AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Walker: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ, ಆಫ್ತಾಬ್ ಪೂನಾವಾಲಾ ವಿರುದ್ಧ ದೆಹಲಿ ಕೋರ್ಟ್ ಇಂದು ಆದೇಶ ನೀಡುವ ಸಾಧ್ಯತೆ

ದೆಹಲಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಇಂದು (ಏ.29) ದೆಹಲಿ ನ್ಯಾಯಾಲಯವು ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ .

Shraddha Walker: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ, ಆಫ್ತಾಬ್ ಪೂನಾವಾಲಾ ವಿರುದ್ಧ ದೆಹಲಿ ಕೋರ್ಟ್ ಇಂದು ಆದೇಶ ನೀಡುವ ಸಾಧ್ಯತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Apr 29, 2023 | 12:10 PM

Share

ದೆಹಲಿ: ಭಾರತವನ್ನೇ ಬೆಚ್ಚಿಬಿಳಿಸಿದ ದೆಹಲಿ ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿವ್-ಇನ್ ಪಾಲುದಾರ ಹಾಗೂ ಶ್ರದ್ಧಾ ವಾಕರ್​​ನ್ನು ಕೊಂದು, ದೇಹದ ತುಂಡುಗಳನ್ನು ಫ್ರಿಜ್​​ನಲ್ಲಿಟ್ಟ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಇಂದು (ಏ.29) ದೆಹಲಿ ನ್ಯಾಯಾಲಯವು ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ . ಪೊಲೀಸರ ವಿಶೇಷ ಕಾರ್ಯಚರಣೆ ಮೂಲಕ ಆಕೆ ದೇಹದ ಭಾಗಗಳನ್ನು ಪತ್ತೆ ಮಾಡಿದ್ದು, ಇದೀಗ ಕುಟುಂಬದವರು ಸಂಪ್ರದಾಯ ಮತ್ತು ಸಂಸ್ಕೃತಿಗೆ ಅನುಗುಣವಾಗಿ ಅಂತಿಮ ವಿಧಿವಿಧಾನಗಳಿಗಾಗಿ ಆಕೆಯ ಅಸ್ಥಿಯನ್ನು ನಮಗೆ ಹಸ್ತಾಂತರಿಸಬೇಕೆಂದು ಒತ್ತಾಯಿಸಿ ವಾಕರ್ ಅವರ ತಂದೆ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಗೆ ದೆಹಲಿ ಪೊಲೀಸರು ನಾಳೆ (ಏ.30) ಉತ್ತರವನ್ನು ಸಲ್ಲಿಸಲಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನಿಷಾ ಖುರಾನಾ ಕಕ್ಕರ್ ಅವರು ಪ್ರಾಸಿಕ್ಯೂಷನ್ ವಕೀಲರು ಮತ್ತು ಆರೋಪಿ ವಿರುದ್ಧ ಸಲ್ಲಿಸಿರುವ ಆರೋಪಗಳ ಕುರಿತು ವಾದಗಳನ್ನು ಆಲಿಸಿದ ನಂತರ ಏಪ್ರಿಲ್ 15ರಂದು ಆದೇಶವನ್ನು ಕಾಯ್ದಿರಿಸಿದರು.

ಏಪ್ರಿಲ್ 15 ರಂದು ತನಿಖಾ ಸಂಸ್ಥೆಯು ವಾಕರ್ ಅವರ ತಂದೆಯ ಅರ್ಜಿಗೆ ಉತ್ತರವನ್ನು ಸಲ್ಲಿಸಲು ಸಮಯ ಕೋರಿತ್ತು. ಪೂನಾವಾಲಾ ವಿರುದ್ಧ ದೆಹಲಿ ಪೊಲೀಸರು ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 201 (ಅಪರಾಧದ ಸಾಕ್ಷ್ಯಾಧಾರ ಕಣ್ಮರೆಯಾಗಲು ಕಾರಣ) ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ:Shraddha Walker Murder Case: ಶ್ರದ್ಧಾ ವಾಕರ್​​ ಸ್ನೇಹಿತರೊಬ್ಬರನ್ನು ಭೇಟಿ ಮಾಡಿದ್ದಕ್ಕೆ ರೊಚ್ಚಿಗೆದ್ದಿದ್ದ ಅಫ್ತಾಬ್ ಪೂನಾವಾಲಾ

ದೆಹಲಿ ಪೊಲೀಸರು ಜನವರಿ 24 ರಂದು ಪ್ರಕರಣದಲ್ಲಿ 6,629 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕಳೆದ ವರ್ಷ ಮೇ 18 ರಂದು ವಾಕರ್ ಅವರನ್ನು ಪೂನಾವಾಲಾ ಕತ್ತು ಹಿಸುಕಿ ಹತ್ಯೆಗೈದರು, ನಂತರ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಆತನ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿ ಇರಿಸಿದ್ದ.

ಇದರಿಂದ ತಪ್ಪಿಸಿಕೊಳ್ಳಲು ಮತ್ತು ಯಾರಿಗೂ ಅನುಮಾನ ಬರದಂತೆ ಫ್ರಿಡ್ಜ್‌ನಲ್ಲಿ ಇಟ್ಟಿದ್ದ ಆಕೆಯ ದೇಹದ ತುಂಡುಗಳನ್ನು ದೆಹಲಿಯ ಬೇರೆ ಬೇರೆ ಸ್ಥಳಗಳಲ್ಲಿ ಎಸೆದಿದ್ದಾನೆ ಎಂದು ಹೇಳಲಾಗಿತ್ತು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಇಂದು ತೀರ್ಪು ನೀಡಬಹುದು ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ