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಂದ ಮಹಿಳೆ; ಔರಂಗಾಬಾದ್‌ನಲ್ಲಿ ಶಾಕಿಂಗ್ ಘಟನೆ

ಇತ್ತೀಚೆಗೆ ಅಕ್ರಮ ಸಂಬಂಧದ ಕಾರಣಕ್ಕೆ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲ್ಲುವವರ ಸಂಖ್ಯೆ ಹೆಚ್ಚಾಗಿದೆ. ಬಿಹಾರದಲ್ಲೂ ಇದೇ ರೀತಿಯ ಘಟನೆ ನಡೆದಿದೆ. ಜೂನ್ 25ರಂದು ಬಂದೇಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮೌನಾ ಗ್ರಾಮದ ಹೊಲದಲ್ಲಿ ಔರಂಗಾಬಾದ್​​ ಮಹಿಳೆಯ ಪತಿಯ ಶವ ಪತ್ತೆಯಾದ ನಂತರ ಆ ಮಹಿಳೆಯನ್ನು ಬಂಧಿಸಲಾಯಿತು. ಆಕೆಯೇ ಗಂಡನ ಕೊಲೆ ಮಾಡಿದ್ದಾಳೆಂಬುದಕ್ಕೆ ಪೊಲೀಸರಿಗೆ ಸಾಕ್ಷಿಗಳು ಸಿಕ್ಕವು.

ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಂದ ಮಹಿಳೆ; ಔರಂಗಾಬಾದ್‌ನಲ್ಲಿ ಶಾಕಿಂಗ್ ಘಟನೆ
Murder
ಸುಷ್ಮಾ ಚಕ್ರೆ
|

Updated on:Jun 28, 2025 | 9:46 PM

Share

ಔರಂಗಾಬಾದ್, ಜೂನ್ 28: ಕೌಟುಂಬಿಕ ಸಂಬಂಧದಲ್ಲಿ ಕಲಹ ಉಂಟಾಗಿ, ಮಹಿಳೆಯೊಬ್ಬರು ತನ್ನ ಗಂಡನನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. ಬಿಹಾರದ ಔರಂಗಾಬಾದ್ ಜಿಲ್ಲೆಯ ಮಹಿಳೆಯೊಬ್ಬರು ತನ್ನ ಪ್ರಿಯಕರನ ಸಹಾಯದಿಂದ ಗಂಡನ ಕೊಲೆಗೆ ಸಂಚು ರೂಪಿಸಿ, ಆತನನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ದೇಶಾದ್ಯಂತ ಇಂತಹ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಂಧನ ನಡೆದಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಜೂನ್ 25ರಂದು ಬಂದೇಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮೌನಾ ಗ್ರಾಮದ ಬಳಿಯ ಹೊಲದಲ್ಲಿ ಪತಿಯ ಶವ ಪತ್ತೆಯಾದ ಸ್ವಲ್ಪ ಸಮಯದ ನಂತರ, ಆ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಮೃತರನ್ನು ಬಿಕ್ಕು ಎಂದು ಗುರುತಿಸಲಾಗಿದೆ. “ಮಹಿಳೆಯನ್ನು ಜೂನ್ 25ರಂದು ಬಂಧಿಸಲಾಯಿತು. ಆಕೆ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಈ ಸಂಚನ್ನು ಮಹಿಳೆ ಮತ್ತು ಅವರ ಪ್ರೇಮಿ ಇಬ್ಬರೂ ಸೇರಿ ಮಾಡಿದ್ದಾರೆ. ಆತನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಕೆಲಸದಿಂದ ತೆಗೆದಿದಕ್ಕೆ ಮುಂಬೈ ಮೂಲದ ಉದ್ಯಮಿಯನ್ನು ಕೊಲೆ ಮಾಡಲು ಯತ್ನ

ಮೃತರ ಪತ್ನಿ ತನ್ನ ಪ್ರಿಯಕರನ ಸಹಾಯದಿಂದ ತನ್ನ ಗಂಡನನ್ನು ಕೊಲ್ಲಲು ಸಂಚು ರೂಪಿಸಿದ್ದಾಳೆ ಎಂದು ತನಿಖಾ ತಂಡವು ಕಂಡುಹಿಡಿದಿದೆ. ಆ ಮಹಿಳೆಯ ಪ್ರಿಯಕರನನ್ನು ಬಂಧಿಸಲು ಹುಡುಕಾಟ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ಅವರ ವಿವಾಹದ ಸುಮಾರು 1 ತಿಂಗಳ ನಂತರ ಪತಿಗೆ ವಿಷಪ್ರಾಶನ ಮಾಡಿ ಕೊಂದ ಆರೋಪದ ಮೇಲೆ 20 ವರ್ಷದ ಮಹಿಳೆಯನ್ನು ಬಂಧಿಸಲಾಯಿತು. ಆ ಮಹಿಳೆಯ ಅತ್ತೆ ಪೊಲೀಸರಿಗೆ ದೂರು ನೀಡಿದ ನಂತರ ಆಕೆಯನ್ನು ಬಂಧಿಸಲಾಯಿತು. ಆರೋಪಿಯನ್ನು ಜೂನ್ 17ರಂದು ಜೈಲಿಗೆ ಕಳುಹಿಸಲಾಯಿತು. ಜೂನ್ 15ರಂದು ರಾಂಕಾ ಪೊಲೀಸ್ ಠಾಣೆ ವ್ಯಾಪ್ತಿಯ ಬಹೋಕುದಾರ್ ಗ್ರಾಮದಲ್ಲಿ ಈ ಘಟನೆ ನಡೆದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:44 pm, Sat, 28 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ