AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ ಎಂದ ತಾಯಿ

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್​  ಎಂದು ಘೋಷಣೆ ಕೂಗಿ ಅರೆಸ್ಟ್​ ಆಗಿದ್ದರು.

ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ  ಎಂದ ತಾಯಿ
ಪಾಕಿಸ್ತಾನ್​ ಜಿಂದಾಬಾದ್​ ಸ್ಲೋಗನ್​ ಹಾಕಿದವ
TV9 Web
| Edited By: |

Updated on:Apr 16, 2022 | 8:24 AM

Share

ಉತ್ತರ ಪ್ರದೇಶದ ಬರೇಲಿಯಲ್ಲಿ ಅಂಗಡಿಯೊಂದರಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಹಾಡು ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ನಡೆದದ್ದು ಬರೇಲಿ ಜಿಲ್ಲೆಯ ಭುಟಾ ಪೊಲೀಸ್ ಸ್ಟೇಶನ್​ ವ್ಯಾಪ್ತಿಯಲ್ಲಿರುವ ಸಿಂಘೈ ಕಲನ್​ ಎಂಬ ಹಳ್ಳಿಯಲ್ಲಿ. ಅಲ್ಲಿ ಕಿರಾಣಿ ಅಂಗಡಿ ಇಟ್ಟಿರುವ ಮುಸ್ಲಿಂ ಯುವಕ ಮೊಬೈಲ್​​ನಲ್ಲಿ ಹಾಡೊಂದನ್ನು ಹಾಕಿಕೊಂಡಿದ್ದಾನೆ. ಅದರಲ್ಲಿ ಪಾಕಿಸ್ತಾನ ಜಿಂದಾಬಾದ್​ ಎಂಬ ಘೋಷಣೆ ಕೇಳುತ್ತದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬಿಜೆಪಿ ನಾಯಕರು ಪೊಲೀಸರಿಗೆ ದೂರು ನೀಡಿದ್ದರು. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಬರೇಲಿ ಎಸ್​ಪಿ ರಾಜ್​ಕುಮಾರ್​ ತಿಳಿಸಿದ್ದಾರೆ. 

ಇನ್ನು ಅಂಗಡಿಯ ಮಾಲೀಕ ಒಬ್ಬ ಯುವಕನಾಗಿದ್ದು, ಆತನ ತಾಯಿ ಪ್ರತಿಕ್ರಿಯೆ ನೀಡಿ, ಅವರು ಮೊಬೈಲ್​​ನಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಹಾಡು ಹಾಕಿದ್ದರ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದಿದ್ದಾರೆ. ಆದರೆ ನನ್ನ ಕಿರಿಯ ಮಗ ಯಾವಾಗಲೂ ಮೊಬೈಲ್​​ನಲ್ಲಿ ಧಾರ್ಮಿಕ ಗೀತೆಗಳನ್ನು ಕೇಳುತ್ತಿರುತ್ತಾನೆ. ಇಂಥ ಘೋಷಣೆ ಇದ್ದಿದ್ದು ಅವನಿಗೂ ಗೊತ್ತಿರುವುದಿಲ್ಲ. ಯಾಕೆಂದರೆ ಈ ಹಿಂದೆ ಎಂದಿಗೂ ಇಂಥ ಹಾಡುಗಳನ್ನು ಅವನು ಹಾಕಿಲ್ಲ. ಮೇಲಾಗಿ ನನ್ನ ಮಗ ವಿದ್ಯಾವಂತನಲ್ಲ. ದಯವಿಟ್ಟು ಆತನನ್ನು ಬಿಟ್ಟುಬಿಡಿ ಎಂದು ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್​  ಎಂದು ಘೋಷಣೆ ಕೂಗಿ ಅರೆಸ್ಟ್​ ಆಗಿದ್ದರು. ಅದೂ ಕೂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಂಧಿಸಲಾಗಿತ್ತು. ಬಂಧಿತರಾದ ಮೊಹಮ್ಮದ್​ ಜಾಫರ್​, ಸಮೀರ್​ ಅಲಿ, ಅಲಿ ರಾಜಾ ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.

ಇದನ್ನೂ ಓದಿ:   ಉಕ್ರೇನ್ ಪೊಲೀಸ್ ಮುಖ್ಯಸ್ಥರ ಪ್ರಕಾರ ಬುಚಾನಲ್ಲಿ ಬಲಿಯಾದವರ ಪೈಕಿ ಹೆಚ್ಚಿನವರನ್ನು ಗುಂಡಿಟ್ಟು ಕೊಲ್ಲಲಾಗಿದೆ

Published On - 8:23 am, Sat, 16 April 22

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ