AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬೆಂಕಿ ಹೊತ್ತಿಕೊಂಡ ಬಸ್ ಕೆಳಗೆ ಬಿದ್ದು ಬೈಕ್ ಸವಾರ ಸಜೀವ ದಹನ; ದಿಕ್ಕಾಪಾಲಾಗಿ ಓಡಿದ ಪೊಲೀಸರು

ಡಿಯೋರಿಯಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಮೂವರು ಪೊಲೀಸ್ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

Shocking Video: ಬೆಂಕಿ ಹೊತ್ತಿಕೊಂಡ ಬಸ್ ಕೆಳಗೆ ಬಿದ್ದು ಬೈಕ್ ಸವಾರ ಸಜೀವ ದಹನ; ದಿಕ್ಕಾಪಾಲಾಗಿ ಓಡಿದ ಪೊಲೀಸರು
ಬೆಂಕಿ ಹೊತ್ತಿಕೊಂಡಿರುವ ಬಸ್
TV9 Web
| Edited By: |

Updated on:Oct 12, 2022 | 9:57 AM

Share

ಪಾಟ್ನಾ: ಬಿಹಾರದ ಚಾಪ್ರಾ-ಸಿವಾನ್ ಹೆದ್ದಾರಿಯಲ್ಲಿ ಇಂದು (ಬುಧವಾರ) ಬೆಳಗ್ಗೆ ಬಿಹಾರ ಪೊಲೀಸ್ (Bihar Police) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಈ ಅಪಘಾತದ (Accident) ನಂತರ ಬಸ್​ನ ಇಂಧನದ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಬಸ್​ಗೆ ಬೆಂಕಿ (Fire Accident) ಹೊತ್ತಿಕೊಂಡಿತು. ಆ ಬಸ್​ನ ಕೆಳಗೆ ಬಿದ್ದ ಓರ್ವ ಬೈಕ್ ಸವಾರನ ಮೈಗೂ ಬೆಂಕಿ ಹೊತ್ತಿಕೊಂಡು ಆತ ಸುಟ್ಟು ಕರಕಲಾಗಿದ್ದಾನೆ. ಇನ್ನಿಬ್ಬರು ಸವಾರರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಯೋರಿಯಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಮೂವರು ಪೊಲೀಸ್ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಬೈಕ್‌ ಸವಾರರೊಬ್ಬರು ತಮ್ಮ ಬೈಕ್‌ ಸಹಿತ ಬಸ್‌ನಡಿ ಸಿಲುಕಿ 100 ಮೀಟರ್​ವರೆಗೆ ಎಳೆದೊಯ್ದ ಪರಿಣಾಮ ಬಸ್‌ನ ಇಂಧನ ಟ್ಯಾಂಕ್‌ ಸ್ಫೋಟಗೊಂಡು ಬೈಕ್‌ ಸವಾರ ಸಜೀವ ದಹನಗೊಂಡಿದ್ದಾನೆ.

ಇದನ್ನೂ ಓದಿ: Crime News: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವತಿಗೆ ಬೆಂಕಿ ಹಚ್ಚಿ ಕೊಂದ ಯುವಕ!

ಅಪಘಾತದ ನಂತರ ಬಸ್ ಬೆಂಕಿಗೆ ಆಹುತಿಯಾಗಿದ್ದು, ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಅಧಿಕಾರಿಗಳು ಬಸ್‌ನಿಂದ ಇಳಿದು ಓಡಿಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಸಿತಾಬ್ದಿಯಾರಾದಲ್ಲಿ ರಾಜಕೀಯ ನಾಯಕ ದಿವಂಗತ ಜಯಪ್ರಕಾಶ್ ನಾರಾಯಣ್ ಅವರ 120ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಪೊಲೀಸರನ್ನು ಹೊತ್ತು ಬಸ್ ಹಿಂತಿರುಗುತ್ತಿತ್ತು. ಆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು. ಅಲ್ಲಿಂದ ವಾಪಾಸ್ ಬರುವಾಗ ಪೊಲೀಸ್ ಬಸ್ ಅಪಘಾತಕ್ಕೀಡಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 am, Wed, 12 October 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ