AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ತನಗೆ ಮತ ಹಾಕದ ಯುವಕರಿಗೆ ಬಸ್ಕಿ ಹೊಡೆಸಿ, ಎಂಜಲು ನೆಕ್ಕಿಸಿದ ರಾಜಕಾರಣಿ; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಸಾಕಷ್ಟು ಹಣ ಹಂಚಿದ್ದ ಬಲವಂತ್ ಸಿಂಗ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು. ಇದರಿಂದ ಕೋಪಗೊಂಡ ಅವರು ತನಗೆ ಮತ ಹಾಕದ ಅನಿಲ್ ಕುಮಾರ್ ಮತ್ತು ಮಂಜೀತ್ ಕುಮಾರ್​ಗೆ ರಸ್ತೆಯಲ್ಲೇ ಬಸ್ಕಿ ಹೊಡೆಸಿ, ತಾವು ಉಗುಳಿದ ಎಂಜಲನ್ನು ನೆಕ್ಕಿಸಿದ್ದಾರೆ.

Shocking Video: ತನಗೆ ಮತ ಹಾಕದ ಯುವಕರಿಗೆ ಬಸ್ಕಿ ಹೊಡೆಸಿ, ಎಂಜಲು ನೆಕ್ಕಿಸಿದ ರಾಜಕಾರಣಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಯುವಕರಿಂದ ಎಂಜಲು ನೆಕ್ಕಿಸಿದ ಚುನಾವಣಾ ಅಭ್ಯರ್ಥಿ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 13, 2021 | 2:09 PM

Share

ಪಾಟ್ನಾ: ಬಿಹಾರದ ಔರಂಗಾಬಾದ್‌ನ ಕುಟುಂಬ ಬ್ಲಾಕ್‌ನ ಸಿಂಘನಾ ಗ್ರಾಮದ ಮುಖ್ಯಸ್ಥರ ಚುನಾವಣೆಗೆ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸದ ಕಾರಣಕ್ಕೆ ಇಬ್ಬರು ಯುವಕರನ್ನು ನಿರ್ದಯವಾಗಿ ಥಳಿಸಿರುವ ಹೀನಾಯ ಘಟನೆ ನಡೆದಿದೆ. ಇಲ್ಲಿನ ಪ್ರಮುಖ ಅಭ್ಯರ್ಥಿಯಾದ ಬಲವಂತ್ ಸಿಂಗ್ ಇಬ್ಬರು ತನಗೆ ಮತ ಹಾಕಲು ನಿರಾಕರಿಸಿದ್ದರಿಂದ ಕೋಪಗೊಂಡು ರಸ್ತೆಗೆ ಉಗುಳಿದ್ದಾರೆ. ಅಲ್ಲದೆ, ಆ ಇಬ್ಬರಲ್ಲಿ ಒಬ್ಬನ ಬಳಿ ತಾವು ಉಗುಳಿದ್ದನ್ನು ನೆಕ್ಕುವಂತೆ ಒತ್ತಾಯಿಸಿದ್ದಾರೆ. ಹಾಗೇ, ನಡು ರಸ್ತೆಯಲ್ಲಿ ಅವರಿಬ್ಬರ ಬಳಿ ಬಸ್ಕಿ ಹೊಡೆಸಿದ್ದಾರೆ.

ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಸಾಕಷ್ಟು ಹಣ ಹಂಚಿದ್ದ ಬಲವಂತ್ ಸಿಂಗ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು. ಇದರಿಂದ ಕೋಪಗೊಂಡ ಅವರು ತನಗೆ ಮತ ಹಾಕದ ಅನಿಲ್ ಕುಮಾರ್ ಮತ್ತು ಮಂಜೀತ್ ಕುಮಾರ್​ಗೆ ರಸ್ತೆಯಲ್ಲೇ ಬಸ್ಕಿ ಹೊಡೆಸಿದ್ದಾರೆ. ಅಲ್ಲದೆ, ರಸ್ತೆಯಲ್ಲಿ ಕಫವನ್ನು ಉಗುಳಿ ಅದನ್ನು ನೆಕ್ಕುವಂತೆ ಒತ್ತಾಯಿಸಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಅಗಿದ್ದು, ಆ ರಾಜಕಾರಣಿಯ ಅಮಾನವೀಯ ವರ್ತನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ನಡೆದಿರುವುದು ಔರಂಗಾಬಾದ್ ಜಿಲ್ಲೆಯಲ್ಲಿ. ಇಲ್ಲಿನ ಪ್ರಮುಖ ಅಭ್ಯರ್ಥಿಯಾಗಿದ್ದ ಬಲವಂತ್ ಸಿಂಗ್ ಚುನಾವಣೆಯಲ್ಲಿ ಸೋತಿದ್ದರು. ಅವರ ಎದುರು ಅನಿಲ್ ಕುಮಾರ್ ಹಾಗೂ ಮಂಜೀತ್ ಗೇಲಿ ಮಾಡಿದ್ದರಿಂದ ತನಗೆ ಮತ ಹಾಕದ ಕಾರಣಕ್ಕೆ ಅವರಿಬ್ಬರಿಗೂ ಶಿಕ್ಷೆ ಕೊಟ್ಟಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮಾಹಿತಿ ಪಡೆದು ಔರಂಗಾಬಾದ್ ಎಸ್​ಪಿ ಕಾಂತೇಶ್ ಕುಮಾರ್ ಮಿಶ್ರಾ ಸೂಚನೆ ಮೇರೆಗೆ ಅಂಬಾ ಪೊಲೀಸರು ಬಲ್ವಂತ್ ಸಿಂಗ್ ಅವರನ್ನು ಬಂಧಿಸಿದ್ದಾರೆ.

ವಿಡಿಯೋದಲ್ಲಿರುವ ಆ ಇಬ್ಬರು ಯುವಕರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಬಲವಂತ್ ಸಿಂಗ್ ಗ್ರಾಮಾಂತರ ಚುನಾವಣೆಗೆ ಅಭ್ಯರ್ಥಿಯಾಗಿದ್ದರು. ಅವರ ವಿರುದ್ಧ ಶೀಘ್ರವೇ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಎಸ್ಪಿ ಕಾಂತೇಶ್ ಮಿಶ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಮೊಸರು ತರಲು ಮಾರ್ಗಮಧ್ಯೆ ರೈಲು ನಿಲ್ಲಿಸಿದ ಚಾಲಕ ಅಮಾನತು!

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ