AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಠಾತ್ತನೆ ಬ್ರೇಕ್ ಹಾಕಿದ ಚಾಲಕ, ತಾಯಿಯ ಕೈಯಿಂದ ಜಾರಿ ಬಸ್ಸಿಂದ ಹೊರಗೆ ಬಿದ್ದ ಮಗು

ಬಸ್ಸಿನಲ್ಲಿ ಅದರಲ್ಲೂ ಬಾಗಿಲ ಸಮೀಪ ಕುಳಿತಾಗ ತುಂಬಾ ಎಚ್ಚರಿಕೆಯಿಂದಿರಬೇಕು. ಹಠಾತ್ತನೆ ಬ್ರೇಕ್ ಹಾಕಿದಾಗ ತಾಯಿಯ ಕೈಯಿಂದ ಮಗು(Baby) ಜಾರಿ ಕೆಳಗೆ ಬಿದ್ದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಬಸ್ಸಿನ ಮುಂಭಾಗ ಮೊದಲ ಸೀಟಿನಲ್ಲಿ ಮಗುವನ್ನು ತೊಡೆಯ ಮೇಲೆ ಕೂರಿಸಿಕೊಂಡು ಕುಳಿತಿದ್ದ ವ್ಯಕ್ತಿ ಮಗುವಿನ ಸಮೇತ ಕೆಳಗೆ ಬಿದ್ದಿದ್ದಾರೆ. ಬಸ್​ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಹಿಡಿದುಕೊಳ್ಳಲು ಬೆಂಬಲಕ್ಕೇನು ಸಿಗದೆ ಎರಡು ವರ್ಷದ ಮಗುವಿನ ಸಮೇತ ಕೆಳಗೆ ಬಿದ್ದಿದ್ದಾರೆ.

Video: ಹಠಾತ್ತನೆ ಬ್ರೇಕ್ ಹಾಕಿದ ಚಾಲಕ, ತಾಯಿಯ ಕೈಯಿಂದ ಜಾರಿ ಬಸ್ಸಿಂದ ಹೊರಗೆ ಬಿದ್ದ ಮಗು
ಬಸ್
ನಯನಾ ರಾಜೀವ್
|

Updated on: Aug 03, 2025 | 9:58 AM

Share

ಚೆನ್ನೈ, ಆಗಸ್ಟ್​ 03: ಬಸ್ಸಿನಲ್ಲಿ ಅದರಲ್ಲೂ ಬಾಗಿಲ ಸಮೀಪ ಕುಳಿತಾಗ ತುಂಬಾ ಎಚ್ಚರಿಕೆಯಿಂದಿರಬೇಕು. ಹಠಾತ್ತನೆ ಬ್ರೇಕ್ ಹಾಕಿದ್ದಕ್ಕೆ ತಾಯಿಯ ಕೈಯಿಂದ ಮಗು(Baby) ಜಾರಿ ಕೆಳಗೆ ಬಿದ್ದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಬಸ್ಸಿನ ಮುಂಭಾಗ ಮೊದಲ ಸೀಟಿನಲ್ಲಿ ಮಗುವನ್ನು ತೊಡೆಯ ಮೇಲೆ ಕೂರಿಸಿಕೊಂಡು ಕುಳಿತಿದ್ದ ವ್ಯಕ್ತಿ ಕೂಡ ಮಗುವಿನ ಸಮೇತ ಕೆಳಗೆ ಬಿದ್ದಿದ್ದಾರೆ.

ಬಸ್​ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಹಿಡಿದುಕೊಳ್ಳಲು ಬೆಂಬಲಕ್ಕೇನು ಸಿಗದೆ ಎರಡು ವರ್ಷದ ಮಗುವಿನ ಸಮೇತ ಕೆಳಗೆ ಬಿದ್ದಿದ್ದಾರೆ. ಹಾಗೆಯೇ ಮಹಿಳೆಗೆ ಕೂಡ ಅದೇ ರೀತಿಯಾಗಿ ಏಕಾಏಕಿ ಮಗು ಕೈಜಾರಿ ಕೆಳಗೆ ಬಿದ್ದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಇದರಲ್ಲಿ ಆ ವ್ಯಕ್ತಿಯ ತಪ್ಪಿರುವುದು ಕೂಡ ಗೋಚರಿಸುತ್ತದೆ. ಅಲ್ಲಿ ಕೂತಾಗ ಹಿಡಿದುಕೊಳ್ಳಲು ಯಾವುದೇ ಸಪೋರ್ಟ್​ ಇಲ್ಲದಿದ್ದರೂ ಮಗುವನ್ನು ಕೂರಿಸಿಕೊಂಡು ಮೊಬೈಲ್​​ ನೋಡುತ್ತಿರುವುದನ್ನು ಕಾಣಬಹುದು.

ಬಸ್ ಏಕಾಏಕಿ ಬ್ರೇಕ್ ಹಾಕಿದಾಗ ಒಂದು ಕೈಯಲ್ಲಿ ಮಗು ಇನ್ನೊಂದು ಕೈಯಲ್ಲಿ ಮೊಬೈಲ್ ಇದ್ದ ಕಾರಣ ಕೆಳಗೆ ಬಿದ್ದಿದ್ದಾರೆ. ಶಿಶುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮತ್ತಷ್ಟು ಓದಿ: Shocking News: ಆಟವಾಡುತ್ತಾ ನಾಗರಹಾವನ್ನು ಕಚ್ಚಿ ಸಾಯಿಸಿದ 1 ವರ್ಷದ ಮಗು!

ಶ್ರೀವಿಲ್ಲಿಪುತೂರ್ ಬಳಿಯ ಮುತ್ತುಲಿಂಗಪುರಂನ ಮದನ್ ಕುಮಾರ್ ತನ್ನ ಸಹೋದರಿ ಮತ್ತು ಇಬ್ಬರು ಗಂಡು ಮಕ್ಕಳೊಂದಿಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಮಹಿಳೆ ತನ್ನ ಒಂದು ವರ್ಷದ ಮಗನನ್ನು ಹಿಡಿದುಕೊಂಡು ಕುಳಿತಿದ್ದರೆ, ಅವರ ಹಿರಿಯ ಮಗ 2 ವರ್ಷದ ಮದನ್ ಕುಮಾರ್ ಜೊತೆಗಿದ್ದ. ಮಧುರೈನಿಂದ ಶ್ರೀವಿಲ್ಲಿಪುತೂರ್‌ಗೆ ಬಸ್ ಸಂಚರಿಸುತ್ತಿತ್ತು. ಮೀನಾಕ್ಷಿಪುರಂ ಗ್ರಾಮದ ಬಳಿ ಬಂದಾಗ ಚಾಲಕ ಹಠಾತ್ ಬ್ರೇಕ್ ಹಾಕಿದ್ದರು. ಆ ಆಘಾತದಿಂದಾಗಿ, ಮಹಿಳೆ ತನ್ನ ಮಗನ ಹಿಡಿತವನ್ನು ಕಳೆದುಕೊಂಡಿದ್ದರು.

ಮತ್ತು ಅವನು ಬಸ್ಸಿನ ಹೊರಗೆ ಬಿದ್ದಿದ್ದಾನೆ. ರಸ್ತೆಬದಿಯಲ್ಲಿ ನಿಂತಿದ್ದ ವೃದ್ಧರೊಬ್ಬರು ಮಗುವಿಗೆ ಸಹಾಯ ಮಾಡಲು ಧಾವಿಸಿದರು, ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಯಿತು. ಮದನ್ ಕುಮಾರ್ ಮತ್ತು ಅವರ ಸೋದರಳಿಯ ಬಸ್ಸಿನೊಳಗೆ ನೆಲದ ಮೇಲೆ ಬಿದ್ದರು. ಈ ಸಂದರ್ಭದಲ್ಲಿ ಕುಮಾರ್ ಅವರ ಮುಖಕ್ಕೆ ಗಾಯಗಳಾಗಿವೆ.

ಚೆನ್ನೈನ ಪೂನಮಲ್ಲಿಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ, ಕುಡಿದ ಮತ್ತಿನಲ್ಲಿದ್ದ ಚಾಲಕನೊಬ್ಬ ಚಲಾಯಿಸಿಕೊಂಡು ಬಂದ ನೀರಿನ ಟ್ಯಾಂಕರ್ ದ್ವಿಚಕ್ರ ವಾಹನ ಮತ್ತು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಸೆನ್ನೀರ್ಕುಪ್ಪಂನಲ್ಲಿ ಟ್ಯಾಂಕರ್ ನೀರು ತುಂಬಿಸಿ ಅವಡಿ-ಪೂನಮಲ್ಲಿ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?