AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್
ನಾಯಿಗೆ ನೇಣು ಹಾಕುತ್ತಿರುವ ದೃಶ್ಯ
TV9 Web
| Edited By: |

Updated on: Nov 14, 2022 | 1:47 PM

Share

ಘಜಿಯಾಬಾದ್: ನಾಯಿಯೊಂದಕ್ಕೆ ಹಿಂಸೆ ಕೊಟ್ಟು, ಮೂವರು ವ್ಯಕ್ತಿಗಳು ಸೇರಿ ನೇಣು ಹಾಕಿ ಕೊಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಉತ್ತರ ಪ್ರದೇಶದ ಘಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆ ಮೂವರು ವ್ಯಕ್ತಿಗಳಿಗೆ ನೋಟಿಸ್ ನೀಡಿದ್ದಾರೆ. ಈ ಹೃದಯ ವಿದ್ರಾವಕ ವಿಡಿಯೋವನ್ನು ಘಜಿಯಾಬಾದ್‌ನ (Ghaziabad)  ಲೋನಿ ಬಳಿಯ ಎಲೈಚಿಪುರ ಪ್ರದೇಶದ ಟ್ರೋನಿಕಾ ಸಿಟಿಯಲ್ಲಿ ಚಿತ್ರೀಕರಿಸಲಾಗಿದೆ.

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ. ಆಗ ನಾಯಿ ನೋವಿನಿಂದ ಹಾಗೂ ಉಸಿರಾಡಲಾಗದೆ ಜೋರಾಗಿ ಕಿರುಚಾಡುತ್ತದೆ. ಅದರಿಂದ ಇನ್ನಷ್ಟು ಖುಷಿಯಾದ ಆ ಮೂವರು ನಾಯಿಗೆ ಚಿತ್ರಹಿಂಸೆ ನೀಡಿ, ಅದರ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ಆ ನಾಯಿಯನ್ನು ಕೊಲ್ಲುತ್ತಾರೆ.

ಇದನ್ನೂ ಓದಿ: Viral Video: ಉಕ್ರೇನ್ ಸೈನ್ಯದಿಂದ ಸುರಕ್ಷಿತವಾಗಿ ಬಂದ ಮೊಮ್ಮಗನನ್ನು ಕಂಡು ಖುಷಿಯಿಂದ ಅತ್ತು, ತಬ್ಬಿದ ಅಜ್ಜಿ; ವಿಡಿಯೋ ಇಲ್ಲಿದೆ

ಈ ವೀಡಿಯೋ 3 ತಿಂಗಳು ಹಳೆಯದಾಗಿದ್ದು, ಈ ವಿಡಿಯೋದಲ್ಲಿರುವವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಘಟನೆಗಳು ಹೆಚ್ಚು ಸಾಮಾನ್ಯವಾಗುತ್ತಿದೆ. 2 ದಿನಗಳ ಹಿಂದೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಶುಕ್ರವಾರ ಒಬ್ಬ ವ್ಯಕ್ತಿ ತನ್ನ ನೆರೆಯ ಮನೆಯ ಹೆಣ್ಣು ನಾಯಿ ಬೊಗಳಿತು ಎಂಬ ಕಾರಣಕ್ಕೆ ಅದನ್ನು ಕೊಂದು ಹಾಕಿದ್ದ. ಬನ್ಸೋಡೆಯ ಬಿಯರ್ ಬಾರ್‌ನಲ್ಲಿನ ಸಿಬ್ಬಂದಿಯೊಬ್ಬರು ಆರೋಪಿ ಆ ನಾಯಿಗೆ ಗುಂಡು ಹಾರಿಸುತ್ತಿರುವುದನ್ನು ಕಂಡು ನಾಯಿಯ ಮಾಲೀಕರಿಗೆ ಈ ವಿಷಯ ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ