ತನ್ನ ತಮ್ಮನ ಜೊತೆ ಮಲಗಲೊಪ್ಪದ ಹೆಂಡತಿಯನ್ನು 10 ದಿನ ರೂಂನಲ್ಲಿ ಕೂಡಿಹಾಕಿದ ಗಂಡ!

ಆಂಧ್ರ ಪ್ರದೇಶದಲ್ಲೊಂದು ಶಾಕಿಂಗ್ ಘಟನೆ ನಡೆದಿದೆ. ಮಹಿಳೆಯೊಬ್ಬರ ಗಂಡ ಆತನ ತಮ್ಮನೊಂದಿಗೆ ಅಕ್ರಮ ಸಂಬಂಧ ಹೊಂದುವಂತೆ ತನ್ನ ಹೆಂಡತಿಯ ಮೇಲೆ ಒತ್ತಡ ಹೇರುತ್ತಿದ್ದರು. ಮೈದುನನ ಜೊತೆ ಮಲಗಲು ಆಕೆ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ಗಂಡ ಆಕೆಯನ್ನು ಮಗುವಿನೊಂದಿಗೆ ರೂಂನಲ್ಲಿ 10 ದಿನಗಳ ಕಾಲ ಕೂಡಿಹಾಕಿದ್ದಾನೆ. ಗಂಡು ಮಗು ಬೇಕೆಂದು ಈ ರೀತಿ ಆಕೆಗೆ ಗಂಡನ ತಮ್ಮನ ಜೊತೆ ಸಂಬಂಧ ಹೊಂದಲು ಒತ್ತಾಯಿಸಲಾಗಿತ್ತು ಎನ್ನಲಾಗಿದೆ.

ತನ್ನ ತಮ್ಮನ ಜೊತೆ ಮಲಗಲೊಪ್ಪದ ಹೆಂಡತಿಯನ್ನು 10 ದಿನ ರೂಂನಲ್ಲಿ ಕೂಡಿಹಾಕಿದ ಗಂಡ!
Woman Harassment

Updated on: Oct 31, 2025 | 10:23 PM

ಹೈದರಾಬಾದ್, ಅಕ್ಟೋಬರ್ 31: ಮಹಿಳೆಯೊಬ್ಬಳಿಗೆ ಪುಟ್ಟ ಮಗುವಿತ್ತು. ಆಕೆಗೆ ಆಕೆಯ ಗಂಡ ತನ್ನ ತಮ್ಮನ ಜೊತೆ ಲೈಂಗಿಕ ಸಂಬಂಧ ಹೊಂದಲು ಒತ್ತಾಯಿಸುತ್ತಿದ್ದ. ಆದರೆ ಮೈದುನನ ಜೊತೆ ಮಲಗಲು ಆಕೆ ಒಪ್ಪಿರಲಿಲ್ಲ. ಆಕೆಯ ಗಂಡನ ಅಪ್ಪ-ಅಮ್ಮ ಕೂಡ ಸೊಸೆ ತಮ್ಮ ಕಿರಿಯ ಮಗನ ಜೊತೆ ಸಂಬಂಧ (Extramarital Affair) ಹೊಂದಬೇಕೆಂದು ಬಯಸಿದ್ದರು. ಇದಕ್ಕೆ ಆಕೆ ಒಪ್ಪದಿದ್ದಾಗ ಪುಟ್ಟ ಮಗುವಿನ ಜೊತೆ ಆಕೆಯನ್ನು 10 ದಿನ ರೂಂನಲ್ಲಿ ಕೂಡಿಹಾಕಲಾಗಿದೆ.

ಆ ರೂಂನಲ್ಲಿ ಅವರಿಗೆ ಆಹಾರ, ನೀರು, ಕರೆಂಟ್, ಟಾಯ್ಲೆಟ್ ಯಾವ ಸೌಲಭ್ಯವನ್ನೂ ನೀಡದೆ ಕತ್ತಲೆ ಕೋಣೆಯಲ್ಲಿ ಕೂಡಿಹಾಕಲಾಗಿತ್ತು. ಆಕೆಯ ಮಗುವಿಗೆ ಕೇವಲ ಎದೆಹಾಲನ್ನು ನೀಡುತ್ತಾ ಆಕೆ 10 ದಿನಗಳ ಕಾಲ ಆ ರೂಂನಲ್ಲಿ ಬಂಧಿಸಲ್ಪಟ್ಟಿದ್ದರು. ಆದರೆ, 10 ದಿನ ಹೊಟ್ಟೆಗೆ ಆಹಾರವಿಲ್ಲದೆ ಎಳೆಮಗುವಿಗೆ ಹಾಲನ್ನೂ ನೀಡುತ್ತಿದ್ದುದರಿಂದ ಆಕೆ ಸಂಪೂರ್ಣ ನಿತ್ರಾಣವಾಗಿದ್ದರು. ಅಲ್ಲದೆ, ಟಾಯ್ಲೆಟ್ ವ್ಯವಸ್ಥೆಯೂ ಇಲ್ಲದಿದ್ದರಿಂದ ಆ ರೂಂನಲ್ಲೇ ಆಕೆ ಮತ್ತು ಆಕೆಯ ಮಗು ಮಲವಿಸರ್ಜನೆ ಮಾಡುವ ಅನಿವಾರ್ಯತೆ ಇತ್ತು. ಅದರ ಜೊತೆಗೇ ಅವರು ಮಲಗಬೇಕಿತ್ತು!

ಇದನ್ನೂ ಓದಿ: ಮಾಟ-ಮಂತ್ರದ ವಿಚಾರವಾಗಿ ಕಲಹ, ಪತ್ನಿ ಮೇಲೆ ಬಿಸಿ ಬಿಸಿ ಫಿಶ್ ಕರಿ ಎರಚಿದ ಪತಿ

ಈ ರೀತಿಯ ಅಮಾನವೀಯ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. 2 ವರ್ಷಗಳ ಹಿಂದೆ ರಂಜಿತ್ ಎಂಬಾತನನ್ನು ಮದುವೆಯಾಗಿದ್ದ 25 ವರ್ಷದ ಮಹಿಳೆ ತನ್ನ ಅತ್ತೆ, ಮಾವ, ಅತ್ತಿಗೆಯ ಕಿರುಕುಳದಿಂದ ಬೇಸತ್ತಿದ್ದರು. ಆಕೆಗೆ ಹೆಣ್ಣು ಮಗುವಾಗಿತ್ತು. ಆದರೆ, ರಂಜಿತ್​​ನ ತಮ್ಮ ಪ್ರವೀಣ್ ಜೊತೆ ಸಂಬಂಧ ಬೆಳೆಸಿದರೆ ಆಕೆಗೆ ಗಂಡುಮಗುವಾಗುತ್ತದೆ ಎಂಬ ಕಾರಣಕ್ಕೆ ಅವರೆಲ್ಲರೂ ಆಕೆಯನ್ನು ಪ್ರವೀಣನ ಜೊತೆ ಮಲಗಲು ಒತ್ತಾಯಿಸುತ್ತಿದ್ದರು. ಇದಕ್ಕೆ ಆಕೆ ಒಪ್ಪಿರಲಿಲ್ಲ. ಇದರಿಂದ ಆಕೆಗೆ ಕಿರುಕುಳ ನೀಡಲಾಯಿತು.

ಇದನ್ನೂ ಓದಿ: ಬೆಂಗಳೂರು: ಪ್ರಿಯಕರನನ್ನು ಮನೆಗೆ ಕರೆದುಕೊಂಡು ಬಂದು ತಾಯಿ ಕೈಗೆ ಸಿಕ್ಕಿಬಿದ್ದ ಮಗಳು, ಮಧ್ಯರಾತ್ರಿ ಅಲ್ಲಿ ನಡೆದಿದ್ದೇನು?

ಈ ಪ್ರಕರಣವು ರಾಜ್ಯ ಮಾನವ ಹಕ್ಕುಗಳ ಆಯೋಗವನ್ನು ತಲುಪಿದ ನಂತರ ಇದು ದೇಶಾದ್ಯಂತ ಗಮನ ಸೆಳೆದಿದೆ. ಪೊಲೀಸರು ಆ ಮನೆಗೆ ತೆರಳಿ ಆ ಮಹಿಳೆಯನ್ನು ಕತ್ತಲೆ ಕೋಣೆಯಿಂದ ಬಿಡುಗಡೆ ಮಾಡಿದರು. ನಂತರ ಆ ಕುಟುಂಬದ ಸದಸ್ಯರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us