AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ ಎಂದ ತಾಯಿ

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್​  ಎಂದು ಘೋಷಣೆ ಕೂಗಿ ಅರೆಸ್ಟ್​ ಆಗಿದ್ದರು.

ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ  ಎಂದ ತಾಯಿ
ಪಾಕಿಸ್ತಾನ್​ ಜಿಂದಾಬಾದ್​ ಸ್ಲೋಗನ್​ ಹಾಕಿದವ
TV9 Web
| Edited By: |

Updated on:Apr 16, 2022 | 8:24 AM

Share

ಉತ್ತರ ಪ್ರದೇಶದ ಬರೇಲಿಯಲ್ಲಿ ಅಂಗಡಿಯೊಂದರಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಹಾಡು ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ನಡೆದದ್ದು ಬರೇಲಿ ಜಿಲ್ಲೆಯ ಭುಟಾ ಪೊಲೀಸ್ ಸ್ಟೇಶನ್​ ವ್ಯಾಪ್ತಿಯಲ್ಲಿರುವ ಸಿಂಘೈ ಕಲನ್​ ಎಂಬ ಹಳ್ಳಿಯಲ್ಲಿ. ಅಲ್ಲಿ ಕಿರಾಣಿ ಅಂಗಡಿ ಇಟ್ಟಿರುವ ಮುಸ್ಲಿಂ ಯುವಕ ಮೊಬೈಲ್​​ನಲ್ಲಿ ಹಾಡೊಂದನ್ನು ಹಾಕಿಕೊಂಡಿದ್ದಾನೆ. ಅದರಲ್ಲಿ ಪಾಕಿಸ್ತಾನ ಜಿಂದಾಬಾದ್​ ಎಂಬ ಘೋಷಣೆ ಕೇಳುತ್ತದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬಿಜೆಪಿ ನಾಯಕರು ಪೊಲೀಸರಿಗೆ ದೂರು ನೀಡಿದ್ದರು. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಬರೇಲಿ ಎಸ್​ಪಿ ರಾಜ್​ಕುಮಾರ್​ ತಿಳಿಸಿದ್ದಾರೆ. 

ಇನ್ನು ಅಂಗಡಿಯ ಮಾಲೀಕ ಒಬ್ಬ ಯುವಕನಾಗಿದ್ದು, ಆತನ ತಾಯಿ ಪ್ರತಿಕ್ರಿಯೆ ನೀಡಿ, ಅವರು ಮೊಬೈಲ್​​ನಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಹಾಡು ಹಾಕಿದ್ದರ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದಿದ್ದಾರೆ. ಆದರೆ ನನ್ನ ಕಿರಿಯ ಮಗ ಯಾವಾಗಲೂ ಮೊಬೈಲ್​​ನಲ್ಲಿ ಧಾರ್ಮಿಕ ಗೀತೆಗಳನ್ನು ಕೇಳುತ್ತಿರುತ್ತಾನೆ. ಇಂಥ ಘೋಷಣೆ ಇದ್ದಿದ್ದು ಅವನಿಗೂ ಗೊತ್ತಿರುವುದಿಲ್ಲ. ಯಾಕೆಂದರೆ ಈ ಹಿಂದೆ ಎಂದಿಗೂ ಇಂಥ ಹಾಡುಗಳನ್ನು ಅವನು ಹಾಕಿಲ್ಲ. ಮೇಲಾಗಿ ನನ್ನ ಮಗ ವಿದ್ಯಾವಂತನಲ್ಲ. ದಯವಿಟ್ಟು ಆತನನ್ನು ಬಿಟ್ಟುಬಿಡಿ ಎಂದು ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್​  ಎಂದು ಘೋಷಣೆ ಕೂಗಿ ಅರೆಸ್ಟ್​ ಆಗಿದ್ದರು. ಅದೂ ಕೂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಂಧಿಸಲಾಗಿತ್ತು. ಬಂಧಿತರಾದ ಮೊಹಮ್ಮದ್​ ಜಾಫರ್​, ಸಮೀರ್​ ಅಲಿ, ಅಲಿ ರಾಜಾ ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.

ಇದನ್ನೂ ಓದಿ:   ಉಕ್ರೇನ್ ಪೊಲೀಸ್ ಮುಖ್ಯಸ್ಥರ ಪ್ರಕಾರ ಬುಚಾನಲ್ಲಿ ಬಲಿಯಾದವರ ಪೈಕಿ ಹೆಚ್ಚಿನವರನ್ನು ಗುಂಡಿಟ್ಟು ಕೊಲ್ಲಲಾಗಿದೆ

Published On - 8:23 am, Sat, 16 April 22

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ