AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ ಎಂದ ತಾಯಿ

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್​  ಎಂದು ಘೋಷಣೆ ಕೂಗಿ ಅರೆಸ್ಟ್​ ಆಗಿದ್ದರು.

ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ  ಎಂದ ತಾಯಿ
ಪಾಕಿಸ್ತಾನ್​ ಜಿಂದಾಬಾದ್​ ಸ್ಲೋಗನ್​ ಹಾಕಿದವ
TV9 Web
| Updated By: Lakshmi Hegde|

Updated on:Apr 16, 2022 | 8:24 AM

Share

ಉತ್ತರ ಪ್ರದೇಶದ ಬರೇಲಿಯಲ್ಲಿ ಅಂಗಡಿಯೊಂದರಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಹಾಡು ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ನಡೆದದ್ದು ಬರೇಲಿ ಜಿಲ್ಲೆಯ ಭುಟಾ ಪೊಲೀಸ್ ಸ್ಟೇಶನ್​ ವ್ಯಾಪ್ತಿಯಲ್ಲಿರುವ ಸಿಂಘೈ ಕಲನ್​ ಎಂಬ ಹಳ್ಳಿಯಲ್ಲಿ. ಅಲ್ಲಿ ಕಿರಾಣಿ ಅಂಗಡಿ ಇಟ್ಟಿರುವ ಮುಸ್ಲಿಂ ಯುವಕ ಮೊಬೈಲ್​​ನಲ್ಲಿ ಹಾಡೊಂದನ್ನು ಹಾಕಿಕೊಂಡಿದ್ದಾನೆ. ಅದರಲ್ಲಿ ಪಾಕಿಸ್ತಾನ ಜಿಂದಾಬಾದ್​ ಎಂಬ ಘೋಷಣೆ ಕೇಳುತ್ತದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬಿಜೆಪಿ ನಾಯಕರು ಪೊಲೀಸರಿಗೆ ದೂರು ನೀಡಿದ್ದರು. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಬರೇಲಿ ಎಸ್​ಪಿ ರಾಜ್​ಕುಮಾರ್​ ತಿಳಿಸಿದ್ದಾರೆ. 

ಇನ್ನು ಅಂಗಡಿಯ ಮಾಲೀಕ ಒಬ್ಬ ಯುವಕನಾಗಿದ್ದು, ಆತನ ತಾಯಿ ಪ್ರತಿಕ್ರಿಯೆ ನೀಡಿ, ಅವರು ಮೊಬೈಲ್​​ನಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಹಾಡು ಹಾಕಿದ್ದರ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದಿದ್ದಾರೆ. ಆದರೆ ನನ್ನ ಕಿರಿಯ ಮಗ ಯಾವಾಗಲೂ ಮೊಬೈಲ್​​ನಲ್ಲಿ ಧಾರ್ಮಿಕ ಗೀತೆಗಳನ್ನು ಕೇಳುತ್ತಿರುತ್ತಾನೆ. ಇಂಥ ಘೋಷಣೆ ಇದ್ದಿದ್ದು ಅವನಿಗೂ ಗೊತ್ತಿರುವುದಿಲ್ಲ. ಯಾಕೆಂದರೆ ಈ ಹಿಂದೆ ಎಂದಿಗೂ ಇಂಥ ಹಾಡುಗಳನ್ನು ಅವನು ಹಾಕಿಲ್ಲ. ಮೇಲಾಗಿ ನನ್ನ ಮಗ ವಿದ್ಯಾವಂತನಲ್ಲ. ದಯವಿಟ್ಟು ಆತನನ್ನು ಬಿಟ್ಟುಬಿಡಿ ಎಂದು ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್​  ಎಂದು ಘೋಷಣೆ ಕೂಗಿ ಅರೆಸ್ಟ್​ ಆಗಿದ್ದರು. ಅದೂ ಕೂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಂಧಿಸಲಾಗಿತ್ತು. ಬಂಧಿತರಾದ ಮೊಹಮ್ಮದ್​ ಜಾಫರ್​, ಸಮೀರ್​ ಅಲಿ, ಅಲಿ ರಾಜಾ ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.

ಇದನ್ನೂ ಓದಿ:   ಉಕ್ರೇನ್ ಪೊಲೀಸ್ ಮುಖ್ಯಸ್ಥರ ಪ್ರಕಾರ ಬುಚಾನಲ್ಲಿ ಬಲಿಯಾದವರ ಪೈಕಿ ಹೆಚ್ಚಿನವರನ್ನು ಗುಂಡಿಟ್ಟು ಕೊಲ್ಲಲಾಗಿದೆ

Published On - 8:23 am, Sat, 16 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ