AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬೆಂಕಿ ಹೊತ್ತಿಕೊಂಡ ಬಸ್ ಕೆಳಗೆ ಬಿದ್ದು ಬೈಕ್ ಸವಾರ ಸಜೀವ ದಹನ; ದಿಕ್ಕಾಪಾಲಾಗಿ ಓಡಿದ ಪೊಲೀಸರು

ಡಿಯೋರಿಯಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಮೂವರು ಪೊಲೀಸ್ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

Shocking Video: ಬೆಂಕಿ ಹೊತ್ತಿಕೊಂಡ ಬಸ್ ಕೆಳಗೆ ಬಿದ್ದು ಬೈಕ್ ಸವಾರ ಸಜೀವ ದಹನ; ದಿಕ್ಕಾಪಾಲಾಗಿ ಓಡಿದ ಪೊಲೀಸರು
ಬೆಂಕಿ ಹೊತ್ತಿಕೊಂಡಿರುವ ಬಸ್
TV9 Web
| Edited By: |

Updated on:Oct 12, 2022 | 9:57 AM

Share

ಪಾಟ್ನಾ: ಬಿಹಾರದ ಚಾಪ್ರಾ-ಸಿವಾನ್ ಹೆದ್ದಾರಿಯಲ್ಲಿ ಇಂದು (ಬುಧವಾರ) ಬೆಳಗ್ಗೆ ಬಿಹಾರ ಪೊಲೀಸ್ (Bihar Police) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಈ ಅಪಘಾತದ (Accident) ನಂತರ ಬಸ್​ನ ಇಂಧನದ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಬಸ್​ಗೆ ಬೆಂಕಿ (Fire Accident) ಹೊತ್ತಿಕೊಂಡಿತು. ಆ ಬಸ್​ನ ಕೆಳಗೆ ಬಿದ್ದ ಓರ್ವ ಬೈಕ್ ಸವಾರನ ಮೈಗೂ ಬೆಂಕಿ ಹೊತ್ತಿಕೊಂಡು ಆತ ಸುಟ್ಟು ಕರಕಲಾಗಿದ್ದಾನೆ. ಇನ್ನಿಬ್ಬರು ಸವಾರರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಯೋರಿಯಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಮೂವರು ಪೊಲೀಸ್ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಬೈಕ್‌ ಸವಾರರೊಬ್ಬರು ತಮ್ಮ ಬೈಕ್‌ ಸಹಿತ ಬಸ್‌ನಡಿ ಸಿಲುಕಿ 100 ಮೀಟರ್​ವರೆಗೆ ಎಳೆದೊಯ್ದ ಪರಿಣಾಮ ಬಸ್‌ನ ಇಂಧನ ಟ್ಯಾಂಕ್‌ ಸ್ಫೋಟಗೊಂಡು ಬೈಕ್‌ ಸವಾರ ಸಜೀವ ದಹನಗೊಂಡಿದ್ದಾನೆ.

ಇದನ್ನೂ ಓದಿ: Crime News: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವತಿಗೆ ಬೆಂಕಿ ಹಚ್ಚಿ ಕೊಂದ ಯುವಕ!

ಅಪಘಾತದ ನಂತರ ಬಸ್ ಬೆಂಕಿಗೆ ಆಹುತಿಯಾಗಿದ್ದು, ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಅಧಿಕಾರಿಗಳು ಬಸ್‌ನಿಂದ ಇಳಿದು ಓಡಿಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಸಿತಾಬ್ದಿಯಾರಾದಲ್ಲಿ ರಾಜಕೀಯ ನಾಯಕ ದಿವಂಗತ ಜಯಪ್ರಕಾಶ್ ನಾರಾಯಣ್ ಅವರ 120ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಪೊಲೀಸರನ್ನು ಹೊತ್ತು ಬಸ್ ಹಿಂತಿರುಗುತ್ತಿತ್ತು. ಆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು. ಅಲ್ಲಿಂದ ವಾಪಾಸ್ ಬರುವಾಗ ಪೊಲೀಸ್ ಬಸ್ ಅಪಘಾತಕ್ಕೀಡಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 am, Wed, 12 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ