AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಕೇಳಿದ ಆರೋಪ; ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಆಪ್ತ ಸಹಾಯಕರ ವಿರುದ್ಧ ನ್ಯಾಯಾಲಯದ ಮೊರೆ ಹೋದ ಶೂಟರ್ ವರ್ತಿಕಾ ಸಿಂಗ್

ನಿಮ್ಮನ್ನು ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ. ಇದಕ್ಕಾಗಿ ನೀವು ನಮಗೆ ₹ 1 ಕೋಟಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ನಂತರ ಅದನ್ನು ₹ 25 ಲಕ್ಷಕ್ಕೆ ಇಳಿಸಿದರು ಎಂದು ವರ್ತಿಕಾ ಸಿಂಗ್ ಆರೋಪಿಸಿದ್ದಾರೆ.

ಲಂಚ ಕೇಳಿದ ಆರೋಪ; ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಆಪ್ತ ಸಹಾಯಕರ ವಿರುದ್ಧ ನ್ಯಾಯಾಲಯದ ಮೊರೆ ಹೋದ ಶೂಟರ್ ವರ್ತಿಕಾ ಸಿಂಗ್
ಸಚಿವೆ ಸ್ಮೃತಿ ಇರಾನಿ ಮತ್ತು ಶೂಟರ್ ವರ್ತಿಕಾ ಸಿಂಗ್
ಪೃಥ್ವಿಶಂಕರ
|

Updated on: Dec 26, 2020 | 12:58 PM

Share

ಸುಲ್ತಾನಪುರ: ಕೇಂದ್ರ ಮಹಿಳಾ ಆಯೋಗದ ಸದಸ್ಯರಾಗಲು ಲಂಚ ಕೇಳಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಸಚಿವೆಯ ಆಪ್ತ ಸಹಾಯಕರ ಮೇಲೆ ಆರೋಪ ಹೊರಿಸಿ, ಅಂತಾರಾಷ್ಟ್ರೀಯ ಶೂಟರ್ ವರ್ತಿಕಾ ಸಿಂಗ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಸಂಸದ-ಶಾಸಕ ನ್ಯಾಯಾಲಯವು ಜನವರಿ 2 ರಂದು ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ವಿಚಾರಣೆಯಲ್ಲಿ ಪ್ರಕರಣವು ತನ್ನ ವ್ಯಾಪ್ತಿಗೆ ಒಳಪಟ್ಟಿದೆಯೇ ಎಂದು ನಿರ್ಧರಿಸುತ್ತದೆ ಎಂದು ವರ್ತಿಕಾ ಸಿಂಗ್ ಪರ ವಕೀಲ ಹೇಳಿದ್ದಾರೆ. ಸಚಿವರ ಆಪ್ತ ಸಹಾಯಕರಾದ ವಿಜಯ್ ಗುಪ್ತಾ ಮತ್ತು ರಜನೀಶ್ ಸಿಂಗ್ ಇಬ್ಬರು ಸೇರಿ ವರ್ತಿಕಾ ಸಿಂಗ್ ಅವರಿಗೆ ನಕಲಿ ಪತ್ರವೊಂದನ್ನು ನೀಡಿದ್ದು, ನಿಮ್ಮನ್ನು ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ. ಇದಕ್ಕಾಗಿ ನೀವು ನಮಗೆ ₹ 1 ಕೋಟಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ನಂತರ ಅದನ್ನು ₹ 25 ಲಕ್ಷಕ್ಕೆ ಇಳಿಸಿದರು ಎಂದು ವರ್ತಿಕಾ ಸಿಂಗ್ ಆರೋಪಿಸಿದ್ದಾರೆ.

ಅವರಲ್ಲಿ ಒಬ್ಬರು ತನ್ನೊಂದಿಗೆ ಅಶ್ಲೀಲವಾಗಿ ಮಾತನಾಡಿದ್ದಾರೆ ಎಂದು ವರ್ತಿಕಾ ಸಿಂಗ್ ಆರೋಪಿಸಿದ್ದಾರೆ. ಆದಾಗ್ಯೂ, ನವೆಂಬರ್ 23 ರಂದು ವಿಜಯ್ ಗುಪ್ತಾ ಅವರು ಅಮೆತಿ ಜಿಲ್ಲೆಯ ಮುಸಾಫಿರ್ಖಾನಾ ಪೊಲೀಸ್ ಠಾಣೆಯಲ್ಲಿ ಶೂಟರ್ ವರ್ತಿಕಾ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿ ನಮ್ಮ ವಿರುದ್ಧ ಆಧಾರ ರಹಿತ ಆರೋಪಗಳನ್ನು ಹೊರಿಸಿದ್ದಾರೆ. ಈ ಮೂಲಕ ನಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು, ಶೂಟರ್ ವರ್ತಿಕಾ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ವರ್ತಿಕಾ ಸಿಂಗ್, ಸಚಿವೆಯ ಆಪ್ತರ ಭ್ರಷ್ಟಾಚಾರವನ್ನು ಬಹಿರಂಗಪಡಿಸುವುದಾಗಿ ಹೇಳಿದ ಕಾರಣದಿಂದಾಗಿ ಅವರು ನನ್ನ ಮೇಲೆ ದೂರು ದಾಖಲಿಸಿದ್ದಾರೆ ಎಂದಿದ್ದಾರೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ