ಸಮನ್ಸ್‌ಗೆ ಪ್ರತಿಕ್ರಿಯಿಸಲಿಲ್ಲ ಎಂದು ಬಂಧಿಸುವುದು ಸರಿಯಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಛಾಟಿ ಬೀಸಿದ ಸುಪ್ರಿಂ ಕೋರ್ಟ್‌

ಸಮನ್ಸ್​ಗೆ ಪ್ರತಿಕ್ರಿಯಿಸಲಿಲ್ಲ ಎನ್ನುವ ಕಾರಣಕ್ಕೆ ಬಂಧಿಸುವುದು ಸೂಕ್ತವಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್​ ಛಾಟಿ ಬೀಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 ರ ಸೆಕ್ಷನ್ 50 ರ ಅಡಿಯಲ್ಲಿ ನೀಡಲಾದ ಸಮನ್ಸ್‌ಗೆ ಪ್ರತಿಕ್ರಿಯಿಸಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯನ್ನು ಬಂಧಿಸುವುದು ಸರಿಯಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್​ ತಿಳಿಸಿದೆ.

ಸಮನ್ಸ್‌ಗೆ ಪ್ರತಿಕ್ರಿಯಿಸಲಿಲ್ಲ ಎಂದು ಬಂಧಿಸುವುದು ಸರಿಯಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಛಾಟಿ ಬೀಸಿದ ಸುಪ್ರಿಂ ಕೋರ್ಟ್‌
ಸುಪ್ರೀಂಕೋರ್ಟ್​

Updated on: Oct 04, 2023 | 11:46 AM

ಸಮನ್ಸ್​ಗೆ ಪ್ರತಿಕ್ರಿಯಿಸಲಿಲ್ಲ ಎನ್ನುವ ಕಾರಣಕ್ಕೆ ಬಂಧಿಸುವುದು ಸೂಕ್ತವಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್​ ಛಾಟಿ ಬೀಸಿದೆ. 2002 ರ  ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಸೆಕ್ಷನ್ 50 ರ ಅಡಿಯಲ್ಲಿ ನೀಡಲಾದ ಸಮನ್ಸ್‌ಗೆ ಪ್ರತಿಕ್ರಿಯಿಸಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯನ್ನು ಬಂಧಿಸುವುದು ಸರಿಯಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್​ ತಿಳಿಸಿದೆ.

2002ರ ಕಾಯಿದೆಯ ಸೆಕ್ಷನ್ 50 ರ ಅಡಿಯಲ್ಲಿ ನೀಡಲಾದ ಸಮನ್ಸ್‌ಗೆ ಸಾಕ್ಷಿಯ ಅಸಹಕಾರ ಎಂಬ ಕಾರಣವು ಸೆಕ್ಷನ್ 19 ರ ಅಡಿಯಲ್ಲಿ ಬಂಧಿಸಲು ಸಾಕಾಗುವುದಿಲ್ಲ ಎಂದು ಹೇಳಿದೆ.

ರಿಯಲ್ ಎಸ್ಟೇಟ್ ಗ್ರೂಪ್ ಎಂ3ಎಂ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಂಕಜ್ ಬನ್ಸಾಲ್ ಮತ್ತು ಬಸಂತ್ ಬನ್ಸಾಲ್ ಅವರ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸುವ ಸಂದರ್ಭದಲ್ಲಿ ನ್ಯಾಯಾಲಯವು ಈ ರೀತಿ ಹೇಳಿದೆ. ಇಡಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಆರೋಪಿಗಳು ವಿಫಲರಾಗಿದ್ದಾರೆ ಎನ್ನುವ ಮಾತ್ರಕ್ಕೆ ಅವರನ್ನು ಬಂಧಿಸುವಹಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮತ್ತಷ್ಟು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿಯ ಸಂಸದ ಸಂಜಯ್ ಸಿಂಗ್ ಮನೆ ಮೇಲೆ ಇಡಿ ದಾಳಿ

ಏಕೆಂದರೆ ಸೆಕ್ಷನ್ 19 ರ ಆದೇಶದ ಪ್ರಕಾರ, ಯಾವುದೇ ಪಿಎಂಎಲ್‌ಎ ಅಡಿಯಲ್ಲಿ ವ್ಯಕ್ತಿಯು ಅಪರಾಧಿ ಎಂದು ನಂಬಲು ಅಧಿಕಾರಿಗೆ ಸರಿಯಾದ ಸಾಕ್ಷ್ಯ ಅಥವಾ ಕಾರಣವಿದ್ದರೆ ಮಾತ್ರ ಬಂಧಿಸಬಹುದು ಎಂದು ನ್ಯಾಯಮೂರ್ತಿಗಳಾದ ಎಎಸ್​ ಬೋಪಣ್ಣ ಹಾಗೂ ಸಂಜಯ್​ ಕುಮಾರ್​ ಅವರನ್ನು ಒಳಗೊಂಡ ಪೀಠ ಹೇಳಿದೆ.

ಕಸ್ಟಡಿ ವಿಚಾರಣೆಯು ತಪ್ಪೊಪ್ಪಿಗೆ ಉದ್ದೇಶಕ್ಕಾಗಿ ಅಲ್ಲ ಎಂದು ನ್ಯಾಯಾಲಯ ಹೇಳಿದೆ. ಒಬ್ಬ ಆರೋಪಿ ತಪ್ಪೊಪ್ಪಿಗೆ ನೀಡದ ಕಾರಣ ಆತ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಹೇಳುವಂತಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us