Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್
ನಾಯಿಗೆ ನೇಣು ಹಾಕುತ್ತಿರುವ ದೃಶ್ಯ
Follow us
| Updated By: ಸುಷ್ಮಾ ಚಕ್ರೆ

Updated on: Nov 14, 2022 | 1:47 PM

ಘಜಿಯಾಬಾದ್: ನಾಯಿಯೊಂದಕ್ಕೆ ಹಿಂಸೆ ಕೊಟ್ಟು, ಮೂವರು ವ್ಯಕ್ತಿಗಳು ಸೇರಿ ನೇಣು ಹಾಕಿ ಕೊಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಉತ್ತರ ಪ್ರದೇಶದ ಘಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆ ಮೂವರು ವ್ಯಕ್ತಿಗಳಿಗೆ ನೋಟಿಸ್ ನೀಡಿದ್ದಾರೆ. ಈ ಹೃದಯ ವಿದ್ರಾವಕ ವಿಡಿಯೋವನ್ನು ಘಜಿಯಾಬಾದ್‌ನ (Ghaziabad)  ಲೋನಿ ಬಳಿಯ ಎಲೈಚಿಪುರ ಪ್ರದೇಶದ ಟ್ರೋನಿಕಾ ಸಿಟಿಯಲ್ಲಿ ಚಿತ್ರೀಕರಿಸಲಾಗಿದೆ.

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ. ಆಗ ನಾಯಿ ನೋವಿನಿಂದ ಹಾಗೂ ಉಸಿರಾಡಲಾಗದೆ ಜೋರಾಗಿ ಕಿರುಚಾಡುತ್ತದೆ. ಅದರಿಂದ ಇನ್ನಷ್ಟು ಖುಷಿಯಾದ ಆ ಮೂವರು ನಾಯಿಗೆ ಚಿತ್ರಹಿಂಸೆ ನೀಡಿ, ಅದರ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ಆ ನಾಯಿಯನ್ನು ಕೊಲ್ಲುತ್ತಾರೆ.

ಇದನ್ನೂ ಓದಿ: Viral Video: ಉಕ್ರೇನ್ ಸೈನ್ಯದಿಂದ ಸುರಕ್ಷಿತವಾಗಿ ಬಂದ ಮೊಮ್ಮಗನನ್ನು ಕಂಡು ಖುಷಿಯಿಂದ ಅತ್ತು, ತಬ್ಬಿದ ಅಜ್ಜಿ; ವಿಡಿಯೋ ಇಲ್ಲಿದೆ

ಈ ವೀಡಿಯೋ 3 ತಿಂಗಳು ಹಳೆಯದಾಗಿದ್ದು, ಈ ವಿಡಿಯೋದಲ್ಲಿರುವವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಘಟನೆಗಳು ಹೆಚ್ಚು ಸಾಮಾನ್ಯವಾಗುತ್ತಿದೆ. 2 ದಿನಗಳ ಹಿಂದೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಶುಕ್ರವಾರ ಒಬ್ಬ ವ್ಯಕ್ತಿ ತನ್ನ ನೆರೆಯ ಮನೆಯ ಹೆಣ್ಣು ನಾಯಿ ಬೊಗಳಿತು ಎಂಬ ಕಾರಣಕ್ಕೆ ಅದನ್ನು ಕೊಂದು ಹಾಕಿದ್ದ. ಬನ್ಸೋಡೆಯ ಬಿಯರ್ ಬಾರ್‌ನಲ್ಲಿನ ಸಿಬ್ಬಂದಿಯೊಬ್ಬರು ಆರೋಪಿ ಆ ನಾಯಿಗೆ ಗುಂಡು ಹಾರಿಸುತ್ತಿರುವುದನ್ನು ಕಂಡು ನಾಯಿಯ ಮಾಲೀಕರಿಗೆ ಈ ವಿಷಯ ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ