AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Murder Case: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಡಿ.22ಕ್ಕೆ ಮುಂದೂಡಿಕೆ

ಶ್ರದ್ಧಾ ವಾಕರ್( Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್(Aftab) ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ.

Shraddha Murder Case: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಡಿ.22ಕ್ಕೆ ಮುಂದೂಡಿಕೆ
Shraddha
TV9 Web
| Edited By: |

Updated on:Dec 17, 2022 | 1:49 PM

Share

ಶ್ರದ್ಧಾ ವಾಕರ್( Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್(Aftab) ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗಿತ್ತು. ಆರೋಪಿ ಅಫ್ತಾಬ್ ಪೂನಾವಾಲಾ ದೆಹಲಿಯ ಮೆಹ್ರೌಲಿ ಹಾಗೂ ಗುರುಗ್ರಾಮದ ಕಾಡುಗಳಲ್ಲಿ ಪೊಲೀಸರನ್ನು ಕರೆದೊಯ್ದಾಗ ದೊರೆತಿರುವ ಮೂಳೆಗಳು ಶ್ರದ್ಧಾ ವಾಕರ್‌ದು ಎಂಬುದು ದೃಢವಾಗಿದೆ.

ಅಫ್ತಾಬ್ ಪೂನಾವಾಲಾ ಶ್ರದ್ಧಾ ಕೊಲೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಕಾಡುಗಳಲ್ಲಿ ಹೂತು ಹಾಕಿದ್ದ. ಈ ದೇಹದ ಭಾಗಗಳನ್ನು ತನಿಖೆಯ ವೇಳೆ ಪೊಲೀಸರು ಸಂಗ್ರಹಿಸಿದ್ದರು. ಅವುಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದಾಗ ಶ್ರದ್ಧಾ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎಗೆ ಹೋಲಿಕೆಯಾಗುತ್ತದೆ ಎಂಬುದು ಪರೀಕ್ಷಾ ವರದಿಯಲ್ಲಿ ತಿಳಿದುಬಂದಿದೆ.

ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಭೇಟಿಯಾದ ಅಫ್ತಾಬ್ ಹಾಗೂ ಶ್ರದ್ಧಾ ಇಬ್ಬರದ್ದೂ  ಬೇರೆ ಧರ್ಮ ಎಂಬ ಕಾರಣಕ್ಕೆ ಇಬ್ಬರ ಕುಟುಂಬದವರೂ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಜೋಡಿ ಮುಂಬೈನಿಂದ ದೆಹಲಿಗೆ ಸ್ಥಳಾಂತರಗೊಂಡು ಮೆಹ್ರೌಲಿಯ ಅಪಾರ್ಟ್ಮೆಂಟ್ ಒಂದರಲ್ಲಿ ಒಟ್ಟಿಗೆ ವಾಸವಿದ್ದರು.

ಇತ್ತೀಚೆಗೆ ಶ್ರದ್ಧಾ ಹಲವು ತಿಂಗಳುಗಳಿಂದ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ಆಕೆಯ ತಂದೆ ದೆಹಲಿಗೆ ತೆರಳಿ ಆಕೆಯ ಹುಡುಕಾಟ ನಡೆಸಿದ್ದರು. ಆದರೆ ಆಕೆಯ ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದರು. ಅಫ್ತಾಬ್ ಮೇ ತಿಂಗಳಿನಲ್ಲಿ ತನ್ನ ಗೆಳತಿ ಶ್ರದ್ಧಾ ವಾಕರ್ ಹತ್ಯೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಫ್ರಿಜ್‌ನಲ್ಲಿ ಸಂಗ್ರಹಿಸಿಟ್ಟಿದ್ದ. ಬಳಿಕ ದೇಹದ ತುಂಡುಗಳನ್ನು ಸುಮಾರು 18 ದಿನಗಳ ಕಾಲ ಒಂದೊಂದಾಗಿಯೇ ದೆಹಲಿಯಾದ್ಯಂತ ಕಾಡುಗಳಲ್ಲಿ ಹೂತು ಹಾಕಿದ್ದ.

ಕಳೆದ ಒಂದು ತಿಂಗಳ ಹಿಂದೆ ಶ್ರದ್ಧಾ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಫ್ತಾಬ್‌ನನ್ನು ಬಂಧಿಸಿದ್ದರು. ಬಳಿಕ ತನಿಖೆಯ ವೇಳೆ ಶ್ರದ್ಧಾ ಹತ್ಯೆಯ ಹಿಂದಿನ ಸತ್ಯವನ್ನು ಒಂದೊಂದಾಗಿಯೇ ಪೊಲೀಸರು ಬಯಲಿಗೆಳೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:48 pm, Sat, 17 December 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ