AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manjuvirattu Video: ತಮಿಳುನಾಡಿನಲ್ಲಿ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು

Shocking Video: ತಮಿಳುನಾಡಿನಲ್ಲಿ ಸಾಂಪ್ರದಾಯಿಕ ಕ್ರೀಡೆಯಾದ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಕೊಂಬಿನಿಂದ ಇರಿದ ಹಿನ್ನೆಲೆಯಲ್ಲಿ ಗೂಳಿಯನ್ನು ಪಳಗಿಸುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಘಟನೆಯನ್ನು ಸುತ್ತಲೂ ನೆರೆದಿದ್ದ ಪ್ರೇಕ್ಷಕರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಈ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Manjuvirattu Video: ತಮಿಳುನಾಡಿನಲ್ಲಿ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು
ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು
ಸುಷ್ಮಾ ಚಕ್ರೆ
|

Updated on:Jul 29, 2024 | 8:43 PM

Share

ಚೆನ್ನೈ: ತಮಿಳುನಾಡಿನಲ್ಲಿ ಮಂಜುವಿರಟ್ಟು ಅಥವಾ ಜಲ್ಲಿಕಟ್ಟು ಎಂದೂ ಕರೆಯಲಾಗುವ ಸಾಂಪ್ರದಾಯಿಕ ಕ್ರೀಡೆಯನ್ನು ನೋಡಲು ಸುತ್ತಲೂ ಜನರು ಸೇರಿದ್ದರು. ಈ ವೇಳೆ 28 ವರ್ಷದ ಯುವಕನತ್ತ ಬಂದ ಗೂಳಿ ತನ್ನ ಕೊಂಬುಗಳಿಂದ ಆತನ ಎದೆಯನ್ನು ಇರಿದಿದೆ. ಇದರಿಂದಾಗಿ ಕೆಳಗೆ ಕುಸಿದು ಬಿದ್ದ ಆತನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರಎ, ಎದೆಗೆ ಇರಿದು ತೀವ್ರವಾದ ಗಾಯಗಳಾಗಿದ್ದರಿಂದ ಆ ಯುವಕ ಸಾವನ್ನಪ್ಪಿದ್ದಾನೆ.

ತಮಿಳುನಾಡಿನ ಶಿವಗಂಗೆಯ ಕಾರೈಕುಡಿಯಲ್ಲಿ ಭಾನುವಾರ ಆಯೋಜಿಸಿದ್ದ ಗೂಳಿ ಪಳಗಿಸುವ ಕಾರ್ಯಕ್ರಮವಾದ ಮಂಜುವಿರಟ್ಟು ವೇಳೆ 28 ವರ್ಷದ ವ್ಯಕ್ತಿಯೊಬ್ಬ ಗೂಳಿಯ ದಾಳಿಯಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Video: ತಾಯಿ ಮುಂದೆಯೇ ಕುರಿ ಮರಿಯನ್ನು ದರದರನೇ ಎಳೆದೊಯ್ದ ಬೀದಿ ನಾಯಿಗಳು, ವಿಡಿಯೋ ವೈರಲ್‌

ಈ ತ್ತು ಹೋರಿಗಳನ್ನು ಕರೆತರಲಾಗಿತ್ತು. ಪ್ರತಿ ಗೂಳಿಯನ್ನು ಸುಮಾರು 30 ನಿಮಿಷಗಳ ಕಾಲ ನೆಲದ ಮೇಲೆ ಬಿಡಲಾಯಿತು. 9 ಜನರು ಅದನ್ನು ಪಳಗಿಸಲು ಪ್ರಯತ್ನಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಧುರೈ, ತಿರುಚ್ಚಿ, ರಾಮನಾಥಪುರಂ, ಪುದುಕೊಟ್ಟೈ ಸೇರಿದಂತೆ ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು.

ಈ ಕಾರ್ಯಕ್ರಮದ ನಾಲ್ಕನೇ ಸುತ್ತಿನ ಸಮಯದಲ್ಲಿ, ಸೇಲಂನ ಕಾರ್ತಿಕ್ ಎಂಬ ಯುವಕ ತನ್ನ ಕಡೆಗೆ ಬರುತ್ತಿದ್ದ ಗೂಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಅದು ಅವನ ಎದೆಯ ಮೇಲೆ ತನ್ನ ಕೊಂಬುಗಳಿಂದ ಇರಿಯಿತು. ನಂತರ ಅವನು ನೆಲದ ಮೇಲೆ ಕುಸಿದನು. ಈ ಘಟನೆಯ ನಂತರ ಕಾರ್ಯಕ್ರಮವನ್ನು ಮಧ್ಯದಲ್ಲಿ ನಿಲ್ಲಿಸಲಾಯಿತು ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕುಂದ್ರಕುಡಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Mon, 29 July 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್