AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Murder Case: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಡಿ.22ಕ್ಕೆ ಮುಂದೂಡಿಕೆ

ಶ್ರದ್ಧಾ ವಾಕರ್( Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್(Aftab) ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ.

Shraddha Murder Case: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಡಿ.22ಕ್ಕೆ ಮುಂದೂಡಿಕೆ
Shraddha
TV9 Web
| Edited By: |

Updated on:Dec 17, 2022 | 1:49 PM

Share

ಶ್ರದ್ಧಾ ವಾಕರ್( Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್(Aftab) ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗಿತ್ತು. ಆರೋಪಿ ಅಫ್ತಾಬ್ ಪೂನಾವಾಲಾ ದೆಹಲಿಯ ಮೆಹ್ರೌಲಿ ಹಾಗೂ ಗುರುಗ್ರಾಮದ ಕಾಡುಗಳಲ್ಲಿ ಪೊಲೀಸರನ್ನು ಕರೆದೊಯ್ದಾಗ ದೊರೆತಿರುವ ಮೂಳೆಗಳು ಶ್ರದ್ಧಾ ವಾಕರ್‌ದು ಎಂಬುದು ದೃಢವಾಗಿದೆ.

ಅಫ್ತಾಬ್ ಪೂನಾವಾಲಾ ಶ್ರದ್ಧಾ ಕೊಲೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಕಾಡುಗಳಲ್ಲಿ ಹೂತು ಹಾಕಿದ್ದ. ಈ ದೇಹದ ಭಾಗಗಳನ್ನು ತನಿಖೆಯ ವೇಳೆ ಪೊಲೀಸರು ಸಂಗ್ರಹಿಸಿದ್ದರು. ಅವುಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದಾಗ ಶ್ರದ್ಧಾ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎಗೆ ಹೋಲಿಕೆಯಾಗುತ್ತದೆ ಎಂಬುದು ಪರೀಕ್ಷಾ ವರದಿಯಲ್ಲಿ ತಿಳಿದುಬಂದಿದೆ.

ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಭೇಟಿಯಾದ ಅಫ್ತಾಬ್ ಹಾಗೂ ಶ್ರದ್ಧಾ ಇಬ್ಬರದ್ದೂ  ಬೇರೆ ಧರ್ಮ ಎಂಬ ಕಾರಣಕ್ಕೆ ಇಬ್ಬರ ಕುಟುಂಬದವರೂ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಜೋಡಿ ಮುಂಬೈನಿಂದ ದೆಹಲಿಗೆ ಸ್ಥಳಾಂತರಗೊಂಡು ಮೆಹ್ರೌಲಿಯ ಅಪಾರ್ಟ್ಮೆಂಟ್ ಒಂದರಲ್ಲಿ ಒಟ್ಟಿಗೆ ವಾಸವಿದ್ದರು.

ಇತ್ತೀಚೆಗೆ ಶ್ರದ್ಧಾ ಹಲವು ತಿಂಗಳುಗಳಿಂದ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ಆಕೆಯ ತಂದೆ ದೆಹಲಿಗೆ ತೆರಳಿ ಆಕೆಯ ಹುಡುಕಾಟ ನಡೆಸಿದ್ದರು. ಆದರೆ ಆಕೆಯ ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದರು. ಅಫ್ತಾಬ್ ಮೇ ತಿಂಗಳಿನಲ್ಲಿ ತನ್ನ ಗೆಳತಿ ಶ್ರದ್ಧಾ ವಾಕರ್ ಹತ್ಯೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಫ್ರಿಜ್‌ನಲ್ಲಿ ಸಂಗ್ರಹಿಸಿಟ್ಟಿದ್ದ. ಬಳಿಕ ದೇಹದ ತುಂಡುಗಳನ್ನು ಸುಮಾರು 18 ದಿನಗಳ ಕಾಲ ಒಂದೊಂದಾಗಿಯೇ ದೆಹಲಿಯಾದ್ಯಂತ ಕಾಡುಗಳಲ್ಲಿ ಹೂತು ಹಾಕಿದ್ದ.

ಕಳೆದ ಒಂದು ತಿಂಗಳ ಹಿಂದೆ ಶ್ರದ್ಧಾ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಫ್ತಾಬ್‌ನನ್ನು ಬಂಧಿಸಿದ್ದರು. ಬಳಿಕ ತನಿಖೆಯ ವೇಳೆ ಶ್ರದ್ಧಾ ಹತ್ಯೆಯ ಹಿಂದಿನ ಸತ್ಯವನ್ನು ಒಂದೊಂದಾಗಿಯೇ ಪೊಲೀಸರು ಬಯಲಿಗೆಳೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:48 pm, Sat, 17 December 22

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್