AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್
ನಾಯಿಗೆ ನೇಣು ಹಾಕುತ್ತಿರುವ ದೃಶ್ಯ
TV9 Web
| Edited By: |

Updated on: Nov 14, 2022 | 1:47 PM

Share

ಘಜಿಯಾಬಾದ್: ನಾಯಿಯೊಂದಕ್ಕೆ ಹಿಂಸೆ ಕೊಟ್ಟು, ಮೂವರು ವ್ಯಕ್ತಿಗಳು ಸೇರಿ ನೇಣು ಹಾಕಿ ಕೊಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಉತ್ತರ ಪ್ರದೇಶದ ಘಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆ ಮೂವರು ವ್ಯಕ್ತಿಗಳಿಗೆ ನೋಟಿಸ್ ನೀಡಿದ್ದಾರೆ. ಈ ಹೃದಯ ವಿದ್ರಾವಕ ವಿಡಿಯೋವನ್ನು ಘಜಿಯಾಬಾದ್‌ನ (Ghaziabad)  ಲೋನಿ ಬಳಿಯ ಎಲೈಚಿಪುರ ಪ್ರದೇಶದ ಟ್ರೋನಿಕಾ ಸಿಟಿಯಲ್ಲಿ ಚಿತ್ರೀಕರಿಸಲಾಗಿದೆ.

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ. ಆಗ ನಾಯಿ ನೋವಿನಿಂದ ಹಾಗೂ ಉಸಿರಾಡಲಾಗದೆ ಜೋರಾಗಿ ಕಿರುಚಾಡುತ್ತದೆ. ಅದರಿಂದ ಇನ್ನಷ್ಟು ಖುಷಿಯಾದ ಆ ಮೂವರು ನಾಯಿಗೆ ಚಿತ್ರಹಿಂಸೆ ನೀಡಿ, ಅದರ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ಆ ನಾಯಿಯನ್ನು ಕೊಲ್ಲುತ್ತಾರೆ.

ಇದನ್ನೂ ಓದಿ: Viral Video: ಉಕ್ರೇನ್ ಸೈನ್ಯದಿಂದ ಸುರಕ್ಷಿತವಾಗಿ ಬಂದ ಮೊಮ್ಮಗನನ್ನು ಕಂಡು ಖುಷಿಯಿಂದ ಅತ್ತು, ತಬ್ಬಿದ ಅಜ್ಜಿ; ವಿಡಿಯೋ ಇಲ್ಲಿದೆ

ಈ ವೀಡಿಯೋ 3 ತಿಂಗಳು ಹಳೆಯದಾಗಿದ್ದು, ಈ ವಿಡಿಯೋದಲ್ಲಿರುವವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಘಟನೆಗಳು ಹೆಚ್ಚು ಸಾಮಾನ್ಯವಾಗುತ್ತಿದೆ. 2 ದಿನಗಳ ಹಿಂದೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಶುಕ್ರವಾರ ಒಬ್ಬ ವ್ಯಕ್ತಿ ತನ್ನ ನೆರೆಯ ಮನೆಯ ಹೆಣ್ಣು ನಾಯಿ ಬೊಗಳಿತು ಎಂಬ ಕಾರಣಕ್ಕೆ ಅದನ್ನು ಕೊಂದು ಹಾಕಿದ್ದ. ಬನ್ಸೋಡೆಯ ಬಿಯರ್ ಬಾರ್‌ನಲ್ಲಿನ ಸಿಬ್ಬಂದಿಯೊಬ್ಬರು ಆರೋಪಿ ಆ ನಾಯಿಗೆ ಗುಂಡು ಹಾರಿಸುತ್ತಿರುವುದನ್ನು ಕಂಡು ನಾಯಿಯ ಮಾಲೀಕರಿಗೆ ಈ ವಿಷಯ ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು