AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ ಎಂದ ತಾಯಿ

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್​  ಎಂದು ಘೋಷಣೆ ಕೂಗಿ ಅರೆಸ್ಟ್​ ಆಗಿದ್ದರು.

ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ  ಎಂದ ತಾಯಿ
ಪಾಕಿಸ್ತಾನ್​ ಜಿಂದಾಬಾದ್​ ಸ್ಲೋಗನ್​ ಹಾಕಿದವ
TV9 Web
| Edited By: |

Updated on:Apr 16, 2022 | 8:24 AM

Share

ಉತ್ತರ ಪ್ರದೇಶದ ಬರೇಲಿಯಲ್ಲಿ ಅಂಗಡಿಯೊಂದರಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಹಾಡು ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ನಡೆದದ್ದು ಬರೇಲಿ ಜಿಲ್ಲೆಯ ಭುಟಾ ಪೊಲೀಸ್ ಸ್ಟೇಶನ್​ ವ್ಯಾಪ್ತಿಯಲ್ಲಿರುವ ಸಿಂಘೈ ಕಲನ್​ ಎಂಬ ಹಳ್ಳಿಯಲ್ಲಿ. ಅಲ್ಲಿ ಕಿರಾಣಿ ಅಂಗಡಿ ಇಟ್ಟಿರುವ ಮುಸ್ಲಿಂ ಯುವಕ ಮೊಬೈಲ್​​ನಲ್ಲಿ ಹಾಡೊಂದನ್ನು ಹಾಕಿಕೊಂಡಿದ್ದಾನೆ. ಅದರಲ್ಲಿ ಪಾಕಿಸ್ತಾನ ಜಿಂದಾಬಾದ್​ ಎಂಬ ಘೋಷಣೆ ಕೇಳುತ್ತದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬಿಜೆಪಿ ನಾಯಕರು ಪೊಲೀಸರಿಗೆ ದೂರು ನೀಡಿದ್ದರು. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಬರೇಲಿ ಎಸ್​ಪಿ ರಾಜ್​ಕುಮಾರ್​ ತಿಳಿಸಿದ್ದಾರೆ. 

ಇನ್ನು ಅಂಗಡಿಯ ಮಾಲೀಕ ಒಬ್ಬ ಯುವಕನಾಗಿದ್ದು, ಆತನ ತಾಯಿ ಪ್ರತಿಕ್ರಿಯೆ ನೀಡಿ, ಅವರು ಮೊಬೈಲ್​​ನಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಹಾಡು ಹಾಕಿದ್ದರ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದಿದ್ದಾರೆ. ಆದರೆ ನನ್ನ ಕಿರಿಯ ಮಗ ಯಾವಾಗಲೂ ಮೊಬೈಲ್​​ನಲ್ಲಿ ಧಾರ್ಮಿಕ ಗೀತೆಗಳನ್ನು ಕೇಳುತ್ತಿರುತ್ತಾನೆ. ಇಂಥ ಘೋಷಣೆ ಇದ್ದಿದ್ದು ಅವನಿಗೂ ಗೊತ್ತಿರುವುದಿಲ್ಲ. ಯಾಕೆಂದರೆ ಈ ಹಿಂದೆ ಎಂದಿಗೂ ಇಂಥ ಹಾಡುಗಳನ್ನು ಅವನು ಹಾಕಿಲ್ಲ. ಮೇಲಾಗಿ ನನ್ನ ಮಗ ವಿದ್ಯಾವಂತನಲ್ಲ. ದಯವಿಟ್ಟು ಆತನನ್ನು ಬಿಟ್ಟುಬಿಡಿ ಎಂದು ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್​  ಎಂದು ಘೋಷಣೆ ಕೂಗಿ ಅರೆಸ್ಟ್​ ಆಗಿದ್ದರು. ಅದೂ ಕೂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಂಧಿಸಲಾಗಿತ್ತು. ಬಂಧಿತರಾದ ಮೊಹಮ್ಮದ್​ ಜಾಫರ್​, ಸಮೀರ್​ ಅಲಿ, ಅಲಿ ರಾಜಾ ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.

ಇದನ್ನೂ ಓದಿ:   ಉಕ್ರೇನ್ ಪೊಲೀಸ್ ಮುಖ್ಯಸ್ಥರ ಪ್ರಕಾರ ಬುಚಾನಲ್ಲಿ ಬಲಿಯಾದವರ ಪೈಕಿ ಹೆಚ್ಚಿನವರನ್ನು ಗುಂಡಿಟ್ಟು ಕೊಲ್ಲಲಾಗಿದೆ

Published On - 8:23 am, Sat, 16 April 22

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ