AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್
ನಾಯಿಗೆ ನೇಣು ಹಾಕುತ್ತಿರುವ ದೃಶ್ಯ
TV9 Web
| Edited By: |

Updated on: Nov 14, 2022 | 1:47 PM

Share

ಘಜಿಯಾಬಾದ್: ನಾಯಿಯೊಂದಕ್ಕೆ ಹಿಂಸೆ ಕೊಟ್ಟು, ಮೂವರು ವ್ಯಕ್ತಿಗಳು ಸೇರಿ ನೇಣು ಹಾಕಿ ಕೊಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಉತ್ತರ ಪ್ರದೇಶದ ಘಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆ ಮೂವರು ವ್ಯಕ್ತಿಗಳಿಗೆ ನೋಟಿಸ್ ನೀಡಿದ್ದಾರೆ. ಈ ಹೃದಯ ವಿದ್ರಾವಕ ವಿಡಿಯೋವನ್ನು ಘಜಿಯಾಬಾದ್‌ನ (Ghaziabad)  ಲೋನಿ ಬಳಿಯ ಎಲೈಚಿಪುರ ಪ್ರದೇಶದ ಟ್ರೋನಿಕಾ ಸಿಟಿಯಲ್ಲಿ ಚಿತ್ರೀಕರಿಸಲಾಗಿದೆ.

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ. ಆಗ ನಾಯಿ ನೋವಿನಿಂದ ಹಾಗೂ ಉಸಿರಾಡಲಾಗದೆ ಜೋರಾಗಿ ಕಿರುಚಾಡುತ್ತದೆ. ಅದರಿಂದ ಇನ್ನಷ್ಟು ಖುಷಿಯಾದ ಆ ಮೂವರು ನಾಯಿಗೆ ಚಿತ್ರಹಿಂಸೆ ನೀಡಿ, ಅದರ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ಆ ನಾಯಿಯನ್ನು ಕೊಲ್ಲುತ್ತಾರೆ.

ಇದನ್ನೂ ಓದಿ: Viral Video: ಉಕ್ರೇನ್ ಸೈನ್ಯದಿಂದ ಸುರಕ್ಷಿತವಾಗಿ ಬಂದ ಮೊಮ್ಮಗನನ್ನು ಕಂಡು ಖುಷಿಯಿಂದ ಅತ್ತು, ತಬ್ಬಿದ ಅಜ್ಜಿ; ವಿಡಿಯೋ ಇಲ್ಲಿದೆ

ಈ ವೀಡಿಯೋ 3 ತಿಂಗಳು ಹಳೆಯದಾಗಿದ್ದು, ಈ ವಿಡಿಯೋದಲ್ಲಿರುವವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಘಟನೆಗಳು ಹೆಚ್ಚು ಸಾಮಾನ್ಯವಾಗುತ್ತಿದೆ. 2 ದಿನಗಳ ಹಿಂದೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಶುಕ್ರವಾರ ಒಬ್ಬ ವ್ಯಕ್ತಿ ತನ್ನ ನೆರೆಯ ಮನೆಯ ಹೆಣ್ಣು ನಾಯಿ ಬೊಗಳಿತು ಎಂಬ ಕಾರಣಕ್ಕೆ ಅದನ್ನು ಕೊಂದು ಹಾಕಿದ್ದ. ಬನ್ಸೋಡೆಯ ಬಿಯರ್ ಬಾರ್‌ನಲ್ಲಿನ ಸಿಬ್ಬಂದಿಯೊಬ್ಬರು ಆರೋಪಿ ಆ ನಾಯಿಗೆ ಗುಂಡು ಹಾರಿಸುತ್ತಿರುವುದನ್ನು ಕಂಡು ನಾಯಿಯ ಮಾಲೀಕರಿಗೆ ಈ ವಿಷಯ ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು