AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manjuvirattu Video: ತಮಿಳುನಾಡಿನಲ್ಲಿ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು

Shocking Video: ತಮಿಳುನಾಡಿನಲ್ಲಿ ಸಾಂಪ್ರದಾಯಿಕ ಕ್ರೀಡೆಯಾದ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಕೊಂಬಿನಿಂದ ಇರಿದ ಹಿನ್ನೆಲೆಯಲ್ಲಿ ಗೂಳಿಯನ್ನು ಪಳಗಿಸುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಘಟನೆಯನ್ನು ಸುತ್ತಲೂ ನೆರೆದಿದ್ದ ಪ್ರೇಕ್ಷಕರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಈ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Manjuvirattu Video: ತಮಿಳುನಾಡಿನಲ್ಲಿ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು
ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಗುದ್ದಿ ಯುವಕ ಸಾವು
ಸುಷ್ಮಾ ಚಕ್ರೆ
|

Updated on:Jul 29, 2024 | 8:43 PM

Share

ಚೆನ್ನೈ: ತಮಿಳುನಾಡಿನಲ್ಲಿ ಮಂಜುವಿರಟ್ಟು ಅಥವಾ ಜಲ್ಲಿಕಟ್ಟು ಎಂದೂ ಕರೆಯಲಾಗುವ ಸಾಂಪ್ರದಾಯಿಕ ಕ್ರೀಡೆಯನ್ನು ನೋಡಲು ಸುತ್ತಲೂ ಜನರು ಸೇರಿದ್ದರು. ಈ ವೇಳೆ 28 ವರ್ಷದ ಯುವಕನತ್ತ ಬಂದ ಗೂಳಿ ತನ್ನ ಕೊಂಬುಗಳಿಂದ ಆತನ ಎದೆಯನ್ನು ಇರಿದಿದೆ. ಇದರಿಂದಾಗಿ ಕೆಳಗೆ ಕುಸಿದು ಬಿದ್ದ ಆತನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರಎ, ಎದೆಗೆ ಇರಿದು ತೀವ್ರವಾದ ಗಾಯಗಳಾಗಿದ್ದರಿಂದ ಆ ಯುವಕ ಸಾವನ್ನಪ್ಪಿದ್ದಾನೆ.

ತಮಿಳುನಾಡಿನ ಶಿವಗಂಗೆಯ ಕಾರೈಕುಡಿಯಲ್ಲಿ ಭಾನುವಾರ ಆಯೋಜಿಸಿದ್ದ ಗೂಳಿ ಪಳಗಿಸುವ ಕಾರ್ಯಕ್ರಮವಾದ ಮಂಜುವಿರಟ್ಟು ವೇಳೆ 28 ವರ್ಷದ ವ್ಯಕ್ತಿಯೊಬ್ಬ ಗೂಳಿಯ ದಾಳಿಯಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Video: ತಾಯಿ ಮುಂದೆಯೇ ಕುರಿ ಮರಿಯನ್ನು ದರದರನೇ ಎಳೆದೊಯ್ದ ಬೀದಿ ನಾಯಿಗಳು, ವಿಡಿಯೋ ವೈರಲ್‌

ಈ ತ್ತು ಹೋರಿಗಳನ್ನು ಕರೆತರಲಾಗಿತ್ತು. ಪ್ರತಿ ಗೂಳಿಯನ್ನು ಸುಮಾರು 30 ನಿಮಿಷಗಳ ಕಾಲ ನೆಲದ ಮೇಲೆ ಬಿಡಲಾಯಿತು. 9 ಜನರು ಅದನ್ನು ಪಳಗಿಸಲು ಪ್ರಯತ್ನಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಧುರೈ, ತಿರುಚ್ಚಿ, ರಾಮನಾಥಪುರಂ, ಪುದುಕೊಟ್ಟೈ ಸೇರಿದಂತೆ ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು.

ಈ ಕಾರ್ಯಕ್ರಮದ ನಾಲ್ಕನೇ ಸುತ್ತಿನ ಸಮಯದಲ್ಲಿ, ಸೇಲಂನ ಕಾರ್ತಿಕ್ ಎಂಬ ಯುವಕ ತನ್ನ ಕಡೆಗೆ ಬರುತ್ತಿದ್ದ ಗೂಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಅದು ಅವನ ಎದೆಯ ಮೇಲೆ ತನ್ನ ಕೊಂಬುಗಳಿಂದ ಇರಿಯಿತು. ನಂತರ ಅವನು ನೆಲದ ಮೇಲೆ ಕುಸಿದನು. ಈ ಘಟನೆಯ ನಂತರ ಕಾರ್ಯಕ್ರಮವನ್ನು ಮಧ್ಯದಲ್ಲಿ ನಿಲ್ಲಿಸಲಾಯಿತು ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕುಂದ್ರಕುಡಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Mon, 29 July 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್