AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್
ನಾಯಿಗೆ ನೇಣು ಹಾಕುತ್ತಿರುವ ದೃಶ್ಯ
TV9 Web
| Edited By: |

Updated on: Nov 14, 2022 | 1:47 PM

Share

ಘಜಿಯಾಬಾದ್: ನಾಯಿಯೊಂದಕ್ಕೆ ಹಿಂಸೆ ಕೊಟ್ಟು, ಮೂವರು ವ್ಯಕ್ತಿಗಳು ಸೇರಿ ನೇಣು ಹಾಕಿ ಕೊಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಉತ್ತರ ಪ್ರದೇಶದ ಘಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆ ಮೂವರು ವ್ಯಕ್ತಿಗಳಿಗೆ ನೋಟಿಸ್ ನೀಡಿದ್ದಾರೆ. ಈ ಹೃದಯ ವಿದ್ರಾವಕ ವಿಡಿಯೋವನ್ನು ಘಜಿಯಾಬಾದ್‌ನ (Ghaziabad)  ಲೋನಿ ಬಳಿಯ ಎಲೈಚಿಪುರ ಪ್ರದೇಶದ ಟ್ರೋನಿಕಾ ಸಿಟಿಯಲ್ಲಿ ಚಿತ್ರೀಕರಿಸಲಾಗಿದೆ.

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ. ಆಗ ನಾಯಿ ನೋವಿನಿಂದ ಹಾಗೂ ಉಸಿರಾಡಲಾಗದೆ ಜೋರಾಗಿ ಕಿರುಚಾಡುತ್ತದೆ. ಅದರಿಂದ ಇನ್ನಷ್ಟು ಖುಷಿಯಾದ ಆ ಮೂವರು ನಾಯಿಗೆ ಚಿತ್ರಹಿಂಸೆ ನೀಡಿ, ಅದರ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ಆ ನಾಯಿಯನ್ನು ಕೊಲ್ಲುತ್ತಾರೆ.

ಇದನ್ನೂ ಓದಿ: Viral Video: ಉಕ್ರೇನ್ ಸೈನ್ಯದಿಂದ ಸುರಕ್ಷಿತವಾಗಿ ಬಂದ ಮೊಮ್ಮಗನನ್ನು ಕಂಡು ಖುಷಿಯಿಂದ ಅತ್ತು, ತಬ್ಬಿದ ಅಜ್ಜಿ; ವಿಡಿಯೋ ಇಲ್ಲಿದೆ

ಈ ವೀಡಿಯೋ 3 ತಿಂಗಳು ಹಳೆಯದಾಗಿದ್ದು, ಈ ವಿಡಿಯೋದಲ್ಲಿರುವವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಘಟನೆಗಳು ಹೆಚ್ಚು ಸಾಮಾನ್ಯವಾಗುತ್ತಿದೆ. 2 ದಿನಗಳ ಹಿಂದೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಶುಕ್ರವಾರ ಒಬ್ಬ ವ್ಯಕ್ತಿ ತನ್ನ ನೆರೆಯ ಮನೆಯ ಹೆಣ್ಣು ನಾಯಿ ಬೊಗಳಿತು ಎಂಬ ಕಾರಣಕ್ಕೆ ಅದನ್ನು ಕೊಂದು ಹಾಕಿದ್ದ. ಬನ್ಸೋಡೆಯ ಬಿಯರ್ ಬಾರ್‌ನಲ್ಲಿನ ಸಿಬ್ಬಂದಿಯೊಬ್ಬರು ಆರೋಪಿ ಆ ನಾಯಿಗೆ ಗುಂಡು ಹಾರಿಸುತ್ತಿರುವುದನ್ನು ಕಂಡು ನಾಯಿಯ ಮಾಲೀಕರಿಗೆ ಈ ವಿಷಯ ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್