AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manjuvirattu Video: ತಮಿಳುನಾಡಿನಲ್ಲಿ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು

Shocking Video: ತಮಿಳುನಾಡಿನಲ್ಲಿ ಸಾಂಪ್ರದಾಯಿಕ ಕ್ರೀಡೆಯಾದ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಕೊಂಬಿನಿಂದ ಇರಿದ ಹಿನ್ನೆಲೆಯಲ್ಲಿ ಗೂಳಿಯನ್ನು ಪಳಗಿಸುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಘಟನೆಯನ್ನು ಸುತ್ತಲೂ ನೆರೆದಿದ್ದ ಪ್ರೇಕ್ಷಕರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಈ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Manjuvirattu Video: ತಮಿಳುನಾಡಿನಲ್ಲಿ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು
ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು
ಸುಷ್ಮಾ ಚಕ್ರೆ
|

Updated on:Jul 29, 2024 | 8:43 PM

Share

ಚೆನ್ನೈ: ತಮಿಳುನಾಡಿನಲ್ಲಿ ಮಂಜುವಿರಟ್ಟು ಅಥವಾ ಜಲ್ಲಿಕಟ್ಟು ಎಂದೂ ಕರೆಯಲಾಗುವ ಸಾಂಪ್ರದಾಯಿಕ ಕ್ರೀಡೆಯನ್ನು ನೋಡಲು ಸುತ್ತಲೂ ಜನರು ಸೇರಿದ್ದರು. ಈ ವೇಳೆ 28 ವರ್ಷದ ಯುವಕನತ್ತ ಬಂದ ಗೂಳಿ ತನ್ನ ಕೊಂಬುಗಳಿಂದ ಆತನ ಎದೆಯನ್ನು ಇರಿದಿದೆ. ಇದರಿಂದಾಗಿ ಕೆಳಗೆ ಕುಸಿದು ಬಿದ್ದ ಆತನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರಎ, ಎದೆಗೆ ಇರಿದು ತೀವ್ರವಾದ ಗಾಯಗಳಾಗಿದ್ದರಿಂದ ಆ ಯುವಕ ಸಾವನ್ನಪ್ಪಿದ್ದಾನೆ.

ತಮಿಳುನಾಡಿನ ಶಿವಗಂಗೆಯ ಕಾರೈಕುಡಿಯಲ್ಲಿ ಭಾನುವಾರ ಆಯೋಜಿಸಿದ್ದ ಗೂಳಿ ಪಳಗಿಸುವ ಕಾರ್ಯಕ್ರಮವಾದ ಮಂಜುವಿರಟ್ಟು ವೇಳೆ 28 ವರ್ಷದ ವ್ಯಕ್ತಿಯೊಬ್ಬ ಗೂಳಿಯ ದಾಳಿಯಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Video: ತಾಯಿ ಮುಂದೆಯೇ ಕುರಿ ಮರಿಯನ್ನು ದರದರನೇ ಎಳೆದೊಯ್ದ ಬೀದಿ ನಾಯಿಗಳು, ವಿಡಿಯೋ ವೈರಲ್‌

ಈ ತ್ತು ಹೋರಿಗಳನ್ನು ಕರೆತರಲಾಗಿತ್ತು. ಪ್ರತಿ ಗೂಳಿಯನ್ನು ಸುಮಾರು 30 ನಿಮಿಷಗಳ ಕಾಲ ನೆಲದ ಮೇಲೆ ಬಿಡಲಾಯಿತು. 9 ಜನರು ಅದನ್ನು ಪಳಗಿಸಲು ಪ್ರಯತ್ನಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಧುರೈ, ತಿರುಚ್ಚಿ, ರಾಮನಾಥಪುರಂ, ಪುದುಕೊಟ್ಟೈ ಸೇರಿದಂತೆ ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು.

ಈ ಕಾರ್ಯಕ್ರಮದ ನಾಲ್ಕನೇ ಸುತ್ತಿನ ಸಮಯದಲ್ಲಿ, ಸೇಲಂನ ಕಾರ್ತಿಕ್ ಎಂಬ ಯುವಕ ತನ್ನ ಕಡೆಗೆ ಬರುತ್ತಿದ್ದ ಗೂಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಅದು ಅವನ ಎದೆಯ ಮೇಲೆ ತನ್ನ ಕೊಂಬುಗಳಿಂದ ಇರಿಯಿತು. ನಂತರ ಅವನು ನೆಲದ ಮೇಲೆ ಕುಸಿದನು. ಈ ಘಟನೆಯ ನಂತರ ಕಾರ್ಯಕ್ರಮವನ್ನು ಮಧ್ಯದಲ್ಲಿ ನಿಲ್ಲಿಸಲಾಯಿತು ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕುಂದ್ರಕುಡಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Mon, 29 July 24

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ