AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಉತ್ಪಾದನೆಯಾದ ಕೊವ್ಯಾಕ್ಸಿನ್ ಎಲ್ಲಿಗೆ ಹೋಯ್ತು? ಕೊವ್ಯಾಕ್ಸಿನ್ ಉತ್ಪಾದನೆ, ಬಳಕೆ ಲೆಕ್ಕ ಪರಸ್ಪರ ತಾಳೆಯಾಗುತ್ತಿಲ್ಲ

ದೇಶದಲ್ಲಿ ಈವರೆಗೆ 8 ಕೋಟಿ ಡೋಸ್ ಕೊವ್ಯಾಕ್ಸಿನ್ ಉತ್ಪಾದನೆ ಮಾಡಲಾಗಿದೆ. 8 ಕೋಟಿ ಡೋಸ್ ಪೈಕಿ 2 ಕೋಟಿ ಡೋಸ್ ವಿದೇಶಗಳಿಗೆ ರಫ್ತು ಮಾಡಲಾಗಿದೆ. ಹಾಗೂ ಉಳಿದ 6 ಕೋಟಿ ಡೋಸ್ನಲ್ಲಿ ದೇಶದಲ್ಲಿ ಈವರೆಗೆ 2 ಕೋಟಿ ಡೋಸ್ ಜನರಿಗೆ ನೀಡಲಾಗಿದೆ. ಹಾಗಾದರೆ ಉಳಿದ 4 ಕೋಟಿ ಡೋಸ್ ಲಸಿಕೆ ಎಲ್ಲಿ ಹೋಯಿತು ಎಂಬ ಪ್ರಶ್ನೆ ಉದ್ಭವಿಸಿದೆ.

ದೇಶದಲ್ಲಿ ಉತ್ಪಾದನೆಯಾದ ಕೊವ್ಯಾಕ್ಸಿನ್ ಎಲ್ಲಿಗೆ ಹೋಯ್ತು? ಕೊವ್ಯಾಕ್ಸಿನ್ ಉತ್ಪಾದನೆ, ಬಳಕೆ ಲೆಕ್ಕ ಪರಸ್ಪರ ತಾಳೆಯಾಗುತ್ತಿಲ್ಲ
ಕೊವ್ಯಾಕ್ಸಿನ್
ಆಯೇಷಾ ಬಾನು
|

Updated on: May 28, 2021 | 1:00 PM

Share

ದೆಹಲಿ: ಕೊರೊನಾ ಮಹಾಮಾರಿ ಇಡೀ ದೇಶವನ್ನೆ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿದೆ. ಈ ಮಹಾಮಾರಿಯ ವಿರುದ್ಧ ಹೋರಾಡಲು ಸದ್ಯ ಲಸಿಕೆ ಪಯೋಗ ಮಾಡಲಾಗುತ್ತಿದೆ. ಆದರೆ ದೇಶದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸಿರುವ ಹೊತ್ತಿನಲ್ಲಿ ಲಸಿಕೆ ಕೊರತೆಯೂ ತಲೆದೋರಿರುವುದು ಮತ್ತಷ್ಟು ಸಂಕಟಕ್ಕೆ ಕಾರಣವಾಗಿದೆ. ಬಹುತೇಕ ಎಲ್ಲಾ ಕಡೆ ಕೊರೊನಾ ಲಸಿಕೆಗೆ ಅಭಾವ ಉಂಟಾಗಿದೆ. ಆದರೆ ದೇಶದಲ್ಲಿ ಉತ್ಪಾದನೆಯಾದ ಕೊವ್ಯಾಕ್ಸಿನ್ ಎಲ್ಲಿಗೆ ಹೋಯ್ತು? ಎಂಬ ಪ್ರಶ್ನೆ ಎದ್ದಿದೆ.

ದೇಶದಲ್ಲಿ ಈವರೆಗೆ 8 ಕೋಟಿ ಡೋಸ್ ಕೊವ್ಯಾಕ್ಸಿನ್ ಉತ್ಪಾದನೆ ಮಾಡಲಾಗಿದೆ. 8 ಕೋಟಿ ಡೋಸ್ ಪೈಕಿ 2 ಕೋಟಿ ಡೋಸ್ ವಿದೇಶಗಳಿಗೆ ರಫ್ತು ಮಾಡಲಾಗಿದೆ. ಹಾಗೂ ಉಳಿದ 6 ಕೋಟಿ ಡೋಸ್ನಲ್ಲಿ ದೇಶದಲ್ಲಿ ಈವರೆಗೆ 2 ಕೋಟಿ ಡೋಸ್ ಜನರಿಗೆ ನೀಡಲಾಗಿದೆ. ಹಾಗಾದರೆ ಉಳಿದ 4 ಕೋಟಿ ಡೋಸ್ ಲಸಿಕೆ ಎಲ್ಲಿ ಹೋಯಿತು ಎಂಬ ಪ್ರಶ್ನೆ ಉದ್ಭವಿಸಿದೆ.

ಇನ್ನು ಕೊವ್ಯಾಕ್ಸಿನ್ ಉತ್ಪಾದನೆ ಮತ್ತು ಬಳಕೆಯಾದ ಅಂಕಿ ಅಂಶ ಒಂದಕ್ಕೊಂದು ತಾಳೆಯಾಗುತ್ತಿಲ್ಲ. ಲಸಿಕೆ ಉತ್ಪಾದನೆ ಮತ್ತು ಪೂರೈಕೆ ಬಗ್ಗೆ ಭಾರತ್ ಬಯೋಟೆಕ್ ಕಂಪನಿಯಿಂದ ಈವರೆಗೆ ಸ್ಪಷ್ಟನೆಯಿಲ್ಲ. ರಾಜ್ಯ ಸರ್ಕಾರಗಳಿಂದ ಕೊವ್ಯಾಕ್ಸಿನ್ಗೆ ಅಪಾರ ಬೇಡಿಕೆಯಿದೆ. ಆದರೆ ರಾಜ್ಯ ಸರ್ಕಾರಗಳಿಗೂ ಹೆಚ್ಚಿನ ಲಸಿಕೆ ಪೂರೈಕೆಯಾಗ್ತಿಲ್ಲ. ಹಾಗಾದ್ರೆ 4 ಕೋಟಿ ಡೋಸ್ ಕೊವ್ಯಾಕ್ಸಿನ್ ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ದರಕ್ಕೆ ಲಸಿಕೆ ಪೂರೈಸಿದೆಯಾ? ಎಂಬ ಅನುಮಾನ ಉಂಟಾಗಿದೆ. ಕೊವ್ಯಾಕ್ಸಿನ್ ಉತ್ಪಾದನೆ, ಬಳಕೆ ಲೆಕ್ಕ ಪರಸ್ಪರ ತಾಳೆಯಾಗುತ್ತಿಲ್ಲ ಹೀಗಾಗಿ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಆದಷ್ಟು ಬೇಗ ಈ ಬಗ್ಗೆ ತನಿಖೆ ನಡೆಸಿ ಸತ್ಯವನ್ನು ಬಯಲು ಮಾಡಬೇಕಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ, ಔಷಧಿ ಮೇಲಿನ ಜಿಎಸ್‌ಟಿಗೆ ಬೀಳುತ್ತಾ ಕಡಿವಾಣ; ಮೇ 28ಕ್ಕೆ ಜಿಎಸ್​ಟಿ ಮಂಡಳಿ ಮಹತ್ವದ ಸಭೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ