AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Murder Case: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಡಿ.22ಕ್ಕೆ ಮುಂದೂಡಿಕೆ

ಶ್ರದ್ಧಾ ವಾಕರ್( Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್(Aftab) ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ.

Shraddha Murder Case: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಡಿ.22ಕ್ಕೆ ಮುಂದೂಡಿಕೆ
Shraddha
Follow us
TV9 Web
| Updated By: ನಯನಾ ರಾಜೀವ್

Updated on:Dec 17, 2022 | 1:49 PM

ಶ್ರದ್ಧಾ ವಾಕರ್( Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್(Aftab) ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗಿತ್ತು. ಆರೋಪಿ ಅಫ್ತಾಬ್ ಪೂನಾವಾಲಾ ದೆಹಲಿಯ ಮೆಹ್ರೌಲಿ ಹಾಗೂ ಗುರುಗ್ರಾಮದ ಕಾಡುಗಳಲ್ಲಿ ಪೊಲೀಸರನ್ನು ಕರೆದೊಯ್ದಾಗ ದೊರೆತಿರುವ ಮೂಳೆಗಳು ಶ್ರದ್ಧಾ ವಾಕರ್‌ದು ಎಂಬುದು ದೃಢವಾಗಿದೆ.

ಅಫ್ತಾಬ್ ಪೂನಾವಾಲಾ ಶ್ರದ್ಧಾ ಕೊಲೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಕಾಡುಗಳಲ್ಲಿ ಹೂತು ಹಾಕಿದ್ದ. ಈ ದೇಹದ ಭಾಗಗಳನ್ನು ತನಿಖೆಯ ವೇಳೆ ಪೊಲೀಸರು ಸಂಗ್ರಹಿಸಿದ್ದರು. ಅವುಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದಾಗ ಶ್ರದ್ಧಾ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎಗೆ ಹೋಲಿಕೆಯಾಗುತ್ತದೆ ಎಂಬುದು ಪರೀಕ್ಷಾ ವರದಿಯಲ್ಲಿ ತಿಳಿದುಬಂದಿದೆ.

ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಭೇಟಿಯಾದ ಅಫ್ತಾಬ್ ಹಾಗೂ ಶ್ರದ್ಧಾ ಇಬ್ಬರದ್ದೂ  ಬೇರೆ ಧರ್ಮ ಎಂಬ ಕಾರಣಕ್ಕೆ ಇಬ್ಬರ ಕುಟುಂಬದವರೂ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಜೋಡಿ ಮುಂಬೈನಿಂದ ದೆಹಲಿಗೆ ಸ್ಥಳಾಂತರಗೊಂಡು ಮೆಹ್ರೌಲಿಯ ಅಪಾರ್ಟ್ಮೆಂಟ್ ಒಂದರಲ್ಲಿ ಒಟ್ಟಿಗೆ ವಾಸವಿದ್ದರು.

ಇತ್ತೀಚೆಗೆ ಶ್ರದ್ಧಾ ಹಲವು ತಿಂಗಳುಗಳಿಂದ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ಆಕೆಯ ತಂದೆ ದೆಹಲಿಗೆ ತೆರಳಿ ಆಕೆಯ ಹುಡುಕಾಟ ನಡೆಸಿದ್ದರು. ಆದರೆ ಆಕೆಯ ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದರು. ಅಫ್ತಾಬ್ ಮೇ ತಿಂಗಳಿನಲ್ಲಿ ತನ್ನ ಗೆಳತಿ ಶ್ರದ್ಧಾ ವಾಕರ್ ಹತ್ಯೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಫ್ರಿಜ್‌ನಲ್ಲಿ ಸಂಗ್ರಹಿಸಿಟ್ಟಿದ್ದ. ಬಳಿಕ ದೇಹದ ತುಂಡುಗಳನ್ನು ಸುಮಾರು 18 ದಿನಗಳ ಕಾಲ ಒಂದೊಂದಾಗಿಯೇ ದೆಹಲಿಯಾದ್ಯಂತ ಕಾಡುಗಳಲ್ಲಿ ಹೂತು ಹಾಕಿದ್ದ.

ಕಳೆದ ಒಂದು ತಿಂಗಳ ಹಿಂದೆ ಶ್ರದ್ಧಾ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಫ್ತಾಬ್‌ನನ್ನು ಬಂಧಿಸಿದ್ದರು. ಬಳಿಕ ತನಿಖೆಯ ವೇಳೆ ಶ್ರದ್ಧಾ ಹತ್ಯೆಯ ಹಿಂದಿನ ಸತ್ಯವನ್ನು ಒಂದೊಂದಾಗಿಯೇ ಪೊಲೀಸರು ಬಯಲಿಗೆಳೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:48 pm, Sat, 17 December 22

ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ