Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ತನಗೆ ಮತ ಹಾಕದ ಯುವಕರಿಗೆ ಬಸ್ಕಿ ಹೊಡೆಸಿ, ಎಂಜಲು ನೆಕ್ಕಿಸಿದ ರಾಜಕಾರಣಿ; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಸಾಕಷ್ಟು ಹಣ ಹಂಚಿದ್ದ ಬಲವಂತ್ ಸಿಂಗ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು. ಇದರಿಂದ ಕೋಪಗೊಂಡ ಅವರು ತನಗೆ ಮತ ಹಾಕದ ಅನಿಲ್ ಕುಮಾರ್ ಮತ್ತು ಮಂಜೀತ್ ಕುಮಾರ್​ಗೆ ರಸ್ತೆಯಲ್ಲೇ ಬಸ್ಕಿ ಹೊಡೆಸಿ, ತಾವು ಉಗುಳಿದ ಎಂಜಲನ್ನು ನೆಕ್ಕಿಸಿದ್ದಾರೆ.

Shocking Video: ತನಗೆ ಮತ ಹಾಕದ ಯುವಕರಿಗೆ ಬಸ್ಕಿ ಹೊಡೆಸಿ, ಎಂಜಲು ನೆಕ್ಕಿಸಿದ ರಾಜಕಾರಣಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಯುವಕರಿಂದ ಎಂಜಲು ನೆಕ್ಕಿಸಿದ ಚುನಾವಣಾ ಅಭ್ಯರ್ಥಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 13, 2021 | 2:09 PM

ಪಾಟ್ನಾ: ಬಿಹಾರದ ಔರಂಗಾಬಾದ್‌ನ ಕುಟುಂಬ ಬ್ಲಾಕ್‌ನ ಸಿಂಘನಾ ಗ್ರಾಮದ ಮುಖ್ಯಸ್ಥರ ಚುನಾವಣೆಗೆ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸದ ಕಾರಣಕ್ಕೆ ಇಬ್ಬರು ಯುವಕರನ್ನು ನಿರ್ದಯವಾಗಿ ಥಳಿಸಿರುವ ಹೀನಾಯ ಘಟನೆ ನಡೆದಿದೆ. ಇಲ್ಲಿನ ಪ್ರಮುಖ ಅಭ್ಯರ್ಥಿಯಾದ ಬಲವಂತ್ ಸಿಂಗ್ ಇಬ್ಬರು ತನಗೆ ಮತ ಹಾಕಲು ನಿರಾಕರಿಸಿದ್ದರಿಂದ ಕೋಪಗೊಂಡು ರಸ್ತೆಗೆ ಉಗುಳಿದ್ದಾರೆ. ಅಲ್ಲದೆ, ಆ ಇಬ್ಬರಲ್ಲಿ ಒಬ್ಬನ ಬಳಿ ತಾವು ಉಗುಳಿದ್ದನ್ನು ನೆಕ್ಕುವಂತೆ ಒತ್ತಾಯಿಸಿದ್ದಾರೆ. ಹಾಗೇ, ನಡು ರಸ್ತೆಯಲ್ಲಿ ಅವರಿಬ್ಬರ ಬಳಿ ಬಸ್ಕಿ ಹೊಡೆಸಿದ್ದಾರೆ.

ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಸಾಕಷ್ಟು ಹಣ ಹಂಚಿದ್ದ ಬಲವಂತ್ ಸಿಂಗ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು. ಇದರಿಂದ ಕೋಪಗೊಂಡ ಅವರು ತನಗೆ ಮತ ಹಾಕದ ಅನಿಲ್ ಕುಮಾರ್ ಮತ್ತು ಮಂಜೀತ್ ಕುಮಾರ್​ಗೆ ರಸ್ತೆಯಲ್ಲೇ ಬಸ್ಕಿ ಹೊಡೆಸಿದ್ದಾರೆ. ಅಲ್ಲದೆ, ರಸ್ತೆಯಲ್ಲಿ ಕಫವನ್ನು ಉಗುಳಿ ಅದನ್ನು ನೆಕ್ಕುವಂತೆ ಒತ್ತಾಯಿಸಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಅಗಿದ್ದು, ಆ ರಾಜಕಾರಣಿಯ ಅಮಾನವೀಯ ವರ್ತನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ನಡೆದಿರುವುದು ಔರಂಗಾಬಾದ್ ಜಿಲ್ಲೆಯಲ್ಲಿ. ಇಲ್ಲಿನ ಪ್ರಮುಖ ಅಭ್ಯರ್ಥಿಯಾಗಿದ್ದ ಬಲವಂತ್ ಸಿಂಗ್ ಚುನಾವಣೆಯಲ್ಲಿ ಸೋತಿದ್ದರು. ಅವರ ಎದುರು ಅನಿಲ್ ಕುಮಾರ್ ಹಾಗೂ ಮಂಜೀತ್ ಗೇಲಿ ಮಾಡಿದ್ದರಿಂದ ತನಗೆ ಮತ ಹಾಕದ ಕಾರಣಕ್ಕೆ ಅವರಿಬ್ಬರಿಗೂ ಶಿಕ್ಷೆ ಕೊಟ್ಟಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮಾಹಿತಿ ಪಡೆದು ಔರಂಗಾಬಾದ್ ಎಸ್​ಪಿ ಕಾಂತೇಶ್ ಕುಮಾರ್ ಮಿಶ್ರಾ ಸೂಚನೆ ಮೇರೆಗೆ ಅಂಬಾ ಪೊಲೀಸರು ಬಲ್ವಂತ್ ಸಿಂಗ್ ಅವರನ್ನು ಬಂಧಿಸಿದ್ದಾರೆ.

ವಿಡಿಯೋದಲ್ಲಿರುವ ಆ ಇಬ್ಬರು ಯುವಕರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಬಲವಂತ್ ಸಿಂಗ್ ಗ್ರಾಮಾಂತರ ಚುನಾವಣೆಗೆ ಅಭ್ಯರ್ಥಿಯಾಗಿದ್ದರು. ಅವರ ವಿರುದ್ಧ ಶೀಘ್ರವೇ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಎಸ್ಪಿ ಕಾಂತೇಶ್ ಮಿಶ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಮೊಸರು ತರಲು ಮಾರ್ಗಮಧ್ಯೆ ರೈಲು ನಿಲ್ಲಿಸಿದ ಚಾಲಕ ಅಮಾನತು!

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ