AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪೂರೈಕೆಯಲ್ಲಿ ಮತ್ತೇ ವ್ಯತ್ಯಯ, ಬುಧವಾರ ಲಸಿಕೆ ಕಾರ್ಯಕ್ರಮ ನಿಲ್ಲಿಸವುದಾಗಿ ಹೇಳಿದ ಮುಂಬೈ ಮಹಾನಗಗರ ಪಾಲಿಕೆ

ಅತಿ ಹೆಚ್ಚು ಲಸಿಕೆ ಜನರನ್ನೊಳಗೊಂಡ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮುಂಚೂಣಿಯಲ್ಲಿದ್ದರೂ ರಾಜ್ಯದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು, ಅನೇಕ ಜಿಲ್ಲೆಗಳಲ್ಲಿ ಲಸಿಕೆಯ ದಾಸ್ತಾನು ಕಡಿಮೆಯಾಗುತ್ತಿರುವುರಿಂದ ಲಸಿಕಾ ಕಾರ್ಯಕ್ರಮವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ ಎಂದು ವಿಧಾನ ಸಭೆಗೆ ತಿಳಿಸಿದ್ದರು.

ಲಸಿಕೆ ಪೂರೈಕೆಯಲ್ಲಿ ಮತ್ತೇ ವ್ಯತ್ಯಯ, ಬುಧವಾರ ಲಸಿಕೆ ಕಾರ್ಯಕ್ರಮ ನಿಲ್ಲಿಸವುದಾಗಿ ಹೇಳಿದ ಮುಂಬೈ ಮಹಾನಗಗರ ಪಾಲಿಕೆ
ಸಂಗ್ರಹ ಚಿತ್ರ
TV9 Web
| Edited By: |

Updated on: Jul 20, 2021 | 11:00 PM

Share

ಮುಂಬೈ:  ಲಸಿಕೆ ಪೂರೈಕೆ ಅಭಾವ ಮುಂಬೈಯಲ್ಲಿ ಮತ್ತೆ ತಲೆದೋರಿದೆ. ಗ್ರೇಟರ್ ಮುಂಬೈ ಪೌರಾಡಳಿತ ಸಂಸ್ಥೆಯು ಕೋವಿಡ್-19 ಲಸಿಕೆ ಲಭ್ಯವಿಲ್ಲದೆ ಕಾರಣ ಲಸಿಕೆ ನೀಡುವ ಕಾರ್ಯಕ್ರಮವನ್ನು ಬುಧವಾರದಂದು ಸ್ಥಗಿತಗೊಳಿಸಲಾಗದೆಯೆಂದು ಪ್ರಕಟನೆಯೊಂದರಲ್ಲಿ ತಿಳಿಸಿದೆ. ಈ ಕಾರಣಕ್ಕಾಗೇ, ಮಂಗಳವಾರದಂದು ಸರ್ಕಾರ ಮತ್ತು ಮಹಾನಗರ ಪಾಲಿಕೆಯಿಂದ ನಿರ್ವಹಿಸಲ್ಪಡುತ್ತಿರುವ ನಗರದ 309 ಲಸಿಕಾ ಕೇಂದ್ರಗಳಲ್ಲಿ ಕೇವಲ 58 ಮಾತ್ರ ಜನರಿಗೆ ಲಸಿಕೆ ನೀಡಿದವು. ಮಹಾರಾಷ್ಟ್ರದಲ್ಲಿ ಲಸಿಕೆ ಪಡೆದವರ ಸಂಖ್ಯೆ 4 ಕೋಟಿ ದಾಟಿದ ಮಾಹಿತಿ ಲಭ್ಯವಾದ ನಂತರ ಈ ಬೆಳವಣಿಗೆ ನಡೆದಿದೆ. ಲಸಿಕೆ ದಾಸ್ತಾನನ್ನು ಹೆಚ್ಚಿಸಿದ್ದರಿಂದ ಕೇವಲ ಒಂದು ತಿಂಗಳ ಅವಧಿಯಲ್ಲಿ ಈ ಸಾಧನೆ ಮಾಡಲಾಯಿತು ಎಂದು ರಾಜ್ಯ ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ. ಜೂನ್ 26ರಂದು ಮಹಾರಾಷ್ಟ್ರ ಮೂರು ಕೋಟಿ ಸಂಖ್ಯೆಯನ್ನು ದಾಟಿತ್ತು. ಹಾಗೆಯೇ, ಮೇ 13 ರಂದು 2 ಕೋಟಿ ಜನ ಲಸಿಕೆ ಪಡೆದಿದ್ದಾರೆಂದು ಸರ್ಕಾರ ಹೇಳಿತ್ತು.

ಹಾಗೆ ನೋಡಿದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಯಸ್ಕರಿಗೆಲ್ಲ ಲಸಿಕೆ ನೀಡುವ ಘೋಷಣೆಯನ್ನು ಮಾಡಿದ ನಂತರ ಮಹಾರಾಷ್ಟ್ರದಲ್ಲಿ ಲಸಿಕೆಯ ಅಭಾವ ಆಗಾಗ ತಲೆದೋರುತ್ತಲೇ ಇದೆ.

ಅತಿ ಹೆಚ್ಚು ಲಸಿಕೆ ಜನರನ್ನೊಳಗೊಂಡ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮುಂಚೂಣಿಯಲ್ಲಿದ್ದರೂ ರಾಜ್ಯದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು, ಅನೇಕ ಜಿಲ್ಲೆಗಳಲ್ಲಿ ಲಸಿಕೆಯ ದಾಸ್ತಾನು ಕಡಿಮೆಯಾಗುತ್ತಿರುವುರಿಂದ ಲಸಿಕಾ ಕಾರ್ಯಕ್ರಮವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ ಎಂದು ವಿಧಾನ ಸಭೆಗೆ ತಿಳಿಸಿದ್ದರು.

ಕಳೆದ 24 ಗಂಟೆಗಳಲ್ಲಿ 351 ಹೊಸ ಕೋವಿಡ್​ ಪ್ರಕರಣಗಳು ಮುಂಬೈಯಲ್ಲಿ ವರದಿಯಾಗಿವೆ ಮತ್ತು 525 ಸೋಂಕಿತರು ಗುಣಮುಖ ಹೊಂದಿದ್ದಾರೆ. ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಶೇಕಡಾ 97 ರಷ್ಟಿದೆ. ದೇಶದ ಆರ್ಥಿಕ ರಾಜಧಾನಿ ಎಂದು ಕರೆಸಿಕೊಳ್ಳುವ ಮುಂಬೈಯಲ್ಲಿ ಪ್ರಸಕ್ತವಾಗಿ 6,161 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: ಗಾಜಿನ ಮನೆಯಲ್ಲಿರುವವರು ಕಲ್ಲು ಹೊಡೆಯಬಾರದು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪರಮ್​ಸಿಂಗ್​ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?