AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manjuvirattu Video: ತಮಿಳುನಾಡಿನಲ್ಲಿ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು

Shocking Video: ತಮಿಳುನಾಡಿನಲ್ಲಿ ಸಾಂಪ್ರದಾಯಿಕ ಕ್ರೀಡೆಯಾದ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಕೊಂಬಿನಿಂದ ಇರಿದ ಹಿನ್ನೆಲೆಯಲ್ಲಿ ಗೂಳಿಯನ್ನು ಪಳಗಿಸುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಘಟನೆಯನ್ನು ಸುತ್ತಲೂ ನೆರೆದಿದ್ದ ಪ್ರೇಕ್ಷಕರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಈ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Manjuvirattu Video: ತಮಿಳುನಾಡಿನಲ್ಲಿ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು
ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು
ಸುಷ್ಮಾ ಚಕ್ರೆ
|

Updated on:Jul 29, 2024 | 8:43 PM

Share

ಚೆನ್ನೈ: ತಮಿಳುನಾಡಿನಲ್ಲಿ ಮಂಜುವಿರಟ್ಟು ಅಥವಾ ಜಲ್ಲಿಕಟ್ಟು ಎಂದೂ ಕರೆಯಲಾಗುವ ಸಾಂಪ್ರದಾಯಿಕ ಕ್ರೀಡೆಯನ್ನು ನೋಡಲು ಸುತ್ತಲೂ ಜನರು ಸೇರಿದ್ದರು. ಈ ವೇಳೆ 28 ವರ್ಷದ ಯುವಕನತ್ತ ಬಂದ ಗೂಳಿ ತನ್ನ ಕೊಂಬುಗಳಿಂದ ಆತನ ಎದೆಯನ್ನು ಇರಿದಿದೆ. ಇದರಿಂದಾಗಿ ಕೆಳಗೆ ಕುಸಿದು ಬಿದ್ದ ಆತನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರಎ, ಎದೆಗೆ ಇರಿದು ತೀವ್ರವಾದ ಗಾಯಗಳಾಗಿದ್ದರಿಂದ ಆ ಯುವಕ ಸಾವನ್ನಪ್ಪಿದ್ದಾನೆ.

ತಮಿಳುನಾಡಿನ ಶಿವಗಂಗೆಯ ಕಾರೈಕುಡಿಯಲ್ಲಿ ಭಾನುವಾರ ಆಯೋಜಿಸಿದ್ದ ಗೂಳಿ ಪಳಗಿಸುವ ಕಾರ್ಯಕ್ರಮವಾದ ಮಂಜುವಿರಟ್ಟು ವೇಳೆ 28 ವರ್ಷದ ವ್ಯಕ್ತಿಯೊಬ್ಬ ಗೂಳಿಯ ದಾಳಿಯಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Video: ತಾಯಿ ಮುಂದೆಯೇ ಕುರಿ ಮರಿಯನ್ನು ದರದರನೇ ಎಳೆದೊಯ್ದ ಬೀದಿ ನಾಯಿಗಳು, ವಿಡಿಯೋ ವೈರಲ್‌

ಈ ತ್ತು ಹೋರಿಗಳನ್ನು ಕರೆತರಲಾಗಿತ್ತು. ಪ್ರತಿ ಗೂಳಿಯನ್ನು ಸುಮಾರು 30 ನಿಮಿಷಗಳ ಕಾಲ ನೆಲದ ಮೇಲೆ ಬಿಡಲಾಯಿತು. 9 ಜನರು ಅದನ್ನು ಪಳಗಿಸಲು ಪ್ರಯತ್ನಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಧುರೈ, ತಿರುಚ್ಚಿ, ರಾಮನಾಥಪುರಂ, ಪುದುಕೊಟ್ಟೈ ಸೇರಿದಂತೆ ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು.

ಈ ಕಾರ್ಯಕ್ರಮದ ನಾಲ್ಕನೇ ಸುತ್ತಿನ ಸಮಯದಲ್ಲಿ, ಸೇಲಂನ ಕಾರ್ತಿಕ್ ಎಂಬ ಯುವಕ ತನ್ನ ಕಡೆಗೆ ಬರುತ್ತಿದ್ದ ಗೂಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಅದು ಅವನ ಎದೆಯ ಮೇಲೆ ತನ್ನ ಕೊಂಬುಗಳಿಂದ ಇರಿಯಿತು. ನಂತರ ಅವನು ನೆಲದ ಮೇಲೆ ಕುಸಿದನು. ಈ ಘಟನೆಯ ನಂತರ ಕಾರ್ಯಕ್ರಮವನ್ನು ಮಧ್ಯದಲ್ಲಿ ನಿಲ್ಲಿಸಲಾಯಿತು ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕುಂದ್ರಕುಡಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Mon, 29 July 24

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!