AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಉತ್ಪಾದನೆಯಾದ ಕೊವ್ಯಾಕ್ಸಿನ್ ಎಲ್ಲಿಗೆ ಹೋಯ್ತು? ಕೊವ್ಯಾಕ್ಸಿನ್ ಉತ್ಪಾದನೆ, ಬಳಕೆ ಲೆಕ್ಕ ಪರಸ್ಪರ ತಾಳೆಯಾಗುತ್ತಿಲ್ಲ

ದೇಶದಲ್ಲಿ ಈವರೆಗೆ 8 ಕೋಟಿ ಡೋಸ್ ಕೊವ್ಯಾಕ್ಸಿನ್ ಉತ್ಪಾದನೆ ಮಾಡಲಾಗಿದೆ. 8 ಕೋಟಿ ಡೋಸ್ ಪೈಕಿ 2 ಕೋಟಿ ಡೋಸ್ ವಿದೇಶಗಳಿಗೆ ರಫ್ತು ಮಾಡಲಾಗಿದೆ. ಹಾಗೂ ಉಳಿದ 6 ಕೋಟಿ ಡೋಸ್ನಲ್ಲಿ ದೇಶದಲ್ಲಿ ಈವರೆಗೆ 2 ಕೋಟಿ ಡೋಸ್ ಜನರಿಗೆ ನೀಡಲಾಗಿದೆ. ಹಾಗಾದರೆ ಉಳಿದ 4 ಕೋಟಿ ಡೋಸ್ ಲಸಿಕೆ ಎಲ್ಲಿ ಹೋಯಿತು ಎಂಬ ಪ್ರಶ್ನೆ ಉದ್ಭವಿಸಿದೆ.

ದೇಶದಲ್ಲಿ ಉತ್ಪಾದನೆಯಾದ ಕೊವ್ಯಾಕ್ಸಿನ್ ಎಲ್ಲಿಗೆ ಹೋಯ್ತು? ಕೊವ್ಯಾಕ್ಸಿನ್ ಉತ್ಪಾದನೆ, ಬಳಕೆ ಲೆಕ್ಕ ಪರಸ್ಪರ ತಾಳೆಯಾಗುತ್ತಿಲ್ಲ
ಕೊವ್ಯಾಕ್ಸಿನ್
ಆಯೇಷಾ ಬಾನು
|

Updated on: May 28, 2021 | 1:00 PM

Share

ದೆಹಲಿ: ಕೊರೊನಾ ಮಹಾಮಾರಿ ಇಡೀ ದೇಶವನ್ನೆ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿದೆ. ಈ ಮಹಾಮಾರಿಯ ವಿರುದ್ಧ ಹೋರಾಡಲು ಸದ್ಯ ಲಸಿಕೆ ಪಯೋಗ ಮಾಡಲಾಗುತ್ತಿದೆ. ಆದರೆ ದೇಶದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸಿರುವ ಹೊತ್ತಿನಲ್ಲಿ ಲಸಿಕೆ ಕೊರತೆಯೂ ತಲೆದೋರಿರುವುದು ಮತ್ತಷ್ಟು ಸಂಕಟಕ್ಕೆ ಕಾರಣವಾಗಿದೆ. ಬಹುತೇಕ ಎಲ್ಲಾ ಕಡೆ ಕೊರೊನಾ ಲಸಿಕೆಗೆ ಅಭಾವ ಉಂಟಾಗಿದೆ. ಆದರೆ ದೇಶದಲ್ಲಿ ಉತ್ಪಾದನೆಯಾದ ಕೊವ್ಯಾಕ್ಸಿನ್ ಎಲ್ಲಿಗೆ ಹೋಯ್ತು? ಎಂಬ ಪ್ರಶ್ನೆ ಎದ್ದಿದೆ.

ದೇಶದಲ್ಲಿ ಈವರೆಗೆ 8 ಕೋಟಿ ಡೋಸ್ ಕೊವ್ಯಾಕ್ಸಿನ್ ಉತ್ಪಾದನೆ ಮಾಡಲಾಗಿದೆ. 8 ಕೋಟಿ ಡೋಸ್ ಪೈಕಿ 2 ಕೋಟಿ ಡೋಸ್ ವಿದೇಶಗಳಿಗೆ ರಫ್ತು ಮಾಡಲಾಗಿದೆ. ಹಾಗೂ ಉಳಿದ 6 ಕೋಟಿ ಡೋಸ್ನಲ್ಲಿ ದೇಶದಲ್ಲಿ ಈವರೆಗೆ 2 ಕೋಟಿ ಡೋಸ್ ಜನರಿಗೆ ನೀಡಲಾಗಿದೆ. ಹಾಗಾದರೆ ಉಳಿದ 4 ಕೋಟಿ ಡೋಸ್ ಲಸಿಕೆ ಎಲ್ಲಿ ಹೋಯಿತು ಎಂಬ ಪ್ರಶ್ನೆ ಉದ್ಭವಿಸಿದೆ.

ಇನ್ನು ಕೊವ್ಯಾಕ್ಸಿನ್ ಉತ್ಪಾದನೆ ಮತ್ತು ಬಳಕೆಯಾದ ಅಂಕಿ ಅಂಶ ಒಂದಕ್ಕೊಂದು ತಾಳೆಯಾಗುತ್ತಿಲ್ಲ. ಲಸಿಕೆ ಉತ್ಪಾದನೆ ಮತ್ತು ಪೂರೈಕೆ ಬಗ್ಗೆ ಭಾರತ್ ಬಯೋಟೆಕ್ ಕಂಪನಿಯಿಂದ ಈವರೆಗೆ ಸ್ಪಷ್ಟನೆಯಿಲ್ಲ. ರಾಜ್ಯ ಸರ್ಕಾರಗಳಿಂದ ಕೊವ್ಯಾಕ್ಸಿನ್ಗೆ ಅಪಾರ ಬೇಡಿಕೆಯಿದೆ. ಆದರೆ ರಾಜ್ಯ ಸರ್ಕಾರಗಳಿಗೂ ಹೆಚ್ಚಿನ ಲಸಿಕೆ ಪೂರೈಕೆಯಾಗ್ತಿಲ್ಲ. ಹಾಗಾದ್ರೆ 4 ಕೋಟಿ ಡೋಸ್ ಕೊವ್ಯಾಕ್ಸಿನ್ ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ದರಕ್ಕೆ ಲಸಿಕೆ ಪೂರೈಸಿದೆಯಾ? ಎಂಬ ಅನುಮಾನ ಉಂಟಾಗಿದೆ. ಕೊವ್ಯಾಕ್ಸಿನ್ ಉತ್ಪಾದನೆ, ಬಳಕೆ ಲೆಕ್ಕ ಪರಸ್ಪರ ತಾಳೆಯಾಗುತ್ತಿಲ್ಲ ಹೀಗಾಗಿ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಆದಷ್ಟು ಬೇಗ ಈ ಬಗ್ಗೆ ತನಿಖೆ ನಡೆಸಿ ಸತ್ಯವನ್ನು ಬಯಲು ಮಾಡಬೇಕಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ, ಔಷಧಿ ಮೇಲಿನ ಜಿಎಸ್‌ಟಿಗೆ ಬೀಳುತ್ತಾ ಕಡಿವಾಣ; ಮೇ 28ಕ್ಕೆ ಜಿಎಸ್​ಟಿ ಮಂಡಳಿ ಮಹತ್ವದ ಸಭೆ

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ