AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ.

Shocking News: ನಾಯಿಗೆ ನೇಣು ಹಾಕಿ ಸಾಯಿಸಿದ ದುಷ್ಟರ ವಿಡಿಯೋ ವೈರಲ್
ನಾಯಿಗೆ ನೇಣು ಹಾಕುತ್ತಿರುವ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 14, 2022 | 1:47 PM

ಘಜಿಯಾಬಾದ್: ನಾಯಿಯೊಂದಕ್ಕೆ ಹಿಂಸೆ ಕೊಟ್ಟು, ಮೂವರು ವ್ಯಕ್ತಿಗಳು ಸೇರಿ ನೇಣು ಹಾಕಿ ಕೊಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಉತ್ತರ ಪ್ರದೇಶದ ಘಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆ ಮೂವರು ವ್ಯಕ್ತಿಗಳಿಗೆ ನೋಟಿಸ್ ನೀಡಿದ್ದಾರೆ. ಈ ಹೃದಯ ವಿದ್ರಾವಕ ವಿಡಿಯೋವನ್ನು ಘಜಿಯಾಬಾದ್‌ನ (Ghaziabad)  ಲೋನಿ ಬಳಿಯ ಎಲೈಚಿಪುರ ಪ್ರದೇಶದ ಟ್ರೋನಿಕಾ ಸಿಟಿಯಲ್ಲಿ ಚಿತ್ರೀಕರಿಸಲಾಗಿದೆ.

ಈ ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪುರುಷರು ನಾಯಿಯ ಕುತ್ತಿಗೆಯನ್ನು ಸರಪಳಿಯಿಂದ ಕಟ್ಟಿ ಗೋಡೆಗೆ ನೇತು ಹಾಕುತ್ತಿರುವುದನ್ನು ಕಾಣಬಹುದು. ನಂತರ ಅವರಲ್ಲಿ ಒಬ್ಬರು ಆ ಸರಪಳಿಯನ್ನು ಕೆಳಗೆ ಎಳೆಯುತ್ತಾರೆ. ಆಗ ನಾಯಿ ನೋವಿನಿಂದ ಹಾಗೂ ಉಸಿರಾಡಲಾಗದೆ ಜೋರಾಗಿ ಕಿರುಚಾಡುತ್ತದೆ. ಅದರಿಂದ ಇನ್ನಷ್ಟು ಖುಷಿಯಾದ ಆ ಮೂವರು ನಾಯಿಗೆ ಚಿತ್ರಹಿಂಸೆ ನೀಡಿ, ಅದರ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ಆ ನಾಯಿಯನ್ನು ಕೊಲ್ಲುತ್ತಾರೆ.

ಇದನ್ನೂ ಓದಿ: Viral Video: ಉಕ್ರೇನ್ ಸೈನ್ಯದಿಂದ ಸುರಕ್ಷಿತವಾಗಿ ಬಂದ ಮೊಮ್ಮಗನನ್ನು ಕಂಡು ಖುಷಿಯಿಂದ ಅತ್ತು, ತಬ್ಬಿದ ಅಜ್ಜಿ; ವಿಡಿಯೋ ಇಲ್ಲಿದೆ

ಈ ವೀಡಿಯೋ 3 ತಿಂಗಳು ಹಳೆಯದಾಗಿದ್ದು, ಈ ವಿಡಿಯೋದಲ್ಲಿರುವವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಘಟನೆಗಳು ಹೆಚ್ಚು ಸಾಮಾನ್ಯವಾಗುತ್ತಿದೆ. 2 ದಿನಗಳ ಹಿಂದೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಶುಕ್ರವಾರ ಒಬ್ಬ ವ್ಯಕ್ತಿ ತನ್ನ ನೆರೆಯ ಮನೆಯ ಹೆಣ್ಣು ನಾಯಿ ಬೊಗಳಿತು ಎಂಬ ಕಾರಣಕ್ಕೆ ಅದನ್ನು ಕೊಂದು ಹಾಕಿದ್ದ. ಬನ್ಸೋಡೆಯ ಬಿಯರ್ ಬಾರ್‌ನಲ್ಲಿನ ಸಿಬ್ಬಂದಿಯೊಬ್ಬರು ಆರೋಪಿ ಆ ನಾಯಿಗೆ ಗುಂಡು ಹಾರಿಸುತ್ತಿರುವುದನ್ನು ಕಂಡು ನಾಯಿಯ ಮಾಲೀಕರಿಗೆ ಈ ವಿಷಯ ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ