Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಸ್ಕೂಟಿಗೆ ಡಿಕ್ಕಿ ಹೊಡೆದು ಮೀಟರ್​ಗಟ್ಟಲೆ ದೂರ ಎಳೆದೊಯ್ದ ಕಾರು; ವಿಡಿಯೋ ವೈರಲ್

ಇಂದು ಮುಂಜಾನೆ ಗುರುಗ್ರಾಮ್‌ನ ಬಸಾಯಿ ರಸ್ತೆಯಲ್ಲಿ ವೇಗವಾಗಿ ಬಂದ ಎಸ್‌ಯುವಿ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸ್ಕೂಟರ್​​ನ ಚಾಲಕನನ್ನು ಹಲವಾರು ಮೀಟರ್‌ಗಳವರೆಗೆ ಎಳೆದೊಯ್ದಿರುವ ಶಾಕಿಂಗ್ ವಿಡಿಯೋವೊಂದು ವೈರಲ್ ಆಗಿದೆ.

Shocking Video: ಸ್ಕೂಟಿಗೆ ಡಿಕ್ಕಿ ಹೊಡೆದು ಮೀಟರ್​ಗಟ್ಟಲೆ ದೂರ ಎಳೆದೊಯ್ದ ಕಾರು; ವಿಡಿಯೋ ವೈರಲ್
ಸ್ಕೂಟಿಗೆ ಡಿಕ್ಕಿ ಹೊಡೆದು ಮೀಟರ್​ಗಟ್ಟಲೆ ದೂರ ಎಳೆದೊಯ್ದ ಕಾರು
Follow us
ಸುಷ್ಮಾ ಚಕ್ರೆ
|

Updated on: May 27, 2024 | 10:39 PM

ಗುರುಗ್ರಾಮ: ಪುಣೆಯಲ್ಲಿ ಪೋರ್ಷೆ (Porsche Accident) ಕಾರು ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಗುರುಗ್ರಾಮದಲ್ಲಿ (Gurugram) ಮತ್ತೊಂದು ಶಾಕಿಂಗ್ ಘಟನೆ ನಡೆದಿದ್ದು, ಇಂದು ಮುಂಜಾನೆ ನಸುಕಿನಲ್ಲಿ ಹರಿಯಾಣದ ಗುರುಗ್ರಾಮ್ ಜಿಲ್ಲೆಯ ಖಾಲಿ ಬಸಾಯಿ ರಸ್ತೆಯಲ್ಲಿ ವೇಗವಾಗಿ ಬಂದ ಕಾರೊಂದು ಸ್ಕೂಟರ್​ಗೆ ಡಿಕ್ಕಿ ಹೊಡೆದು ಚಾಲಕನನ್ನು ಹಲವಾರು ಮೀಟರ್​ಗಳಷ್ಟು ದೂರ ಎಳೆದೊಯ್ದಿದೆ.

ಈ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಬಹುತೇಕ ನಿರ್ಜನವಾಗಿದ್ದ ರಸ್ತೆಯಲ್ಲಿ ಬಿಳಿ ಬಣ್ಣದ ಎಸ್‌ಯುವಿ ವೇಗವಾಗಿ ಚಲಿಸುತ್ತಿದ್ದು, ಕಾರಿನ ಮುಂದೆ ಚಲಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮದಿಂದ ಸ್ಕೂಟರ್ ಮೇಲಕ್ಕೆ ಹಾರಿದೆ. ಅದರ ಚಾಲಕನನ್ನು ದೂರಕ್ಕೆ ಕಾರು ಎಳೆದೊಯ್ದಿದೆ. ಆದರೆ, ಡಿಕ್ಕಿ ಹೊಡೆದ ನಂತರವೂ ಕಾರು ನಿಲ್ಲಲಿಲ್ಲ.

ಇದನ್ನೂ ಓದಿ: Viral Video: ಮಹಿಳೆಯ ಪರ್ಸ್ ಎಗರಿಸಲು ಬಂದ ಕಳ್ಳ ಬಸ್​​​ನಲ್ಲೇ ಲಾಕ್, ವಿಡಿಯೋ ವೈರಲ್

ಪಂಕಜ್ ಜುನೇಜಾ ಎಂದು ಗುರುತಿಸಲ್ಪಟ್ಟ ಸವಾರನನ್ನು ಕಾರು ಆ ರಸ್ತೆಯಲ್ಲಿ ಸುಮಾರು 50 ಮೀಟರ್‌ಗಳವರೆಗೆ ಎಳೆದೊಯ್ದಿದೆ. ನಂತರ ಕಾರು ವೇಗವಾಗಿ ಚಲಿಸಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಅಪಘಾತದ ನಂತರ ಎಸ್‌ಯುವಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ನಡೆದ ಬಳಿಕ ಸ್ಥಳದಿಂದ ಪರಾರಿಯಾಗಿರುವ ಕಾರು ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸ್ಕೂಟರ್‌ಗೆ ಡಿಕ್ಕಿ ಹೊಡೆದ ನಂತರ ಕಾರು ನಿಲ್ಲಿಸಲಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಘಟನೆಯಲ್ಲಿ ದೇವಿಲಾಲ್ ಕಾಲೋನಿಯ ನಿವಾಸಿ ಪಂಕಜ್ ಜುನೇಜಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಗುರುಗ್ರಾಮದ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Viral Video: ಟ್ರಾಫಿಕ್​ನಲ್ಲೇ ರಸ್ತೆಯ ಡಿವೈಡರ್ ಮೇಲೆ ಬೈಕ್ ಓಡಿಸಿದ ಯುವಕ; ಭಯಾನಕ ವಿಡಿಯೋ ವೈರಲ್

ತರಕಾರಿ ಮಾರಾಟಗಾರರಾಗಿರುವ ಪಂಕಜ್ ಜುನೇಜಾ ಅವರು ತಮ್ಮ ಸ್ಕೂಟರ್‌ನಲ್ಲಿ ಖಂಡಸಾ ತರಕಾರಿ ಮಾರುಕಟ್ಟೆಗೆ ತೆರಳುತ್ತಿದ್ದಾಗ ಅವರ ಸ್ಕೂಟರ್​ಗೆ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಪೊಲೀಸರು ಸ್ಕೂಟರ್ ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಕಾರನ್ನು ಗುರುತಿಸಲು ಮತ್ತು ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ